ಆರ್ಯನ್‌ ಗುರಿಯಾಗಲು, ಖಾನ್ ಸರ್ ನೇಮ್ ಕಾರಣ”: ನಾಲಿಗೆ ಹರಿಬಿಟ್ಟ ಮೆಹಬೂಬಾ ಮುಫ್ತಿ

ಶ್ರೀನಗರ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್‌ ಪ್ರಕರಣದಲ್ಲಿ ಬಂಧನ ಆಗಿರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ವಿರುದ್ಧ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ. “ಕೇವಲ ಸರ್‌ನೇಮ್‌ ಖಾನ್‌ ಎಂದು ಇರುವುದಕ್ಕೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರನ್ನು … Continued

ಜಮ್ಮು-ಕಾಶ್ಮೀರದಲ್ಲಿ ಐವರು ಯೋಧರು ಹುತಾತ್ಮ

ನವದೆಹಲಿ : ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್ ನ ಪೀರ್ ಪಂಜಾಲ್ ವಲಯದ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಸೈನಿಕರು ಹಾಗೂ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿರುವ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಬಿತ್ತರಿಸಿವೆ. ಆದರೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು … Continued

ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್‌ ಮಿಶ್ರಾ 3 ದಿನ ಪೊಲೀಸ್ ಕಸ್ಟಡಿಗೆ

ಲಕ್ನೋ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಕೇಂದ್ರ ಗೃಹ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾನನ್ನು ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆಶಿಶ್ ಮಿಶ್ರಾಗೆ ಕೋರ್ಟ್‌ ಶಾಕ್ ನೀಡಿದ್ದು, ಮೂರು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಬೇಕಿದೆ. ಶನಿವಾರ ವಿಚಾರಣೆಗೆ ಹಾಜರಾಗಿದ್ದ ಆರೋಪಿ ಆಶಿಶ್ … Continued

ರಾಷ್ಟ್ರ ಪ್ರಶಸ್ತಿ ವಿಜೇತ ಹೆಸರಾಂತ ನಟ ನೆಡುಮುಡಿ ವೇಣು ನಿಧನ

ಮಲಯಾಳಂನ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ನೆಡುಮುಡಿ ವೇಣು ಇಂದು (ಸೋಮವಾರ) ನಿಧನರಾಗಿದ್ದಾರೆ. ಹೆಸರಾಂತ ನಟ ವೇಣು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ರಿಂದ ಚೇತರಿಸಿಕೊಂಡ ನಂತರ ಲಿವರ್ ಸಮಸ್ಯೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ 73 ವರ್ಷದ ವೇಣು ಅವರು ಚಿಕಿತ್ಸೆ ಪಲಕಾರಿಯಾಗಿದೇ ಇಂದು ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅಲಪುಳದ ನೆಡುಮುಡಿಯಲ್ಲಿ ಪಿ. … Continued

ಮನೆಯಲ್ಲಿ ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು?’: ಕಳ್ಳತನ ಮಾಡಿದ ಮನೆ ಮಾಲಕ-ಅಧಿಕಾರಿಗೆ ಪತ್ರ ಬರೆದಿಟ್ಟು ಹೋದ ಕಳ್ಳರು..!

ಭೋಪಾಲ: ಮಧ್ಯಪ್ರದೇಶದ ಉಪ ಜಿಲ್ಲಾಧಿಕಾರಿಯ ಮನೆಗೆ ಕಳ್ಳತನ ಮಾಡಲು ನುಗ್ಗಿದ ಕಳ್ಳರು ಮನೆಯಲ್ಲಿ ಏನೂ ಸಿಗದಿದ್ದಾಗ ಈ ಕುರಿತು ಪತ್ರವೊಂದನ್ನು ಬರೆದಿಟ್ಟು ಹೋದ ವಿಚಿತ್ರ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. “ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು? (ಜಬ್ ಪೈಸೆ ನಹೀ ತೇ ತೋ ಲಾಕ್ ನಹಿ ಕರ್ನಾ ಥಾ ನಾ ಕಲೆಕ್ಟರ್..? ) ಎಂದು … Continued

ಕಾಶ್ಮೀರದಲ್ಲಿ ಎನ್‌ ಕೌಂಟರಿನಲ್ಲಿ ಇಬ್ಬರು ಉಗ್ರರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಹ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಅನಂತ್‍ನಾಗ್ ಜಿಲ್ಲೆಗಳ ಗಡಿ ಭಾಗಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ನಡೆಸಿದ … Continued

