ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದರೂ ಮಂಗಳವಾರ (ನವೆಂಬರ್‌ 4) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, … Continued

ಯಲ್ಲಾಪುರ | ಪತ್ರಕರ್ತ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆಗೆ ಸಂಕಲ್ಪ ಪ್ರಶಸ್ತಿ ಪ್ರದಾನ

ಯಲ್ಲಾಪುರ: ಕಲಾರಾಧನೆ ಮಾಡುತ್ತ ಸಂಕಲ್ಪ ಸಂಸ್ಥೆ ಬೆಳೆದು ಬಂದಿದೆ,ಉತ್ಸವವೂ ನಿರಂತರವಾಗಿರುತ್ತದೆ ಎಂದು ಶಿರಳಗಿ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿ ನುಡಿದರು. ಅವರು ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ 39 ನೇ ಸಂಕಲ್ಪ ಉತ್ಸವದಲ್ಲಿ ಸಾಧಕರಿಗೆ ಸಂಕಲ್ಪ ಪ್ರಶಸ್ತಿ ಪ್ರದಾನ ಮಾಡಿ‌ ಮಾತನಾಡಿದರು. ಸಂಕಲ್ಪ ಜ್ಞಾನ ಯಜ್ಞದ ಮೂಲಕ ಭಗವಂತನನ್ನು … Continued

ಶಿರಸಿ : ಅಡಕೆಗೆ ಎಲೆ ಚುಕ್ಕೆ ರೋಗ ನಿವಾರಣೆಗೆ ಶ್ರೀ ಕ್ಷೇತ್ರ ಮಂಜುಗುಣಿಯಲ್ಲಿ ವೃಕ್ಷೋತ್ಪಾತ ಶಾಂತಿ ಹವನ

ಶಿರಸಿ: ಅಡಕೆಗೆ ತಗುಲಿದ ಎಲೆಚುಕ್ಕೆ ರೋಗ ನಿವಾರಣೆ ಸಂಬಂಧ ವೃಕ್ಷೋತ್ಪಾತ ಶಾಂತಿ ಹವನವು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶ್ರೀಕ್ಷೇತ್ರ, ಕರ್ನಾಟಕದ ತಿರುಪತಿ ಮಂಜುಗುಣಿಯ ಶ್ರೀವೇಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನೆರವೇರಿತು. ಶ್ರೀದೇವರ ಸನ್ನಿಧಾನದಲ್ಲಿ ಸ್ವರ್ಣಪಾದುಕೆ ಹಾಗೂ ಕ್ಷೀರಭಸ್ಮಕ್ಕೆ ಪೂಜೆಯ ಜೊತೆಗೆ ರೋಗ ನಿವಾರಣೆಗಾಗಿ ಸಾಮೂಹಿಕ ಪ್ರಾರ್ಥನೆಯನ್ನು ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. … Continued

ಬೆಂಗಳೂರು : ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಾಕು ನಾಯಿಯನ್ನು ನೆಲಕ್ಕೆ ಬಡಿದು ಕೊಂದ ಮನೆಕೆಲಸದವಳು…!

ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯೊಬ್ಬರು ಸಾಕು ನಾಯಿಯನ್ನು ಅಪಾರ್ಟ್‌ಮೆಂಟ್ ಲಿಫ್ಟ್‌ನ ನೆಲಕ್ಕೆ ಬಡಿದು ಭೀಕರ ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪುಟ್ಟ ನಾಯಿಮರಿಯನ್ನು ನೋಡಿಕೊಳ್ಳುವುದಕ್ಕೆಂದೇ ಕೆಲಸಕ್ಕಿದ್ದ ಮಹಿಳೆ ಅಮಾನವೀಯ ಕೃತ್ಯ ಎಸಗಿದ್ದು, ಆಕೆಯ ವಿರುದ್ಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೆಂಬರ್ 1 … Continued

