ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued

8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು…

ಅಮರಾವತಿ:  ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪ್ರೇಮಕಥೆಯೊಂದು ಎಂಟು ವರ್ಷಗಳ ಬಳಿಕ ದುರಂತ ಅಂತ್ಯ ಕಂಡ ಘಟನೆ ಆಂಧ್ರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಂಟೂರು ಜಿಲ್ಲೆಯ ಕೊಂಡ್ರುಪಾಡು ಗ್ರಾಮದ 26 ವರ್ಷದ ಯುವತಿ ಇತ್ತೀಚೆಗೆ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಮುನ್ನ ಬರೆದಿದ್ದ ಕೊನೆಯ ಪತ್ರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಆತ್ಮಹತ್ಯೆ ಮಾಡಿಕೊಂಡ 24 … Continued

ಮತದಾರರ ಪಟ್ಟಿಯಿಂದ ಹೆಸರು ತೆಗೆದ ಮಾತ್ರಕ್ಕೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ವ್ಯಕ್ತಿಯ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೊಮ್ಮೆ ಮೌಖಿಕವಾಗಿ ಸ್ಪಷ್ಟಪಡಿಸಿದೆ. ಬಿಹಾರ ಎಸ್‌ಐಆರ್ ಪ್ರಕರಣದಲ್ಲಿ ಈಗಾಗಲೇ ನೀಡಿದ್ದ ತೀರ್ಪಿನಲ್ಲಿಯೇ ಚುನಾವಣಾ ಆಯೋಗ (ECI) ಪೌರತ್ವ ನಿರ್ಧರಿಸುವ ಅಂತಿಮ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು … Continued

ವಿಡಿಯೊ | ಕಾಶಿ : ವಿದೇಶಿ ಪ್ರಜೆಯ ದಾಂಧಲೆ ; ಮನೆಗಳಿಗೆ ನುಗ್ಗಿ ಜನರನ್ನು ಕಚ್ಚಿದ ವ್ಯಕ್ತಿ….!

ವಾರಾಣಸಿ: ವಾರಾಣಸಿಯ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಮೆಡಿಸಿನ್ ಮಾರ್ಕೆಟ್ ಪ್ರದೇಶದಲ್ಲಿ ಗುರುವಾರ ವಿದೇಶಿ ಪ್ರಜೆಯೊಬ್ಬ ಅರೆಬೆತ್ತಲೆ ಸ್ಥಿತಿಯಲ್ಲಿ ಹಲವು ಮನೆಗಳಿಗೆ ನುಗ್ಗಿ, ಮನೆಯಲ್ಲಿದ್ದ ವಸ್ತುಗಳನ್ನು ಎಸೆದು ನಿವಾಸಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅಲ್ಲದೆ, ಸ್ಥಳೀಯ ನಿವಾಸಿಯೊಬ್ಬರ ಕೈಗೆ ಕಚ್ಚಿ ಗಾಯಗೊಳಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆಯ ಹಿನ್ನೆಲೆಯಲ್ಲಿ … Continued

ಬೆಂಗಳೂರು | ತರಗತಿಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾವು : ಶಾಲಾ ಸಿಬ್ಬಂದಿ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದ ಆರೋಪ

ಬೆಂಗಳೂರು: ನಗರದ ಬನ್ನೇರಘಟ್ಟ ರಸ್ತೆಯ ವೀವರ್ಸ್ ಕಾಲೋನಿಯ ಖಾಸಗಿ ಶಾಲೆಯೊಂದರಲ್ಲಿ 12 ವರ್ಷದ ವಿದ್ಯಾರ್ಥಿಯೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯದೆ ವಿಳಂಬ ಮಾಡಿದ ಕಾರಣ ಮಗನ ಜೀವ ಉಳಿಯಲಿಲ್ಲ ಎಂದು ಮೃತ ಬಾಲಕನ ಕುಟುಂಬ ಆರೋಪ ಮಾಡಿದೆ. … Continued

ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಸೋನಂ ವಾಂಗ್ಚುಕ್ ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ ; ಕೇಂದ್ರ–ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನ ಸರ್ಕಾರಿ ವೈದ್ಯರು ಪರಿಶೀಲಿಸಬೇಕು ಮತ್ತು ಅವರ ಜೀವ ರಕ್ಷಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರಕುಮಾರ ಉಪಾಧ್ಯಾಯ … Continued

ಇಸ್ರೋ ತೊರೆದ 100ಕ್ಕೂ ಹೆಚ್ಚು ವಿಜ್ಞಾನಿಗಳು ; ಭಾರತದ ಬಾಹ್ಯಾಕಾಶ ಯೋಜನೆಗಳಿಗೆ ಸಂಕಷ್ಟ : ಕೇಂದ್ರದಿಂದ ಹೊಸ ಆದೇಶ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಇತ್ತೀಚಿನ ದಿನಗಳಲ್ಲಿ ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿ ದೊಡ್ಡ ಪ್ರಮಾಣದಲ್ಲಿ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಬಾಹ್ಯಾಕಾಶ ಇಲಾಖೆ (Department of Space – DoS) ಮಹತ್ವದ ನಿರ್ದೇಶನವನ್ನು ಹೊರಡಿಸಿದೆ. ಗಗನಯಾನ ಸೇರಿದಂತೆ ರಾಷ್ಟ್ರೀಯ ಮಹತ್ವದ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳ ರಾಜೀನಾಮೆ ಅಥವಾ ಸ್ವಯಂ … Continued

ಪ್ರಧಾನಿ ಮೋದಿ-ಬಿಜೆಪಿ ಉನ್ನತ ನಾಯಕರ ಮಹತ್ವದ ಸಭೆ ; ಶೀಘ್ರವೇ ಕೇಂದ್ರ ಸಂಪುಟ-ಪಕ್ಷದ ಸಂಘಟನೆಯ ಪುನರ್ರಚನೆ ?

ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಸಂಘಟನೆಯ ಪುನರ್ರಚನೆಗೆ ಶೀಘ್ರದಲ್ಲೇ ಅಂತಿಮ ರೂಪ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಈ ಸಂಬಂಧ ಬುಧವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. … Continued

ಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (ಬ್ರಿಟನ್) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (Comprehensive Economic and Trade Agreement – CETA) ಬುಧವಾರ(ಜುಲೈ ೧೫)ದಿಂದ ಜಾರಿಗೆ ಬಂದಿದೆ. ಒಪ್ಪಂದದಡಿ ಭಾರತವು ಬ್ರಿಟನ್‌ನಿಂದ ಆಮದು ಆಗುವ ಹಲವು ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಹಂತ ಹಂತವಾಗಿ ಕಡಿಮೆ ಮಾಡಲಿದೆ. ಅದೇ ವೇಳೆ, ಬ್ರಿಟನ್ … Continued