ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಇಬ್ಬರಿಗೆ ಖಾತೆ ಬದಲು; ಯಾರಿಗೆ ಯಾವ ಖಾತೆ ? ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದ ಮಂತ್ರಿಗಳಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಆಗಸ್ಟ್ 3ರಂದು ಪ್ರಮಾಣ ವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ (Portfolios) ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪನವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ … Continued

ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷದ ನಿಷೇಧ ; ಸರ್ಕಾರದಿಂದ ಆದೇಶ

ಬೆಂಗಳೂರು: ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(ಎ) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ … Continued

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಪ್ರಜ್ವಲ್‌ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್‌ ಪತ್ತೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ  ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇರಿಸಲಾಗಿರುವ ಬ್ಯಾರಕ್‌ನಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದ್ದು, ಈತ ಅದನ್ನು ಬಳಸುತ್ತಿದ್ದ ಎಂಬ ಅನುಮಾನ ವ್ಯಕ್ತವಾಗಿದೆ. ಅಪರಾಧ ವಿಭಾಗದ ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್‌ ಫೋನ್‌ … Continued

ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಆಗಸ್ಟ್ 14ರಂದು ನಡೆಯಲಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಾಗಿದ್ದು, ಸ್ಪೀಕರ್ ಚುನಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ (ಪ್ರೊ-ಟೆಮ್ ಸ್ಪೀಕರ್) ಆಗಿ ನೇಮಕ ಮಾಡಿದ್ದಾರೆ. … Continued

ಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ

 ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್‌ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು … Continued

ಹೋಟೆಲ್‌, ರೆಸ್ಟೋರೆಂಟ್‌ಗಳು, ಧಾಬಾಗಳಿಗೆ ಖಡಕ್‌ ಸೂಚನೆ ; ಆಹಾರ ಸುರಕ್ಷತೆಗೆ ಸರ್ಕಾರದಿಂದ 12 ಅಂಶಗಳ ಮಾರ್ಗಸೂಚಿ

ಬೆಂಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ತಪಾಸಣೆ ತೀವ್ರಗೊಂಡಿರುವ ಬೆನ್ನಲ್ಲೇ, ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಯಾಂಟೀನ್‌ಗಳು, ಕ್ಯಾಟರಿಂಗ್‌ ಸಂಸ್ಥೆಗಳು, ಧಾಬಾಗಳು ಸೇರಿದಂತೆ ಎಲ್ಲ ಆಹಾರ ಉದ್ಯಮಗಳಿಗೆ 12 ಅಂಶಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಆಗಸ್ಟ್‌ 11ರಂದು ಹೊರಡಿಸಿರುವ ಈ ಸುತ್ತೋಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, … Continued

ಅಳ್ನಾವರ : ಶಾಲಾ ವಾಹನ ಗುದ್ದಿ 2 ವರ್ಷದ ಮಗು ಸಾವು

ಧಾರವಾಡ : ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದಿದ್ದ ವಾಹನ ಡಿಕ್ಕಿ ಹೊಡೆದು ಸುಮಾರು ಎರಡು ವರ್ಷದ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ ಎಂದುವರದಿಯಾಗಿದೆ. ಮೃತ ಮಗುವನ್ನು ಹುಲ್ಲಿಕೇರಿ ಗ್ರಾಮದ ಲುಕ್ಮಾನ್ ಬೋಗೂರ (2) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಶಾಲಾ ವಾಹನ ಹುಲಿಕೇರಿ … Continued

ಗೋಕಾಕ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನಡೆದಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ. ಡಾ. ಶ್ವೇತಾ ನಾಯಿಕ ನೇತೃತ್ವದಲ್ಲಿ … Continued

ಕಾವೇರಿ ವಿವಾದ | ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್‌ಸಿ ಸೂಚನೆ

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ತೀವ್ರಗೊಂಡಿರುವ ನಡುವೆಯೇ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 12,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮಂಗಳವಾರ ನಿರ್ದೇಶನ ನೀಡಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಅಧ್ಯಕ್ಷ ವಿನೀತ್ … Continued

ಮಗನ ಅಪಘಾತದಿಂದ ನೊಂದು ದಂಪತಿಯ ದುರಂತ ಅಂತ್ಯ ; ತಾಯಿ-ತಂದೆ ಕಳೆದುಕೊಂಡ 10 ವರ್ಷದ ಬಾಲಕ ಅನಾಥ

ಕಾರವಾರ: ಕುಟುಂಬದಲ್ಲಿ ಸಂಭವಿಸಿದ ಅಪಘಾತವೊಂದು ಇಡೀ ಕುಟುಂಬವನ್ನೇ ದುರಂತಕ್ಕೆ ದೂಡಿದ ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ನಡೆದಿದೆ. ಮಗನಿಗೆ ಸಂಭವಿಸಿದ ಅಪಘಾತದಿಂದ ಆತನ ಆರೋಗ್ಯದ ಬಗ್ಗೆ ಆತಂಕಗೊಂಡ ತಾಯಿ ಆತ್ಮಹತ್ಯೆಗೆ ಶರಣಾದರೆ, ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿಯೂ ಕಾಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ … Continued