ಕೇರಳ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ: ಕೇರಳ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕರ್ನಾಟಕದ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಮೊದಲ ಭಾಷೆಯನ್ನಾಗಿ ಮಾಡುವ ಕೇರಳ ಸರ್ಕಾರದ ಕ್ರಮಕ್ಕೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಮಲಯಾಳಂ ಭಾಷಾ ವಿಧೇಯಕ-2025ರ ಅನ್ವಯ 1ರಿಂದ 10ನೇ ತರಗತಿಯವರೆಗೆ ಮಲಯಾಳಂ ಅನ್ನು ಮೊದಲ ಭಾಷೆಯನ್ನಾಗಿ ಕಡ್ಡಾಯಗೊಳಿಸಲು ಕೇರಳ ಸರ್ಕಾರ … Continued

ಬೆಳಗಾವಿ : ಸಕ್ಕರೆ ಕಾರ್ಖಾನೆ ದುರಂತ ; ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ  ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ ಎಂದು ವರದಿಯಾಗಿದೆ. ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ  ಸ್ಥಳದಲ್ಲೇ … Continued

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟದಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯ ಸರ್ಕಾರ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued

ಇನ್ನೆಷ್ಟು ದಿನ ಇರ್ತೀನೋ ಗೊತ್ತಿಲ್ಲ, ನನ್ನ ಆಡಳಿತದ ಬಗ್ಗೆ ತೃಪ್ತಿಯಿದೆ’ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರನ್ನು ಹಿಂದಿಕ್ಕಿ ಕರ್ನಾಟಕದಲ್ಲಿ “ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ” ವ್ಯಕ್ತಿ ಎಂಬ ದಾಖಲೆ ಸೃಷ್ಟಿಸಿದ ದಿನವೇ, ಸಿದ್ದರಾಮಯ್ಯ ಅವರು ʼಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆʼ ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸ ಒದಗಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. … Continued

ಬೆಳಗಾವಿ : ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ; ಇಬ್ಬರ ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ … Continued

ಬೆಂಗಳೂರು : 16ನೇ ಮಹಡಿಯಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : 16ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ (Student suicide in Bengaluru) ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ … Continued

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ; ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈವರೆಗೆ ದೇವರಾಜ ಅರಸು ಅವರ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅವರು ಮುರಿದಿದ್ದಾರೆ. ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಅವರು ಮುಂದಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ … Continued

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಸೋಮವಾರ (ಜನವರಿ 5) ಹಿಂದೂ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಳೆದ ಮೂರು ವಾರಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆದ ಐದನೇ ಹಿಂಸಾಚಾರ ಪ್ರಕರಣ ಇದಾಗಿದ್ದು, ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭೀತಿ ಮೂಡಿಸಿದೆ. ಪತ್ರಕರ್ತ ಮತ್ತು ‘ಬ್ಲಿಟ್ಜ್’ ಸಂಪಾದಕ ಸಲಾವುದ್ದೀನ್ ಶೋಯೆಬ್ … Continued

ಬೀದರ | ಕೆಡಿಪಿ ಸಭೆಯಲ್ಲಿ ಸಚಿವರ ಮುಂದೆಯೇ ಕೈಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಶಾಸಕರು ; ವೀಡಿಯೊ ವೈರಲ್‌…!

ಬೀದರ : ಗಡಿ ಜಿಲ್ಲೆ ಬೀದರಿನಲ್ಲಿ ಇಂದು, ಸೋಮವಾರ (ಜನವರಿ ೫) ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (KDP) ಪ್ರಗತಿ ಪರಿಶೀಲನಾ ಸಭೆ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಇಬ್ಬರು ಜನಪ್ರತಿನಿಧಿಗಳು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ವರದಿಯಾಗಿದೆ. ಹುಮ್ನಾಬಾದ್ ಕ್ಷೇತ್ರದ ಅರಣ್ಯ ಭೂಮಿ ಒತ್ತುವರಿ … Continued

ಕೂಜಳ್ಳಿ : ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಖ್ಯಾತ ಹಿಂದುಸ್ತಾನಿ ಬಾನ್ಸುರಿ (ಕೊಳಲು)ವಾದಕ, ಮುಂಬೈನ ನಿತ್ಯಾನಂದ ಹಳದೀಪುರ ಅವರಿಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನೀಡುವ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅವರು, ಪಂ. ಷಡಕ್ಷರಿ … Continued