ಶಿವಮೊಗ್ಗ : ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಇದೇ ನೀರಾನೆ ಮಾರ್ಚ್ 19ರಂದು ಮೃಗಾಲಯದ ಪಶುವೈದ್ಯ ತರಬೇತಿ ವಿದ್ಯಾರ್ಥಿನಿ ಸಮೀಕ್ಷಾ ರೆಡ್ಡಿ (27) ಅವರ ಸಾವಿಗೆ ಕಾರಣವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) … Continued

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್‌ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ಏಪ್ರಿಲ್ 13 ರಂದು ಹೊರಡಿಸಲಾದ … Continued

ಕೆಯುಡಬ್ಲ್ಯುಜೆ ರಾಜ್ಯ ಸಮಿತಿಗೆ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನ

ಹುಬ್ಬಳ್ಳಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ( ಕೆಯುಡಬ್ಲ್ಯುಜೆ) ರಾಜ್ಯ ಕಾರ್ಯಕಾರಿ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನಗೊಂಡಿದ್ದಾರೆ. ಏಪ್ರಿಲ್‌ 12ರಂದು ಬೀದರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಈ ನಾಮನಿರ್ದೇಶನ ಮಾಡಿದ್ದಾರೆ. ಹುಬ್ಬಳ್ಳಿ ಸಂಜೆ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಗಂಗೊಳ್ಳಿಯವರು ಈ ಹಿಂದೆ … Continued

ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

ದಾವಣಗೆರೆ : ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಖ್ಯಾತ ಯೋಗಗುರು ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂದು, ಸೋಮವಾರ ಮಠದಲ್ಲಿ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 12 ಟ್ರಸ್ಟಿಗಳು … Continued

ಹಬ್ಬು ಸಮುದಾಯ ಒಂದು ಜನಾಂಗೀಯ ಅಧ್ಯಯನ ಕೃತಿ ಬಿಡುಗಡೆ

ಕಾರವಾರ: ಅನ್ನ ಹಾಗೂ ಅಕ್ಷರ ತೋರಿಸಿದ ಹಬ್ಬು ಬ್ರಾಹ್ಮಣರ ಕುರಿತು ಎಲ್ಲ ದಾಖಲೆ ಪರಿಶೀಲಿಸಿ ನಮ್ಮಲ್ಲಿ ಯಾವುದೆ ಗೊಂದಲ ಇರದ ಹಾಗೆ ಆರ್.ಎಸ್. ಹಬ್ಬು ಕೃತಿ ನೀಡಿದ್ದಾರೆ ಎಂದು ಪರಿಸರ ತಜ್ಞ ಶಿವಾನಂದ ಕಳವೆ ಅಭಿಪ್ರಾಯಪಟ್ಟರು. ನಗರದ ರಾಘವೇಂದ್ರ ಮಠದ ಸಭಾಭವನದಲ್ಲಿ ಆರ್.ಎಸ್.ಹಬ್ಬು ಅವರ ʼಹಬ್ಬು ಸಮುದಾಯʼ ಒಂದು ಜನಾಂಗೀಯ ಅಧ್ಯಯನ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ … Continued

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರದ ನಂತರ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಂಗೀಕರಿಸಿದ್ದಾರೆ. ಅಲ್ಲದೆ, ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ … Continued

ವಿಡಿಯೋ | ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ಗಳಗಳನೆ ಅತ್ತ ನಟಿ ರಮ್ಯಾ..

ಬೆಂಗಳೂರು: ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದ ಕಗ್ಗದಾಸಪುರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ (Brutality on street dogs) ನಡೆದಿತ್ತು. ಈ ಕ್ರಮವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಣಿಪ್ರಿಯರಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಶ್ವಾನಗಳ ಮೇಲೆ … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued

ಕಾಂಗ್ರೆಸ್‌ನಲ್ಲಿ ಬೆಳವಣಿಗೆ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ರಾಜಕೀಯ ಬೆಳವಣಿಗೆ ನಡೆದಿದ್ದು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ (MLC Abdul Jabbar) ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ದಾವಣೆಗೆರೆ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಹಾಗೂ ಆಂತರಿಕ ಬೆಳವಣಿಗೆಗಳ ಕುರಿತಾದ … Continued

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ  ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ  ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ … Continued