ಖಾನಾಪುರ | ವಿದ್ಯುತ್ ಸ್ಪರ್ಶಿಸಿ ಎರಡು ಕಾಡಾನೆಗಳ ಸಾವು : ತನಿಖೆಗೆ ಆದೇಶ

ಬೆಳಗಾವಿ : ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಗದ್ದೆಯಲ್ಲಿ ಎರಡು ಆನೆಗಳು ಏಕಕಾಲದಲ್ಲಿ ಸಾವಿಗೀಡಾಗಿರುವುದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಬಳಿ ಕಂಡುಬಂದಿದೆ ಎಂದು ವರದಿಯಾಗಿದೆ. ಮಾಹಿತಿಗಳ ಪ್ರಕಾರ,ಸುಳೇಗಾಳಿ ಗ್ರಾಮದ ರೈತ ಗಣಪತಿ ಗುರವ ಅವರು ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ತಮ್ಮ ಹೊಲದ ಸುತ್ತಲೂ ಸೌರಶಕ್ತಿ … Continued

ಬೆಂಗಳೂರು | ಸಿಗ್ನಲ್ ಜಂಪ್‌ ಮಾಡಿ ಡಿಕ್ಕಿ ಹೊಡೆದ ಆಂಬುಲೆನ್ಸ್ ; ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಜೀವ ಉಳಿಸುವ ವಾಹನ ಆಂಬುಲೆನ್ಸ್ ನಗರದಲ್ಲಿ ಮಾರಣಾಂತಿಕ ರೂಪ ತಾಳಿದ್ದು, ನಿಯಂತ್ರಣ ಕಳೆದುಕೊಂಡು ಸಿಗ್ನಲ್‌ನಲ್ಲಿ ನಿಂತಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ಘಟನೆಯು ಶನಿವಾರ ರಾತ್ರಿ ಸುಮಾರು 11:00 ಗಂಟೆ ಸುಮಾರಿಗೆ ನಗರದ ರಿಚ್‌ಮಂಡ್ ಸರ್ಕಲ್ ಬಳಿ ಸಂಭವಿಸಿದೆ. ಟ್ರಾಫಿಕ್‌ ಸಿಗ್ನಲ್‌ನಲ್ಲಿ … Continued

ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆ ಸೆಲ್ಫಿ ; ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ

ತುಮಕೂರು : ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜೊತೆಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್‌ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, … Continued

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

ಬೆಳಗಾವಿ : ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದ ಘಟನೆ ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರು ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ಮತ್ತು ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡುವಾಗ … Continued

ಅವಳ ಹೆಜ್ಜೆ ಕಿರುಚಿತ್ರೋತ್ಸವ-2026″: ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರ ಸ್ಪರ್ಧೆ

ಬೆಂಗಳೂರು : ಮೊದಲ ಆವೃತ್ತಿಯ ಅದ್ಭುತ ಯಶಸ್ಸಿನ ನಂತರ, ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ ಎರಡನೆಯ ಅವಳ ಹೆಜ್ಜೆ ಕಿರುಚಿತ್ರೋತ್ಸವಕ್ಕೆ ಮಹಿಳಾ ನಿರ್ದೇಶಕರಿಂದ ಕನ್ನಡ ಕಿರುಚಿತ್ರಗಳ ಸ್ಪರ್ಧೆಗೆ ನೋಂದಣಿಯನ್ನು ಆಹ್ವಾನಿಸಲಾಗಿದೆ. ಇದು ಮಹಿಳಾ ನಿರ್ದೇಶಕರಿಗೇ ಮೀಸಲಾದ ಕನ್ನಡ ಕಿರುಚಿತ್ರ ಸ್ಪರ್ಧೆಯಾಗಿದೆ. ಅತ್ಯುತ್ತಮ ಕಿರುಚಿತ್ರಕ್ಕೆ ಅವಳ ಹೆಜ್ಜೆ ಪ್ರಶಸ್ತಿ – ₹1,00,000 ನಗದು ಹಾಗೂ ಹಲವಾರು ವಿಶೇಷ ವಿಭಾಗಗಳಲ್ಲಿ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ, ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಅನುಮತಿ ಹಿಂಪಡೆಯಿರಿ ; ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಒತ್ತಾಯಿಸಿದ ನಿಯೋಗ

ಬೆಂಗಳೂರು : ಬೆಂಗಳೂರು : ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಗೌರಾಧ್ಯಕ್ಷತೆಯ ಬೇಡ್ತಿ ಅಘಾನಿಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ಸಂಸದರನ್ನು ಒಳಗೊಂಡ ಸಮಿತಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಹೊರಟಿರುವ ಮೂರು ಹೊಸ ಯೋಜನೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಮತ್ತು … Continued