ಪೋಕ್ಸೊ ಪ್ರಕರಣ : ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಕೋರ್ಟ್‌

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (POCSO case) ಸಂಬಂಧಿಸಿ ದಾಖಲಾಗಿದ್ದ ಮೊದಲ ಪೋಕ್ಸೊ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬುಧವಾರ ಬಿಗ್‌ ರಿಲೀಫ್‌ ಸಿಕ್ಕಿದೆ.  ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೇರಿ ಮೂವರನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ನಿರ್ದೋಷಿಗಳು ಎಂದು  … Continued

ಕಾರು ಅಪಘಾತ: ಐಎಎಸ್‌ ಅಧಿಕಾರಿ ಸೇರಿ ಮೂವರು ಸಾವು

ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued

ಗದಗ : ನೆಫಿಲಾ ಜಾತಿಯ ದೈತ್ಯ ಜೇಡ ಪತ್ತೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಅರಣ್ಯದಲ್ಲಿ, ನೆಫಿಲಾ ಜಾತಿಗೆ ಸೇರಿದ ‘ಜೈಂಟ್ ವುಡ್ ಸ್ಪೈಡರ್’ ಎಂಬ ದೈತ್ಯ ಜೇಡ ಪತ್ತೆಯಾಗಿದೆ. ಈ ಜೇಡಗಳು ತಮ್ಮ ಬೃಹತ್ ಗಾತ್ರ ಮತ್ತು ಹಳದಿ ಬಣ್ಣದ ಬಲವಾದ ಬಲೆಗಳಿಗೆ ಹೆಸರುವಾಸಿಯಾಗಿದ್ದು, ಜೀವವೈವಿಧ್ಯ ಸಂಶೋಧಕರು ಇದನ್ನು ಪತ್ತೆಹಚ್ಚಿದ್ದಾರೆ. ಅರೆನಿಡೇ ವರ್ಗದ ನೆಫಿಲಾ ಜಾತಿಗೆ ಸೇರಿದ ಈ ದೈತ್ಯ ಜೇಡ ಗದಗ … Continued

ಬೆಂಗಳೂರು | 5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ; ಪೈಲಟ್ ವಿರುದ್ಧ ಆರೋಪ

ಬೆಂಗಳೂರು: ಖಾಸಗಿ ಚಾರ್ಟರ್ಡ್ ವಿಮಾನಯಾನ ಸಂಸ್ಥೆಯೊಂದರ ಪೈಲಟ್ ವಿರುದ್ಧ, ಬೆಂಗಳೂರಿನ ಹೋಟೆಲ್‌ನಲ್ಲಿ ರಾತ್ರಿ ತಂಗಿದ್ದ ವೇಳೆ 26 ವರ್ಷದ ಕ್ಯಾಬಿನ್ ಸಿಬ್ಬಂದಿ ಸದಸ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ನವೆಂಬರ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದರೂ, ಸಂತ್ರಸ್ತೆ ಎರಡು ದಿನಗಳ ನಂತರ ಹೈದರಾಬಾದ್ ತಲುಪಿದ ಮೇಲೆ ಪ್ರಕರಣ … Continued

ಬೆಂಗಳೂರು | ವಂದೇ ಭಾರತ್ ರೈಲು ಡಿಕ್ಕಿ ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ. ಭಾನುವಾರ ಸಂಜೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಯುವ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಕೇರಳ ಮೂಲದ ಜಸ್ಟಿನ್ ಜೋಸೆಫ್ (21) ಮತ್ತು ಸ್ಟೆರಿನ್ ಎಲ್ಜಾ ಸಾಜಿ (19) ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, … Continued

ವೀಡಿಯೊ…: 14 ಅಡಿ ಉದ್ದದ ಬೃಹತ್‌ ಕಾಳಿಂಗ ಸರ್ಪದ ರಕ್ಷಣೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಾಗಿಹೊಸಳ್ಳಿಯ ಮನೆಯೊಂದರ ತೋಟದಲ್ಲಿ ಎರಡು ದಿನಗಳ ಹಿಂದೆ ಬೃಹತ್‌ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಕುಮಟಾದ ಪವನ್‌ ನಾಯ್ಕ ಸೆರೆ ಹಿಡಿದಿದ್ದಾರೆ. ರಾಗಿಹೊಸಳ್ಳಿಯ ಪ್ರಶಾಂತ ಹೆಗಡೆ ಎಂಬವರ ಮನೆಯ ತೋಟಕ್ಕೆ ಹಾಕಲಾಗಿದ್ದ ಬಲೆಯ ಬೇಲಿಯಲ್ಲಿ ಈ ಕಾಳಿಂಗ ಸರ್ಪ ಎರಡು ದಿನಗಳಿಂದ ಓಡಾಡುತ್ತಿತ್ತು. ಇದನ್ನು ಕಂಡ … Continued

ಬೆಂಗಳೂರು ಹಣದ ವಾಹನ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : 5.76 ಕೋಟಿ ರೂ. ವಶ, 3 ಪ್ರಮುಖ ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಹೈ-ಪ್ರೊಫೈಲ್ ಎಟಿಎಂ ನಗದು ವಾಹನ ದರೋಡೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದು, ಘಟನೆ ಸಂಭವಿಸಿದ 60 ಗಂಟೆಗಳ ಒಳಗೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ 5.76 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ನಡೆದಿದ್ದ ಈ ದರೋಡೆ, ಸಿಎಂಎಸ್ (CMS) ಸಂಸ್ಥೆಯು ನಿರ್ವಹಿಸುವ 7.11 ಕೋಟಿ ರೂ. ನಗದನ್ನು ಹೊತ್ತೊಯ್ಯುತ್ತಿದ್ದ ವಾಹನದಲ್ಲಿ … Continued

ಧಾರವಾಡ | ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡ: ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ … Continued

ಉಡುಪಿ : ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ರವಾನೆ ; ಇಬ್ಬರ ಬಂಧನ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಇಬ್ಬರನ್ನು ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತರನ್ನು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದ್ದು, ಇವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ … Continued

‘ಸಿಎಂ ಬದಲಾವಣೆ’ ಚರ್ಚೆ ಮತ್ತೆ ಮುನ್ನೆಲೆಗೆ : ಡಿಕೆ ಶಿವಕುಮಾರ ಬಣದ ಶಾಸಕರು ದಿಢೀರ್ ದೆಹಲಿಗೆ…!

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬಣಕ್ಕೆ ಸೇರಿದ ಕೆಲವು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಬಹುಕಾಲದಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಸೂತ್ರವನ್ನು ಜಾರಿಗೆ ತರಲು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರವು ಗುರುವಾರ (ನವೆಂಬರ್‌  20)ದಂದು 2.5 ವರ್ಷಗಳನ್ನು … Continued