ಕೈಗಾ ಅಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ಕಾಮಗಾರಿಗೆ ಚಾಲನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ನಿರ್ಮಾಣದ ಪ್ರಮುಖ ಹಂತವಾದ ‘ಕಾಂಕ್ರೀಟಿಂಗ್’ ಕಾರ್ಯಕ್ಕೆ ಭಾರತೀಯ ಅಣುಶಕ್ತಿ ಆಯೋಗದ ಅಧ್ಯಕ್ಷ ಅಜಿತಕುಮಾರ ಮೊಹಾಂತಿ ಭಾನುವಾರ ಅಧಿಕೃತವಾಗಿ ಚಾಲನೆ ನೀಡಿದರು. ದೇಶೀಯ ತಂತ್ರಜ್ಞಾನದ PHW (Pressurised Heavy Water) ಮಾದರಿಯ ರಿಯಾಕ್ಟರ್‌ಗಳನ್ನು ಇಲ್ಲಿ ಬಳಸಲಾಗುತ್ತಿದೆ. ಈ ತಂತ್ರಜ್ಞಾನದ … Continued

ಶಿಗ್ಗಾಂವಿ ಬಳಿ ಅಪಘಾತ; ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇತ್ತೀಚೆಗಷ್ಟೇ ವಿವಾಹವಾಗಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿ ಸಮೀಪದ ಅಂಬುಜಾ ಫ್ಯಾಕ್ಟರಿ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ … Continued

ವೀಡಿಯೊ..| ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಶಿವಮೊಗ್ಗ : ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾದ ಘಟನೆ ಇಂದು ಹುಲಿಕಲ್ ಘಾಟಿಯ ಫಾಲ್ಸ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಕುಂದಾಪುರ-ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಹೋಗುತ್ತಿದ್ದಾಗ ತೀವ್ರ ತಿರುವುಗಳಿರುವ … Continued

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಮೊದಲು ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಳಗಾವಿ : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ  (17) ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆಯಲು ತೆರಳುವ ಸಲುವಾಗಿ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು … Continued

ಭಾರ್ಗವಿ ಎಲ್‌ಎಲ್‌ಬಿ’ ಖ್ಯಾತಿಯ ರಾಧಾ ಭಗವತಿ – ನಟ ರಾಣವ್ ಗೌಡ ಎಂಗೇಜ್‌ಮೆಂಟ್‌….

ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾರ್ಗವಿ ಎಲ್‌ಎಲ್‌ಬಿ’ ಧಾರಾವಾಹಿಯ ಕಥಾನಾಯಕಿ ಭಾರ್ಗವಿ ಪಾತ್ರದ ನಟಿ ರಾಧಾ ಭಗವತಿ ಹಾಗೂ ಹಾಗೂ ಅಮೃತಧಾರೆ’ ಖ್ಯಾತಿಯ ಕಿರುತೆರೆ ನಟ ರಾಣವ್ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ‘ಅಮೃತಧಾರೆ’ ಸೀರಿಯಲ್‌ನಲ್ಲಿ ಜೆಡಿ ಪಾತ್ರದಲ್ಲಿ ರಾಣವ ಗೌಡ ಅನಟಿಸಿದ್ದಾರೆ.. ಈ ಹಿಂದೆ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಜೆಡಿ ಪತ್ನಿ ಮಲ್ಲಿಯಾಗಿ … Continued

ವೀಡಿಯೊ..| ರಣಜಿ ಫೈನಲ್‌ ನಲ್ಲಿ ಜಮ್ಮು-ಕಾಶ್ಮೀರ ತಂಡಕ್ಕೆ ಹುರಿದುಂಬಿಸಲು ಹುಬ್ಬಳ್ಳಿಗೆ ಬಂದ ಸಿಎಂ ಓಮರ್ ಅಬ್ದುಲ್ಲಾ…!

ಹುಬ್ಬಳ್ಳಿ : ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡಗಳ ನಡುವೆ ಇಲ್ಲಿನ ಕೆ.ಎಸ್.ಸಿ.ಎ (KSCA) ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿದ್ದು, ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ … Continued

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ನಾಳೆ (ಫೆ.28)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾ.17ರ ವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ … Continued

ಕುಂದಾಪುರ : ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

ಕುಂದಾಪುರ : ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ ಎಂದು ವರದಿಯಾಗಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಐವರು ಮೀನುಗಾರರನ್ನು ಮತ್ತೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಪ್ರಕಾಶ, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಎಂಬವರನ್ನು ರಕ್ಷಿಸಲಾಗಿದೆ. ಫೆ.23ರ ರಾತ್ರಿ … Continued

ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued