ಕೇರಳದಲ್ಲಿ ಭೀಕರ ಪ್ರವಾಹ; 18 ಜನರು ಸಾವು, ಅನೇಕರು ನಾಪತ್ತೆ, ಮುಳುಗಿದ ಬಸ್ಸಿನಿಂದ ಹೊರಬರಲು ಜನರ ಹರಸಾಹಸ.. ವಿಡಿಯೋ ವೀಕ್ಷಿಸಿ

ತಿರುವನಂತರಪುರಂ: ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಮತ್ತು ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. 11 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಎರಡು ಸೇನೆ ಮತ್ತು ಎರಡು ರಕ್ಷಣಾ ಸೇವಾ ದಳ (DSC) ತಂಡಗಳನ್ನು ಒಳಗೊಂಡಂತೆ ಕೇಂದ್ರ ಪಡೆಗಳನ್ನು ರಾಜ್ಯದ ದಕ್ಷಿಣ ಮತ್ತು ಮಧ್ಯ … Continued

ಮೊಬೈಲ್ ಕೊಡದ್ದಕ್ಕೆ ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ..!

ಮುಂಬೈ: ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ಆ ರೀತಿಯ ವಿಚಿತ್ರವಾದ ಘಟನೆಯೊಂದು ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ತನ್ನ ಗಂಡನ ತುಟಿಯನ್ನೇ ಕತ್ತರಿಸಿದ್ದಾಳೆ! ಮಸಲ್​ನಲ್ಲಿ 40 ವರ್ಷದ ಖೇಮ್​ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ … Continued

ಕಾಶ್ಮೀರದಲ್ಲಿ ಬೀದಿ ವ್ಯಾಪಾರಿ, ಬಡಗಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳಿಗೆ ಗುಂಡಿಕ್ಕಿದ ಭಯೋತ್ಪಾದಕರು: ಒಬ್ಬ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಶ್ರೀನಗರ: ಕಣಿವೆಯಲ್ಲಿ ನಡೆಯುತ್ತಿರುವ ನಾಗರಿಕ ಹತ್ಯೆಗಳ ಮಧ್ಯಯೇ ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಬಳಿ ಒಬ್ಬ ಬೀದಿ ವ್ಯಾಪಾರಿ ಹಾಗೂ ಪುಲ್ವಾಮದಲ್ಲಿ ಬಡಗಿ ಕೆಲಸ ಮಾಡುತ್ತಿದ್ದ ಮತ್ತೊಬ್ಬನನ್ನು ಅಪರಿಚಿತ ಭಯೋತ್ಪಾದಕರು ಹತ್ಯೆಗೈದಿದ್ದಾರೆ. ಬಿಹಾರದ ಬಂಕಾ ಜಿಲ್ಲೆಯ … Continued

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಡೆಂಗ್ಯೂ: ಏಮ್ಸ್‌

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌)ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮನಮೋಹನ್‌ ಸಿಂಗ್‌ ಅವರ ರಕ್ತದ ಪ್ಲೇಟ್ಲೆಟ್ಸ್ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೃದ್ರೋಗ … Continued

ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷನಾಗುವ ಬಗ್ಗೆ ಯೋಚಿಸುತ್ತೇನೆ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ

ನವದೆಹಲಿ: ತಾನು ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಕುರಿತು ಯೋಚಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು (ಶನಿವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಹುದ್ದೆ ಒಪ್ಪಿಕೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ … Continued

ಕೇರಳ: ಭಾರಿ ಮಳೆಗೆ ಭೂ ಕುಸಿತದಿಂದ 3 ಸಾವು, 10 ಮಂದಿ ನಾಪತ್ತೆ, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ ಮುಂದುವರೆದಿದ್ದು, ರಾಜ್ಯದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಮೃತಪಟ್ಟಿದ್ದು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, … Continued

ವಿಚಿತ್ರವಾದರೂ ಸತ್ಯ: ಕೋವಿಡ್‌ ಲಸಿಕೆ ನೀಡಲು ಮನೆಗೆ ಬಂದ ಆರೋಗ್ಯ ಸಿಬ್ಬಂದಿಗೆ ನಾಗರ ಹಾವು ತೋರಿಸಿ ಹೆದರಿಸಿದ ಮಹಿಳೆ..! ವೀಕ್ಷಿಸಿ

