ವೀಡಿಯೊ..| ಬೆಂಗಳೂರು : ಬೆಂಕಿ ಹೊತ್ತಿಕೊಂಡು ಉರಿದ ಖಾಸಗಿ ಬಸ್‌

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್​ ದುರಂತ ಸಂಭವಿಸಿದೆ. ಮಹಾನಗರದ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಬಳಿ ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಮ್ಮೆಗೆ ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. ಈ ಘಟನೆ ಇಂದು, ಬುಧವಾರ 10:20ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಹತ್ತಿಕೊಂಡಾಗ ಬಸ್‌ನಲ್ಲಿ … Continued

ಪ್ರೇಮಿಗಳ ದಿನ : ಗುಲಾಬಿ ರಫ್ತಿನಲ್ಲಿ ಬೆಂಗಳೂರು ಏರ್‌ಪೋರ್ಟ್ ದಾಖಲೆ…!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಈ ಬಾರಿಯ ವ್ಯಾಲೆಂಟೈನ್ಸ್ ಸೀಸನ್‌ನಲ್ಲಿ ಗುಲಾಬಿ ರಫ್ತಿನಲ್ಲಿ ಭರ್ಜರಿ ಸಾಧನೆ ಮಾಡಿದೆ. ಸುಮಾರು 6 ಕೋಟಿ (60 ಮಿಲಿಯನ್) ಗುಲಾಬಿ ಹೂವುಗಳನ್ನು ವಿಶ್ವದ 26 ದೇಶಗಳಿಗೆ ರವಾನಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಒಟ್ಟು … Continued

ಕಾರವಾರ : ಸಮುದ್ರ ಸ್ನಾನ ಮಾಡುವಾಗ ಮುಳುಗಿ ಬಾಲಕ ಸಾವು

ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಗಾಂವಗೇರಿಯ ಯಶ್ (17) ಎಂಬಾತ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಶಿವರಾತ್ರಿ ಹಿನ್ನೆಲೆಯನ್ನು ಮಾಜಾಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರುದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು … Continued

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳ:  ಗಂಗಾವತಿಯ ಒಂದೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು  ಇಸ್ರೇಲಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಓರ್ವ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸೋಮವಾರ ಮರಣದಂಡನೆ ವಿಧಿಸಿದೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬುವವರೇ ಮರಣದಂಡನೆಗೆ ಗುರಿಯಾದ ಅಪರಾಧಿಗಳು. ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದಿದ್ದ … Continued

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್‌ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿದೆ. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಸಿ ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ … Continued

ಶಿರಸಿ: ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಶಿವರಾಮ ಹೆಬ್ಬಾರ ಅವಿರೋಧ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತವಾಗಿ ಎರಡನೇ ಬಾರಿಗೆ ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ನವದೆಹಲಿ: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವಿದ್ಯಾರ್ಥಿಯನ್ನು ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ಎಂದು ಗುರುತಿಸಲಾಗಿದೆ. ಇವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ (ಬರ್ಕ್ಲಿ) ಕೆಮಿಕಲ್ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಫೆಬ್ರವರಿ 9 ರಿಂದ ನಾಪತ್ತೆಯಾಗಿದ್ದರು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸವು ಪೊಲೀಸರು … Continued

ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ … Continued

ಶಿರಸಿ : ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ ಉದ್ಘಾಟನೆ

ಶಿರಸಿ: ಉದ್ಯಮಿಗಳಿಗಾಗಿ ವಿಶೇಷವಾಗಿ ಆಯೋಜಿಸಲಾದ ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಕುರಿತು ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ (MDP) ಫೆ.13 ರಂದು ಶಿರಸಿಯ ಕದಂಬ ಆರ್ಗಾನಿಕ್ ಪಾಯಿಂಟ್‌ನಲ್ಲಿ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಎಂಎಸ್‌ಎಂಇ (MSME) ಅಭಿವೃದ್ಧಿ ಮತ್ತು ಸೌಲಭ್ಯ ಕೇಂದ್ರವು ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಹಾಗೂ ನೆಲಸಿರಿ ರೈತ ಉತ್ಪಾದಕ ಕಂಪನಿಯ ಸಹಯೋಗದಲ್ಲಿ … Continued

ನದಿ ಜೋಡಣೆಗೆ ವಿರೋಧ ; ಮಾಜಿ ಸಚಿವ ದೇಶಪಾಂಡೆಗೆ ಮನವಿ ಸಲ್ಲಿಸಿದ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಿಯೋಗ

ಶಿರಸಿ: “ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕಾಳಿ, ಶರಾವತಿ, ಸೀಬರ್ಡ್ ಹಾಗೂ ಕೈಗಾದಂತಹ ಬೃಹತ್ ಯೋಜನೆಗಳ ಭಾರದಿಂದ ತನ್ನ ಧಾರಣ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮತ್ತೆ ಹೊಸ ನದಿ ತಿರುವು ಯೋಜನೆಗಳನ್ನು ಹೇರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ (ಫೆ. 14) ಶಿರಸಿಯಲ್ಲಿ ತಮ್ಮನ್ನು … Continued