ಕಾಂಗ್ರೆಸ್ಸಿನಲ್ಲಿ ಮಹತ್ವದ ಸಂಘಟನಾತ್ಮಕ ನೇಮಕಾತಿ : ಕರ್ನಾಟಕದ ನಿವೇದಿತ್‌ ಆಳ್ವ, ಬಿ.ವಿ ಶ್ರೀನಿವಾಸ ಸೇರಿ 9 ನೂತನ ಕಾರ್ಯದರ್ಶಿಗಳ ನೇಮಕ

ನವದೆಹಲಿ: ಮಹತ್ವದ ಸಂಘಟನಾತ್ಮಕ ಬದಲಾವಣೆಯಲ್ಲಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಂಬತ್ತು ನೂತನ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ ಮತ್ತು ಐದು ಹಾಲಿ ಕಾರ್ಯದರ್ಶಿಗಳ ಜವಾಬ್ದಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮರುಹಂಚಿಕೆ ಮಾಡಲು ಅನುಮೋದನೆ ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ಪತ್ರಿಕಾ ಹೇಳಿಕೆಯ … Continued

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; ₹1.5 ಲಕ್ಷ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು : ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಹಾರ ಮೂಲದ ವಿಕಾಸಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಬೆಂಗಳೂರಿನ ಸದಾಶಿವನಗರ ಪೊಲೀಸರು ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ಆರೋಪಿ ವಿಕಾಸಕುಮಾರ ಮತ್ತು ಆತನ ಸಹಚರರು ದೊಡ್ಡ ಮಟ್ಟದ … Continued

ವೀಡಿಯೊ…| ಶಿರಸಿ : ಶಾಸಕರ ತೋಟದ ಮನೆಗೆ ಬಂದು ನಾಯಿ ಮರಿ ಹೊತ್ತೊಯ್ದ ಚಿರತೆ

ಶಿರಸಿ :ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರ ಶಿರಸಿ ತಾಲೂಕಿನ ಮಳಲಗಾಂವದ ತೋಟದ ಮನೆಗೆ ಚಿರತೆಯೊಂದು ಒಳಗೆ ಬಂದು ನಾಯಿ ಮರಿಯನ್ನು ಹೊತ್ತೊಯ್ದಿದೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗಿನ ಜಾವ 1ರಿಂದ 1:30ರ ಸುಮಾರಿಗೆ ಚಿರತೆ  ಮನೆಯ ಆವರಣದೊಳಗೆ ಪ್ರವೇಶಿಸಿದೆ.  ಚಿರತೆ ಒಳಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಶಿರಸಿ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಚುನಾವಣೆಯಲ್ಲಿ ಅಧ್ಯಕ್ಷರಾಗಿ ನರಸಿಂಹ ಅಡಿ ಆಯ್ಕೆಯಾಗಿದ್ದಾರೆ. ಅವರು ಚಲಾವಣೆಯಾದ ಮತಗಳಲ್ಲಿ 59 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರದೀಪ ರಾಮಚಂದ್ರ ಶೆಟ್ಟಿ 50 ಮತಗಳನ್ನು ಪಡೆದಿದ್ದಾರೆ. ನರಸಿಂಹ ಅಡಿ 9 ಮತಗಳಿಂದ ಜಯಗಳಿಸಿದ್ದಾರೆ. ಮೂವರು ಉಪಾಧ್ಯಕ್ಷ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದು, ಇವರಲ್ಲಿ ಮಾರುತಿ … Continued

ಭಟ್ಕಳ : ಕೆರೆಗೆ ಮೀನು ಹಿಡಿಯಲು ಹೋಗಿದ್ದ ಬಾಲಕ ಕಾಲುಜಾರಿ ಬಿದ್ದು ಸಾವು

ಭಟ್ಕಳ: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ 15 ವರ್ಷದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಆಸರಕೇರಿ ಜಂಬುರಮಠ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಶಶಿಧರ ಮೊಗೇರ ಎಂದು ಗುರುತಿಸಲಾಗಿದೆ. ಭಟ್ಕಳ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಲಾ ಸ್ನೇಹಿತರೊಂದಿಗೆ ಮಧ್ಯಾಹ್ನದ ಸುಮಾರಿಗೆ ಕೊಳದ ಬಳಿ ಮೀನು … Continued