ಅಜ್ಮೇರ್‌: ದೇಶದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನ (Covid 19 Vaccination) ಅತ್ಯಂತ ವೇಗವಾಗಿ, ಯಶಸ್ವಿಯಾಗಿ ನಡೆಯುತ್ತಿದೆ. ಆದರೂ ಕೆಲವು ಪ್ರದೇಶಗಳ ಜನರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಅವರ ಮನವೊಲಿಸಿ ಕೊರೊನಾ ಲಸಿಕೆ ಹಾಕುವುದು ಆರೋಗ್ಯ ಸಿಬ್ಬಂದಿ, ಸ್ಥಳೀಯ ಆಡಳಿತಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವೊಮ್ಮೆ ಆರೋಗ್ಯ ಸಿಬ್ಬಂದಿಗೆ ಬೆದರಿಕೆ ಹಾಕಿದ , ಹಲ್ಲೆ … Continued

ಪದ್ಮಶ್ರೀ ಪುರಸ್ಕೃತ ಹಿಂದುಸ್ತಾನೀ ಸಂಗೀತದ ಖ್ಯಾತ ಗಾಯಕ ರಶೀದ್‌ ಖಾನ್‌ಗೆ ಕೊಲೆ ಬೆದರಿಕೆ: ಇಬ್ಬರ ಬಂಧನ

ಕೋಲ್ಕತ್ತಾ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿಂದುಸ್ತಾನೀ ಶಾಸ್ತ್ರೀಯ ಸಂಗೀತ ಗಾಯಕ ಉಸ್ತಾದ್ ರಶೀದ್ ಖಾನ್ ಗೆ ಕೊಲೆ ಬೆದರಿಕೆ ಮತ್ತು ಸುಲಿಗೆ ಕರೆ ಮಾಡಿದ ಇಬ್ಬರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಹೊಸದಾಗಿ ಅವರ ಬಳಿ ಸೇರಿಕೊಂಡ ಉದ್ಯೋಗಿಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆ ಬೆದರಿಕೆ ಹಾಗೂ ಹಣ ಸುಲಿಗೆ … Continued

ನಾನು ಕಬಡ್ಡಿ ಆಡಿದ್ದು ವಿಡಿಯೊ ಮಾಡಿದವರು ರಾವಣರು: ಸಾದ್ವಿ ಪ್ರಜ್ಞಾ

ಭೋಪಾಲ: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿರುವ ಭೋಪಾಲ ಸಂಸದೆ, ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕಬಡ್ಡಿ ಆಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ವಿಡಿಯೊ ಚಿತ್ರೀಕರಿಸಿ, ಹರಿಬಿಟ್ಟವರನ್ನು ರಾವಣರು ಎಂದು ಹೇಳಿರುವ ಸಂಸದೆ ಪ್ರಜ್ಞಾ, ಹಾಗೆ ಮಾಡಿದವರ ವೃದ್ಧಾಪ್ಯ ಮತ್ತು ಮುಂದಿನ ಜನ್ಮ ಹಾಳಾಗಿ ಹೋಗುತ್ತದೆ ಎಂದು … Continued

ಕಾಂಗ್ರೆಸ್‌ಗೆ ನಾನೇ ಪೂರ್ಣಾವಧಿ ಸಕ್ರಿಯ ಅಧ್ಯಕ್ಷೆ,: ಜಿ- 23 ಗುಂಪಿಗೆ ಕಠಿಣ ಸಂದೇಶ ರವಾನಿಸಿದ ಸೋನಿಯಾ ಗಾಂಧಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಹಾಗೂ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅವರೇ ಕಾಂಗ್ರೆಸ್‌ ಪಕ್ಷಕ್ಕೆ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಕುತೂಲಹ ಕೆರಳಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು (ಶನಿವಾರ) ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಆರಂಭವಾಗಿದೆ. ಕೊರೊನಾದಿಂದ ಒಂದೂವರೆ ವರ್ಷದಿಂದ ನಡೆಯದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) … Continued