ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. … Continued

ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ. ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ. ಹವ್ಯಕ ಭಾಷೆ ಅಥವಾ … Continued

2026ರ ಕರ್ನಾಟಕ ಬಜೆಟ್‌ ಹೈಲೈಟ್ಸ್‌

  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್‌ ಗಾತ್ರ ಹೆಚ್ಚಾಗಿದ್ದರೂ, ಆರ್ಥಿಕವಾಗಿ ದೊಡ್ಡ ಮಟ್ಟದ ಸಾಲದ ಹೊರೆಯೂ ಬೀಳಲಿದೆ.  ಸಿದ್ದರಾಮಯ್ಯ ಅವರು 4,48,004 ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಬಜೆಟ್ ಮಂಡಿಸಿದರೂ ಇದು 22,957 ಕೋಟಿ ರೂಪಾಯಿಗಳ ಕೊರತೆ ಬಜೆಟ್‌ ಆಗಿದೆ. ಇದೇ ವೇಳೆ 1,32,190 ಕೋಟಿ … Continued

2026ರ ಕರ್ನಾಟಕ ಬಜೆಟ್‌ | 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು,  ಮೊಬೈಲ್‌ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು … Continued

ನೇತ್ರಾವತಿ ನದಿ ತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯ 10 ನೇ ಮೈಲ್‌ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ವರದಿಗಳ ಪ್ರಕಾರ, ಮಂಗಳವಾರ ಸಂಜೆ, ಸ್ಥಳೀಯ ನಿವಾಸಿಯೊಬ್ಬರು ನದಿ ದಂಡೆಯಲ್ಲಿ ನೀರಿನಲ್ಲಿ ಹಲವಾರು ಆಧಾರ್ ಕಾರ್ಡ್‌ಗಳು ತೇಲುತ್ತಿರುವುದನ್ನು ಕಂಡು ತಕ್ಷಣ ಗ್ರಾಮ ಪಂಚಾಯತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Continued

ಶಿರಸಿ : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ

ಶಿರಸಿ: ಯುವಕನೋರ್ವ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರವೀಶ ನಾಯ್ಕ (22) ಎಂದು ಗುರುತಿಸಲಾಗಿದೆ.  ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು ಮದ್ಯ ವ್ಯಸನಿಯಾಗಿದ್ದರು ಎನ್ನಲಾಗಿದೆ. ಮಂಗಳವಾರ ತನ್ನ ಮನೆಯ ಪಕ್ಕದಲ್ಲಿರುವ … Continued

ಬೆಂಗಳೂರು : ಅಪಾರ್ಟ್‌ಮೆಂಟಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; ಇಬ್ಬರ ಬಂಧನ

ಬೆಂಗಳೂರು : ಬೆಂಗಳೂರು ನಗರ ಸಿಸಿಬಿ (CCB)ಯ ಮಾದಕ ದ್ರವ್ಯ ನಿರೋಧಕ ದಳದ ಅಧಿಕಾರಿಗಳು ಮಂಗಳವಾರ ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ‘ಪ್ರೆಸ್ಟೀಜ್ ಪ್ಯಾನ್ಸ್‌ಬರಿ ಹೈಟ್ಸ್’ ಅಪಾರ್ಟ್‌ಮೆಂಟ್ ನಿವಾಸಿಗಳಾದ ಅಶ್ವಿನ್ … Continued

ಕಾರವಾರ : ಸಚಿವ-ಶಾಸಕರ ನಡುವೆ ವಾಗ್ವಾದ ; ಕೆಡಿಪಿ ಸಭೆಯಿಂದ ಹೊರನಡೆದ ಸತೀಶ ಸೈಲ್

ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಕಾಂಗ್ರೆಸ್‌ ಶಾಸಕ ಸತೀಶ ಸೈಲ್ ನಡುವೆ ನಡೆದ ವಾಗ್ವಾದ ನಡೆದು, ಸೈಲ್ ಸಭೆಯ ಮಧ್ಯದಲ್ಲೇ ಹೊರನಡೆದ ಘಟನೆ ನಡೆದಿದೆ. ಇಬ್ಬರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂಬುದು ಗಮನಿಸಬೇಕಾದ ಸಂಗತಿ. ಜಿಲ್ಲಾ ಉಸ್ತುವಾರಿ … Continued

ಬೆಂಗಳೂರು | ಲಿವ್-ಇನ್ ಸಂಗಾತಿ ಕೊಲೆ ಪ್ರಕರಣ ; ನಟಿ ಸೇರಿ ಮೂವರ ಬಂಧನ

 ಬೆಂಗಳೂರು: ಬೆಂಗಳೂರಿನ ಮಂಜುನಾಥನಗರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯಕರನ ಜೊತೆ ಸೇರಿ ತನ್ನ ಲಿವ್-ಇನ್ ಸಂಗಾತಿಯನ್ನೇ ಕಿರುತೆರೆ ನಟಿಯೊಬ್ಬಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಫೆಬ್ರವರಿ 18 ರಂದು ನಡೆದಿದ್ದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗ ನಟಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ … Continued

ಅಂಕೋಲಾ : ಸುಂಕಸಾಳ ಬ್ಯಾಂಕ್‌ ದರೋಡೆ ಯತ್ನ ಪ್ರಕರಣ ; ಐವರ ಬಂಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ದರೋಡೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.  ಸುಂಕಸಾಳದ ರಾಷ್ಟ್ರೀಯ ಹೆದ್ದಾರಿ 52 ರ ಪಕ್ಕದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗಿ ದರೋಡೆಗೆ ಯತ್ನ ನಡೆಸಲಾಗಿತ್ತು. ಆರೋಪಿತರು … Continued