ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಮಂದಿಗೆ ಗಾಯ

ದಾವಣಗೆರೆ: ರಂಜಾನ್ ಹಬ್ಬದ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಆನಗೋಡು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಗೋಡು ಗ್ರಾಮದ ಈದ್ಗಾ ಮೈದಾನದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನುಗಳ ಗುಂಪು ದಾಳಿ ನಡೆಸಿದೆ. ಇದರಿಂದ ಪ್ರಾರ್ಥನೆಗೆ … Continued

ಯಾದಗಿರಿ: ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಕ…!

ಯಾದಗಿರಿ: ಜಿಲ್ಲೆಯ ಸೈದಾಪುರದಲ್ಲಿ ಅಸಾಮಾನ್ಯ ಘಟನೆ ಬೆಳಕಿಗೆ ಬಂದಿದೆ. ವಜಾಗೊಂಡಿದ್ದ ಕೆಕೆಆರ್‌ಟಿಸಿ ಚಾಲಕನೊಬ್ಬ ಬಸ್‌ ಕಳ್ಳತನ ಮಾಡಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್‌ ಅನ್ನು ಕಳ್ಳತನ ಮಾಡಿರುವುದು ಸಿಸಿಟಿವಿ ದೃಶ್ಯಗಳಿಂದ ಬಹಿರಂಗವಾಗಿದೆ. ಕಳೆದ ಮಾರ್ಚ್ 19ರಂದು ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ ಅನ್ನು ಮಹಿಪಾಲ ಎಂಬ ವ್ಯಕ್ತಿ ಕಳವು … Continued

ಯಕ್ಷಗಾನದ ಮೇರು ಕಲಾವಿದ ಗೋವಿಂದ ಭಟ್‌ ಇನ್ನಿಲ್ಲ

ಮಂಗಳೂರು :  ತೆಂಕುತಿಟ್ಟು ಶೈಲಿಯ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ. ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೆದ್ದೂರಿನ ತಮ್ಮ  ಪುತ್ರನ‌ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು … Continued

ಇರಾನ್‌ ಯುದ್ಧ : ಪ್ರೀಮಿಯಂ ದರ್ಜೆಯ ಪೆಟ್ರೋಲ್ ದರ ಹೆಚ್ಚಳ

ನವದೆಹಲಿ: ದೇಶಾದ್ಯಂತ ಪ್ರೀಮಿಯಂ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಸುಮಾರು 2 ರಿಂದ 2.3 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಆದರೆ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಏರಿಕೆ ಮಾಡಲಾಗಿಲ್ಲ. ಆಯ್ದ ನಗರಗಳ ಡೀಲರ್‌ಗಳ ಮಾಹಿತಿಯ ಪ್ರಕಾರ, ಇಂಡಿಯನ್ ಆಯಿಲ್‌ನ XP95 ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನ ಪವರ್ (Power) ನಂತಹ ಹೈ-ಆಕ್ಟೇನ್ ಇಂಧನಗಳಿಗೆ ಈ … Continued

ದಾವಣಗೆರೆ ದಕ್ಷಿಣ ಕ್ಷೇತ್ರ ; ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮೊದಲೇ ನಾಮಪತ್ರ ಸಲ್ಲಿಸಿದ ಶಾಮನೂರು ಮೊಮ್ಮಗ…!

ದಾವಣಗೆರೆ: ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಎದುರಾಗಿದೆ. ಹಲವಾರು ಆಕಾಂಕ್ಷಿಗಳು ಟಿಕೆಟಿಗಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ಸಿಗೆ ಟಿಕೆಟ್‌ ನೀಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಂಪತಿಯ ಪುತ್ರ … Continued

ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂಬವರು ನೀರಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ … Continued

ಹುಬ್ಬಳ್ಳಿ : ‘ರೀಲ್ಸ್‌’ಗಾಗಿ ಆಡಿ ಕಾರು-ಬೈಕ್ ಸ್ಟಂಟ್; ಬಿಜೆಪಿ ಮುಖಂಡನ ಮಗ ಸಾವು

ಹುಬ್ಬಳ್ಳಿ: ಕ್ರ್ಯಾಶ್ ರೀಲ್ಸ್‌ ವಿಡಿಯೋ (Reels) ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಗುರುವಾರ ಮೃತಪಟ್ಟಿದ್ದಾನೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ ಸಂಗಳದ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ (Hubballi news) ಮನೆಗೆ ಬಂದಿದ್ದ ನಮೀಷ ಗುರುವಾರ ಸಂಜೆ ತನ್ನ ಸ್ನೇಹಿತನ ಜೊತೆ ಸೇರಿ ಶೇಜವಾಡ್ಕರ ಪ್ಲಾಟ್‌ಗೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ  ಮೂರ್ನಾಲ್ಕುದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಾರ್ಚ್‌ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ … Continued

ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಇಂದು (ಮಾರ್ಚ್‌ 19) ಯುಗಾದಿ ಹಬ್ಬದ ದಿನವೇ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ … Continued

ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಕೋಲಾರ : ಬುಧವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನಲ್ಲಿ ಅಪಘಾತದಲ್ಲಿ ಕಾರು ಮುರಿತಕ್ಕೆ ಒಳಗಾದ ವಿದ್ಯಾರ್ಥಿನಿಯೊಬ್ಬರು ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆ ಪರೀಕ್ಷೆ ಬರೆದಿರುವುದು ವರದಿಯಾಗಿದೆ. ಕೆಜಿಎಫ್ ತಾಲೂಕಿನ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ಕುಸುಮಾ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಹಾಸಿಗೆಯ ಮೇಲೆ ಪರೀಕ್ಷೆ ಬರೆದಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ … Continued