ಕಾರವಾರ | ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ; ಬೈಕಿಗೆ ಪಿಕ್‌ಅಪ್‌ ಡಿಕ್ಕಿ ; ಬೈಕ್‌ ಸವಾರ ಸಾವು

ಕಾರವಾರ: ಸರಣಿ ಅಪಘಾತದಿಂದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ (42) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ, ದಿವೇಕರ ಕಾಲೇಜಿನ ಬಳಿ … Continued

ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನನನ್ನು ಮತ್ತೆ ಬಂಧಿಸಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ಗುರುವಾರ (ಆಗಸ್ಟ್‌ 14) ರದ್ದುಗೊಳಿಸಿದೆ. ಹೈಕೋರ್ಟ್ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇತರ ಐವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು … Continued

ಬೆಳಗಾವಿ | ನಕಲಿ ದಾಖಲೆ ಸೃಷ್ಟಿಸಿ 16 ಕೋಟಿ ರೂ. ಜಿಎಸ್‌ಟಿ ವಂಚಿಸಿದ್ದ ಆರೋಪಿಯ ಬಂಧನ

ಬೆಳಗಾವಿ: ಕೋಟ್ಯಂತರ ರೂಪಾಯಿ ಜಿಎಸ್‌ಟಿ ವಂಚನೆ ಮಾಡಿದ್ದ ವ್ಯಕ್ತಿಯನ್ನು ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ವಿವಿಧ ಕಂಪನಿಗಳ ನಕಲಿ ಹೆಸರುಗಳನ್ನು ಸೃಷ್ಟಿಸಿ ಈತ ನಕಲಿ ಒಪ್ಪಂದ ಮತ್ತು ನಕಲಿ ಬಿಲ್ ಸೃಷ್ಟಿಸಿದ್ದ. ಇದಕ್ಕಾಗಿ ತನ್ನ ಕಚೇರಿಯ ನೌಕರರ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಗಳನ್ನು ಬಳಸಿಕೊಂಡಿರುವ ಮಾಹಿತಿ ಈಗ ಬಹಿರಂಗವಾಗಿದೆ. … Continued

ಸಿದ್ದಾಪುರ | ಆಗಸ್ಟ್‌ 15ರಂದು ಅನಂತೋತ್ಸವ-2025 ; ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಅನಂತ ಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅನಂತ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಅನಂತೋತ್ಸವ-2025 ಪಟ್ಟಣದ ಟಿಎಂಎಸ್‌ ಸಭಾಂಗಣದಲ್ಲಿ ಆಗಸ್ಟ್‌ 15ರಂದು ಸಂಜೆ 4:30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಬರೆದ ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಖ್ಯಾತ ಮದ್ದಲೆ ವಾದಕರಾದ ಶಂಕರ ಭಾಗವತ ಯಲ್ಲಾಪುರ ಅವರಿಗೆ ಅನಂತ ಶ್ರೀ ಪ್ರಶಸ್ತಿ … Continued

ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಲ ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್‌ 14ರಿಂದ ಒಂದು ವಾರದ ವರೆಗೆ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಚಾಮರಾಜನಗರ : ಎರಡು ಹುಲಿ ಮರಿಗಳ ಮೃತದೇಹ ಪತ್ತೆ

ಚಾಮರಾಜನಗರ : ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಎರಡು ಹುಲಿಮರಿಗಳು ಮೃತಪಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿವೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಮೃತಪಟ್ಟಿರುವುದು ಕಂಡುಬಂದಿದೆ. … Continued

ಅಂಕೋಲಾ | ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು

ಅಂಕೋಲಾ: ತಂದೆ ತೆಂಗಿನಮರ ಹತ್ತಿದ ಸಂದರ್ಭದಲ್ಲಿ ಸಹಾಯ ಮಾಡಲು ಹೋದ ಮಗಳು ತೋಟದ ಬಾವಿಗೆ ಬಿದ್ದು ಮೃತ ಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಚನಗಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಅಚವೆ ಚನಗಾರ ನಿವಾಸಿ ವೀಣಾ  ಗೌಡ(30) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ … Continued

ಬಂಡೀಪುರ | ಸೆಲ್ಫಿ ತೆಗೆಯುವ ವೇಳೆ ಕಾಡಾನೆ ದಾಳಿ, ಅದೃಷ್ಟವಶಾತ್‌ ಪ್ರಾಣ ಉಳಿದ ವ್ಯಕ್ತಿಗೆ ಅರಣ್ಯ ಇಲಾಖೆ 25 ಸಾವಿರ ರೂ. ದಂಡ…!

ಮೈಸೂರು: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಗೆ ಸಿಲುಕಿ ಅದೃಷ್ಟವಶಾತ್‌ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆ ಆತನಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಡಾನೆ ಬಸವರಾಜ … Continued