ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರ

ನವದೆಹಲಿ : ಕೇಂದ್ರ ಸರ್ಕಾರ ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ‌ ನಗರಿ ಹುಬ್ಬಳ್ಳಿ (Bengaluru-Hubballi) ಮಧ್ಯೆ ನಿತ್ಯ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರದ ಕೊಡುಗೆ ನೀಡಿದೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ … Continued

ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ : ಬೆಂಗಳೂರು ಸೇರಿ ಹಲವು ಸ್ಥಳಗಳಲ್ಲಿ ಇ.ಡಿ. ಶೋಧ

ಬೆಂಗಳೂರು:  ಬೇಲೆಕೇರಿ ಬಂದರಿನ ಮೂಲಕ ನಡೆದಿದೆ ಎನ್ನಲಾದ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED)ದ ಬೆಂಗಳೂರು ವಲಯ ಕಚೇರಿಯು ಗುರುವಾರ ರಾಜ್ಯದ ಬೆಂಗಳೂರು, ಹೊಸಪೇಟೆ ಹಾಗೂ ಹರಿಯಾಣದ ರಾಜ್ಯದ ಗುರುಗ್ರಾಮ ಸೇರಿದಂತೆ ಒಟ್ಟು 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಇ.ಡಿ. ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್ … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ … Continued

ಕಾರವಾರ : ಮೀನು ಚುಚ್ಚಿ ಗಾಯಗೊಂಡು ಮೀನುಗಾರ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ದಂಡೇಭಾಗ ಪ್ರದೇಶದ ಬಳಿ ಮೀನುಗಾರಿಕೆಗೆ ತೆರಳಿದ್ದ ವೇಳೆ 24 ವರ್ಷದ ಮೀನುಗಾರ ಹಾರುವ ತೊಳೆ ಕಾಂಡೆ ಮೀನು (Flying fish) ಚುಚ್ಚಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 14, ಮಂಗಳವಾರ ಅಕ್ಷಯ ಮಾಜಾಳೀಕರ ಎಂಬವರು ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದರು. … Continued

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌ ; ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ಸರ್ಕಾರದ ಆರ್ಥಿಕ ಇಲಾಖೆಯ (ಸೇವೆಗಳು-2) ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು … Continued

ಅರಿವಳಿಕೆ ಔಷಧಿ ನೀಡಿ ವೈದ್ಯೆ ಪತ್ನಿಯ ಕೊಲೆ ಆರೋಪ ; 6 ತಿಂಗಳ ಬಳಿಕ ವೈದ್ಯ ಪತಿಯ ಬಂಧನ

ಬೆಂಗಳೂರು: ಆರು ತಿಂಗಳ ಹಿಂದೆ ತಮ್ಮ ವೈದ್ಯೆ ನಿಗೂಢವಾಗಿ ಸಾವಿಗೀಡಾದ ಪ್ರಕರಣದ ರಹಸ್ಯ ಬಯಲಾಗಿದ್ದು, ಕೊಲೆ ಆರೋಪದ ಮೇಲೆ ಪೊಲೀಸರು ಆಕೆಯ ವೈದ್ಯ ಪತಿಯನ್ನು ಬಂಧಿಸಿದ್ದಾರೆ. ಪೂರ್ವ ಬೆಂಗಳೂರಿನ ಮುನ್ನೇಕೊಳಲು ಪ್ರದೇಶದಲ್ಲಿ ವಾಸವಾಗಿದ್ದ ಜನರಲ್‌ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ರೆಡ್ಡಿ ಅವರು, ಏಪ್ರಿಲ್ 21 ರಂದು ತಮ್ಮ ಮನೆಯಲ್ಲಿಯೇ ಪತ್ನಿ ಡಾ. ಕೃತಿಕಾ ರೆಡ್ಡಿ ಅವರಿಗೆ … Continued

ಎಸ್ ಎಸ್ ಎಲ್ ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ; ಪಾಸಿಂಗ್ ಮಾರ್ಕ್ಸ್ ಇಳಿಕೆ ಮಾಡಿದ ಸರ್ಕಾರ…!

ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಇದೇ ವರ್ಷದಿಂದ ಜಾರಿಯಾಗುವಂತೆ, ಪಾಸ್‌ ಆಗಲು ಬೇಕಾದ ಕನಿಷ್ಠ ಅಂಕಗಳನ್ನು ಕಡಿಮೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಇನ್ಮುಂದೆ ಪಾಸ್‌ ಆಗಲು 33% ಅಂಕ ಪಡೆದರೆ ಸಾಕು ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಲು 30% ಅಂಕ ಪಡೆದರೆ ತೇರ್ಗಡೆ ಆಗಲಿದ್ದಾರೆ. ಈ ವರೆಗೆ ಎಸ್‌ಎಸ್‌ಎಲ್‌ಸಿ ಯಲ್ಲಿ ಪಾಸ್‌ … Continued

ಹೃದಯ ಸ್ತಂಭನ ; ಗೋವಾ ಕೃಷಿ ಸಚಿವ, ಮಾಜಿ ಸಿಎಂ ರವಿ ನಾಯ್ಕ ನಿಧನ

ಪಣಜಿ: ಗೋವಾದ ಕೃಷಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ಹಿರಿಯ ರಾಜಕಾರಣಿ ರವಿ ನಾಯ್ಕ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕುಟುಂಬ ಮೂಲಗಳು ಪಿಟಿಐಗೆ ನೀಡಿರುವ ಮಾಹಿತಿಯ ಪ್ರಕಾರ, ಬುಧವಾರ ಮುಂಜಾನೆ ಪಣಜಿಯಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ಅವರಿಗೆ ಹೃದಯಾಘಾತವಾಯಿತು. ತಕ್ಷಣವೇ ಅವರನ್ನು ಪೊಂಡಾದಲ್ಲಿರುವ ಖಾಸಗಿ ಆಸ್ಪತ್ರೆಗೆ … Continued

ಕಿರಿಮಂಜೇಶ್ವರ : ಸಮುದ್ರಕ್ಕೆ ಮೀನು ಹಿಡಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಮೀನು ಹಿಡಿಯಲು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಿರಿಮಂಜೇಶ್ವರ ಬಳಿ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ಈ ದುರಂತ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳಾದ ಸಂಕೇತ (16), ಸೂರಜ (15) ಹಾಗೂ ಆಶಿಶ್ (14) ನೀರಿನಲ್ಲಿ ಮುಳುಗಿ … Continued

ಉತ್ತರ ಕನ್ನಡ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2025 – 28ನೇ ಸಾಲಿಗಾಗಿ ರಾಜ್ಯ ಮತ್ತು ರಾಜ್ಯದ ಎಲ್ಲ ಜಿಲ್ಲೆಗಳ ಘಟಕಗಳ ಪದಾಧಿಕಾರಿ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಇತರ ಹುದ್ದೆಗಳಿಗೆ ನವೆಂಬರ 9 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್‌ 13ರಂದು ಜಿಲ್ಲಾ ಪತ್ರಿಕಾ … Continued