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರತಾ ಲೋಪ ; ಕುಖ್ಯಾತ ಕೈದಿಗಳಿಂದ ಮೊಬೈಲ್, ಟಿವಿ ಬಳಕೆ-ವೀಡಿಯೊ ವೈರಲ್…!

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ದೊಡ್ಡ ಮಟ್ಟದ ಭದ್ರತಾ ಲೋಪ ಹಾಗೂ ಕೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸಂಬಂಧಿಸಿದಂತೆ, ಕುಖ್ಯಾತ ಕೈದಿಗಳಾದ ಐಸಿಸ್ (ISIS) ಉಗ್ರಗಾಮಿ ನೇಮಕಾತಿಯ ಆರೋಪಿ ಮತ್ತು ಸರಣಿ ಅತ್ಯಾಚಾರಿ ಹಾಗೂ ಕೊಲೆಗಡುಕ ಜೈಲಿನೊಳಗೆ ಮೊಬೈಲ್‌ಗಳನ್ನು ಬಳಸುತ್ತಿರುವ ಮತ್ತು ಟಿವಿ ವೀಕ್ಷಿಸುತ್ತಿರುವ ವಿಡಿಯೋಗಳು ಹೊರಬಿದ್ದ … Continued

ವೀಡಿಯೊ..| ಕಾರವಾರ : ಇದ್ದಕ್ಕಿದ್ದಂತೆ ಹೊತ್ತಿ ಉರಿದ ಗೂಡ್ಸ್‌ ಟೆಂಪೊ

ಕಾರವಾರ: ಗೂಡ್ಸ್ ಟೆಂಪೋ ವಾಹನಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರ ನಗರದ ನಗರದ ಬಿಲ್ಟ್ ಸರ್ಕಲ್ ಬಳಿ ನಿಂತಿದ್ದ ಗೂಡ್ಸ್ ವಾಹನ ಬೆಂಕಿಹೊತ್ತಿಕೊಂಡ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಚಾಲಕ ವಾಹನದಲ್ಲಿ ಇರಲಿಲ್ಲ, ನಿಲ್ಲಿಸಿಟ್ಟ ವಾಹನದಲ್ಲಿ ಇದ್ದಕ್ಕಿದ್ದಂತೆ … Continued

ಎಂಇಎಸ್‌ ಮುಖಂಡನ ಜೊತೆ ಸೆಲ್ಫಿ: ಸಿಪಿಐ ಎತ್ತಂಗಡಿ…

ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಶುಭಂ ಶೆಳಕೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಗೆ ಅವರಿಗೆ ಸರ್ಕಾರ ವರ್ಗಾವಣೆಯ ಶಿಕ್ಷೆ ನೀಡಿದೆ. ನವಂಬರ್ ಒಂದರ ಶನಿವಾರ ಕರ್ನಾಟಕ ರಾಜ್ಯೋತ್ಸವ ನಡೆದಿತ್ತು. ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರೋಧವಾಗಿ ಎಂಇಎಸ್ ಕರಾಳ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಜಿಲ್ಲಾಡಳಿತ ಅನುಮತಿ … Continued

ಕನ್ನಡ ಸಿನೆಮಾದ ಖ್ಯಾತ ಖಳನಟ ಹರೀಶ ರಾಯ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ ರಾಯ್ ಇಂದು, ಗುರುವಾರ (ನವೆಂಬರ್‌ 6) ನಿಧನರಾಗಿದ್ದಾರೆ. ಅವರಿಗೆ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ‘ಓಂ’, … Continued