ಕಾಂಗ್ರೆಸ್‌ ಆಂತರಿಕ ತಿಕ್ಕಾಟ ಮೊದಲು ಬಗೆಹರಿಸಿಕೊಳ್ಳಲಿ: ಸಿದ್ದುಗೆ ಬಿಜೆಪಿ ಟಾಂಗ್‌

ಬೆಂಗಳೂರು: ನಿಮ್ಮ ಪಕ್ಷದೊಳಗಿನ ಆಂತರಿಕ ಹೋರಾಟವನ್ನು ಮೊದಲು ಬಗೆಹರಿಸಿಕೊಳ್ಳಿ ಎಂದು ಬಿಜೆಪಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ. ಕಾಂಗ್ರೆಸ್‌ನಲ್ಲಿ ಅಹಿಂದ ವಿಚಾರವಾಗಿ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ. ಅಹಿಂದ ಎಂದು ಹೊರಟಿದ್ದ ಸಿದ್ದರಾಮಯ್ಯ ದಿಢೀರನೆ ಅಲ್ಪಸಂಖ್ಯಾತರನ್ನು ಕೈಬಿಟ್ಟು ಹಿಂದ ಎನ್ನುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡಾಗಲೇ ಜಾತಿ, … Continued

ಬೆಂಗಳೂರು ವಿಮಾನ ನಿಲ್ದಾಣದಿಂದ 5 ಹೊಸ ಮಾರ್ಗಗಳಿಗೆ ವಿಮಾನ ಸೇವೆ

ಫೆಬ್ರವರಿ ಅಂತ್ಯಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಐದು ಹೊಸ ಮಾರ್ಗಗಳಿಗೆ ವಿಮಾನಯಾನ ಸೇವೆ ಆರಂಭಗೊಳ್ಳಲಿದೆ. ಆಗ್ರಾ, ಕರ್ನೂಲ, ರಾಜಕೋಟ್‌, ದುರ್ಗಾಪುರ, ದಿಬ್ರೂಗಢ ನಗರಗಳಿಗೆ ಫೆಬ್ರವರಿ ಅಂತ್ಯದಿಂದ ವಿಮಾನಯಾನ ಸೇವೆ ಆರಂಭವಾಗುವುದು. ರಾಜಕೋಟ್‌, ದುರ್ಗಾಪುರಕ್ಕೆ ಸ್ಪೈಸ್‌ ಜೆಟ್‌ ಹಾಗೂ ದಿಬ್ರೂಗಢಕ್ಕ ಇಂಡಿಗೊ, ಆಗ್ರಾ ಮತ್ತು ಕರ್ನೂಲ್‌ಗೆ ಮಾರ್ಚ್‌ ಮೊದಲ ವಾರದಿಂದ ವಿಮಾನಸೇವೆ ಶುರುವಾಗಲಿದೆ. ಇದರಿಂದಾಗಿ ಬೆಂಗಳೂರಿನಿಂದ … Continued

ಹುಬ್ಬಳ್ಳಿಗೆ ಬರಲಿವೆ ಮಲೇಶಿಯಾ ಸೈಕಲ್‌ಗಳು

ಸ್ಮಾರ್ಟ್‌ ಸಿಟಿ ಯೋಜನೆಯಡಿ ಬೈಸಿಕಲ್‌ ಪೂರೈಸಲು ಚೀನಾ ಕಂಪನಿಯೊಂದಿಗಿನ ಟೆಂಡರ್‌ ರದ್ದುಗೊಂಡ ಹಿನ್ನೆಲೆಯಲ್ಲಿ ಮಲೇಶಿಯಾ ಸೈಕಲ್‌ಗಳು ಹುಬ್ಬಳ್ಳಿಗೆ ಬರಲಿವೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ 340 ಸೈಕಲ್‌ಗಳು ಕೌಲಾಲಂಪುರದಿಂದ ಹಡಗು ಏರಿದ್ದು, ಮುಂದಿನ ತಿಂಗಳ ಆರಂಭದಲ್ಲಿ ಹುಬ್ಬಳ್ಳಿ ರಸ್ತೆಯಲ್ಲಿ ಮಲೇಶಿಯಾ ಸೈಕಲ್‌ಗಳು ಸಂಚರಿಸಲಿವೆ. ಪರಿಸರ ಸ್ನೇಹಿ ಸಾರಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸ್ಮಾರ್ಟ್‌ ಸಿಟಿ ಯೋಜನೆಯಡಿ ಸೈಕಲ್‌ … Continued

ಬಿಹಾರ್‌ ಚುನಾವಣೆಯಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಪಕ್ಷಗಳಿಗೆ ವಿಜಯೇಂದ್ರ ಹಣ ನೀಡಿದ ಬಗ್ಗೆ ತನಿಖೆಯಾಗಲಿ: ಯತ್ನಾಳ

ಬೆಂಗಳೂರು: ಬಿಜೆಪಿ ಸೋಲಿಸುವ ಮೂಲಕ ಪ್ರಧಾನಿ ಮೋದಿ ತಾಕತ್ತನ್ನು ಕುಗ್ಗಿಸುವ ಉದ್ದೇಶದಿಂದ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಿಹಾರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ಪಕ್ಷಗಳಿಗೆ ಹಣ ನೀಡಿದ್ದು, ಈ ಕುರಿತು ಸಮರ್ಪಕ ತನಿಖೆ ನಡೆಯಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯೇಂದ್ರ ಬಿಹಾರ ಚುನಾವಣೆಯಲ್ಲಿ ಹಣ ನೀಡಿದ ಬಗ್ಗೆ ಕೇಂದ್ರ ಸರಕಾರಕ್ಕೂ ಮಾಹಿತಿಯಿದೆ. … Continued