ಭಾರತದಲ್ಲಿ 18,132 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ದೈನಂದಿನ ಮಾಹಿತಿಯ ಪ್ರಕಾರ ಭಾರತವು ತನ್ನ ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಸೋಮವಾರ ಇಳಿಕೆ ಕಂಡಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 18,132 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಹಾಗೂ 193 ಸಾವುಗಳನ್ನು ವರದಿ ಮಾಡಿದೆ, ಇದು ಒಟ್ಟು ಸೋಂಕನ್ನು 3,39,71,607 ಕ್ಕೆ ಒಯ್ದಿದೆ. ದೇಶವು 21,563 ಚೇತರಿಕೆಗಳನ್ನು ವರದಿ ಮಾಡಿದೆ, … Continued

ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಿಎಸ್​ಎನ್​ಎಲ್ 4ಜಿ ಮೂಲಕ ಮೊದಲ ಕರೆ ಮಾಡಿದ ಅಶ್ವಿನಿ ವೈಷ್ಣವ್

ನವದೆಹಲಿ: ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಬಿಎಸ್​ಎನ್​ಎಲ್ 4ಜಿ ನೆಟ್​ವರ್ಕ್​ನ ಮೊದಲ ಫೋನ್ ಕರೆ ಮಾಡಿದ್ದಾರೆ. ಈ ಬಗ್ಗೆ, ಟ್ವಿಟರ್ ಮೂಲಕ ಅವರು ಸಂತಸ ಹಂಚಿಕೊಂಡಿದ್ದಾರೆ. ಪ್ರಧಾನಿನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಸಾಕಾರಗೊಳ್ಳುತ್ತಿದೆ ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಇದು ಭಾರತದ್ದೇ ಆದ ಮೊದಲ 4ಜಿ ನೆಟ್​ವರ್ಕ್. ಬಿಎಸ್​ಎನ್​ಎಲ್ 4ಜಿ ಭಾರತದ … Continued

ಹುಬ್ಬಳ್ಳಿಯಲ್ಲಿ ಪೊಲೀಸರಿಂದಲೇ ಗಾಂಜಾ ಮಾರಾಟದ ಆರೋಪ; ಪಿಐ ಸೇರಿ 7 ಸಿಬ್ಬಂದಿ ಅಮಾನತು!

ಹುಬ್ಬಳ್ಳಿ: ಅಪರಾಧಗಳನ್ನು ತಡೆಗಟ್ಟಬೇಕಾದ ಪೊಲೀಸರೇ ಅಪರಾಧ ಕೃತ್ಯಕ್ಕೆ ಇಳಿದರೆ… ಇಂಥದ್ದೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಪರಾಧಗಳನ್ನು ತಡೆಯಬೇಕಾದ ಪೊಲೀಸರಿಂದಲೇ ಅಪರಾಧ ಕೃತ್ಯ ನಡೆಸಿದ್ದಾರೆ. ತಾವು ವಶಪಡಿಸಿಕೊಂಡ ಗಾಂಜಾವನ್ನೇ ಖಾಕೀ ಪಡೆ ಮಾರಾಟ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಆ ಠಾಣೆಯಲ್ಲಿ ಎಲ್ಲರನ್ನೂ ಈಗ ಅಮಾನತು ಮಾಡಲಾಗಿದೆ. ವಶಪಡಿಸಿಕೊಂಡ ಗಾಂಜಾವನ್ನು ಪೊಲೀಸರೇ ಮಾರಾಟ ಮಾಡುತ್ತಿದ್ದರೆಂಬ ಅಂಶ … Continued

ತಾಯಿಯ ಕೊಳೆತ ಶವದ ಜೊತೆಯೇ ವಾಸಿಸುತ್ತಿದ್ದ ಪುತ್ರಿಯರು..! ತಮಿಳುನಾಡಿನಲ್ಲಿ ನಡೆದಿದೆ ಈ ವಿಲಕ್ಷಣ ಘಟನೆ

ಇಬ್ಬರು ಮಹಿಳೆಯರು ತಮ್ಮ ಮೃತ ತಾಯಿಯ ಶವವನ್ನು ನಾಲ್ಕು ದಿನಗಳ ಕಾಲ ಮಧ್ಯ ತಮಿಳುನಾಡಿನ ತಿರುಚಿಯ ಮನಪ್ಪರೈನಲ್ಲಿ ತಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದರು, ದೇವರು ಅವಳನ್ನು ಮರಳಿ ತಮ್ಮ ತಾಯಿಯನ್ನು ಜೀವಂತವಾಗಿಸುತ್ತಾನೆ ಎಂಬ ನಂಬಿಕೆಯಿಂದ ಅವರು ಹೀಗೆ ಮಾಡಿದ್ದರು. ಎಂದು ಆಶಿಸಿದರು. ಈ ವಿಲಕ್ಷಣ ಘಟನೆಯಲ್ಲಿ, ಮಹಿಳೆ ತಮ್ಮ ತಾಯಿಯ ಶವವನ್ನು ತೆಗೆದುಕೊಂಡು ಹೋಗಲು ಪೊಲೀಸರು ಮಾಡಿದ … Continued