ಬಸ್‌ ಪ್ರಯಾಣ ದರ ಹೆಚ್ಚಳವಿಲ್ಲ: ಸಾರಿಗೆ ಸಚಿವ ಸವದಿ

ಡೀಸೆಲ್‌ ಬೆಲೆ ಹೆಚ್ಚಳಗೊಂಡಿದ್ದರೂ ಬಸ್‌ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಸ್‌ ಪ್ರಯಾಣ ದರ ಹೆಚ್ಚಿಸುವಂತೆ ಈಗಾಗಲೇ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾಪ ಬಂದಿದೆ. ಆದರೆ ಕೊರೊನಾ, ನೈಸರ್ಗಿಕ ವಿಕೋಪದ ಕಾರಣದಿಂದಾಗಿ ಈಗಾಗಲೇ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಸ್‌ ಪ್ರಯಾಣ ದರ ಹೆಚ್ಚಿಸಿದರೆ ಜನರಿಗೆ ಇನ್ನಷ್ಟು … Continued

ಸಿದ್ದರಾಮಯ್ಯ, ನಟ ಯಶ್‌ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರ ನಟ ಯಶ್‌ ಆಗಮಿಸಬೇಕು ಎಂದು ಡೆತ್ ‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲೂಕ ಕೆರೆಗೋಡು ಹೋಬಳಿ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂತ್ಯಕ್ರಿಯೆ ವೇಳೆ ತನ್ನ ಮೊಬೈಲ್‌ನ್ನು ಚಿತೆಯಲ್ಲಿ ಹಾಕುವಂತೆ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ … Continued

ಈಗ ಮೀಸಲಾತಿ ಹೋರಾಟಕ್ಕೆ ಸಜ್ಜಾದ ಒಕ್ಕಲಿಗರು

ಬೆಂಗಳೂರು: ಕುರುಬ, ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೋರಾಟಕ್ಕೆ ಸನ್ನದ್ಧಗೊಂಡಿದೆ. ಒಕ್ಕಲಿಗ ಸಮುದಾಯ ಎಲ್ಲಾ 115 ಉಪ ಪಂಗಡಗಳನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಎಂದು ಸಮುದಾಯದ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದೇ ಇದ್ದರೆ ಆದಿ … Continued

ಫೆ.೨೬ರಂದು ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶಾಸಕ ಶರತ್‌ ಕಾಂಗ್ರೆಸ್‌ ಸೇರ್ಪಡೆ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಫೆ.೨೬ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ. ಕ್ವೀನ್ದ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ನ ಮುಖಂಡರಾದ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಕೈ ಪಾಳೆಯಕ್ಕೆ ಸೇರಲಿದ್ದಾರೆ. ರಾಜ್ಯ ಕಾಂಗ್ರೆಸ್‌ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ಬಳಿಕೆ ಶರತ್‌ ಕಾಂಗ್ರೆಸ್‌ ಸೇರ್ಪಡೆಗೊಳ್ಳಲುಮ ನಿರ್ಧರಿಸಿದ್ದಾರೆ. ೨೦೧೮ರ … Continued

ಭ್ರಷ್ಟಾಚಾರ ಆರೋಪ: ಗಣಿ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತಿಗೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು- ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ  ಚಿತ್ರದುರ್ಗ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ. ಲಿಂಗರಾಜು ಅವರನ್ನು ಅಮಾನತುಗೊಳಿಸಲು ಸರ್ಕಾರಕ್ಕೆ  ಪ್ರಸ್ತಾವನೆ  ಸಲ್ಲಿಸಲಾಗಿದೆ. ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ 26-10-2016 ರಿಂದ 3-9-2018ರವರೆಗೆ ಹಿರಿಯ ಭೂವಿಜ್ಞಾನಿಯಾಗಿ  ಹೆಚ್ಚುವರಿ ಪ್ರಭಾರದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಬಿ.ಎಂ. ಅವರ ಮೇಲೆ ವ್ಯಾಪಕವಾದ ಆರೋಪಗಳು ಕೇಳಿಬಂದಿದ್ದವು.ಕಲ್ಲು … Continued

ಆನ್‌ಲೈನ್‌ ಜೂಜು: ಸಚಿವ ಸಂಪುಟ ನಿರ್ಧಾರ ದಾಖಲಿಸಲು ಉಚ್ಚ ನ್ಯಾಯಾಲಯ ನಿರ್ದೇಶನ

ಆನ್‌ಲೈನ್‌ ಜೂಜು ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರವನ್ನು ದಾಖಲಿಸುವಂತೆ ರಾಜ್ಯ ಸರಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ. ಆನ್‌ಲೈನ್‌ ಬೆಟ್ಟಿಂಗ್‌ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ. ಈ ದಿಸೆಯಲ್ಲಿ ಶೀಘ್ರವೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಸೂಕ್ತ ನಿಯಮಾವಳಿ ರೂಪಿಸುವವರೆಗೆ ಆನ್‌ಲೈನ್‌ ಜೂಜು ರದ್ದುಗೊಳಿಸಬೇಕೆಂದು … Continued