ವಿಡಿಯೋ | ಸೋನಾರಪುರದಲ್ಲಿ ಮಮತಾ ಸೋದರಳಿಯ- ಟಿಎಂಸಿ ಸಂಸದ ಅಭಿಷೇಕ ಬ್ಯಾನರ್ಜಿ ಮೇಲೆ ಕಲ್ಲು, ಮೊಟ್ಟೆ ತೂರಾಟ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಸೌತ್ 24 ಪರಗಣ ಜಿಲ್ಲೆಯ ಸೋನಾರಪುರಕ್ಕೆ ಶನಿವಾರ ಭೇಟಿ ನೀಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ ಬ್ಯಾನರ್ಜಿ ಅವರಿಗೆ ತೀವ್ರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಅವರ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಇತ್ತೀಚಿನ ಚುನಾವಣೋತ್ತರ ಹಿಂಸಾಚಾರದಿಂದ ಸಂತ್ರಸ್ತರಾದ ಕುಟುಂಬಗಳನ್ನು ಭೇಟಿ ಮಾಡಲು ಅಭಿಷೇಕ … Continued

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ‘ಕೈ’ ಕೋಟೆಯಲ್ಲಿ ಎಎಪಿ ಜಯಭೇರಿ; ಸ್ಥಾನ ಸುಧಾರಿಸಿಕೊಂಡ ಬಿಜೆಪಿ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇರುವಾಗಲೇ ನಡೆದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ (ಎಎಪಿ) ಜಯಭೇರಿ ಬಾರಿಸಿದೆ. ರಾಜ್ಯದ ಪ್ರಮುಖ ಮಹಾನಗರ ಪಾಲಿಕೆಗಳು ಮತ್ತು ಮುನ್ಸಿಪಲ್ ಕೌನ್ಸಿಲ್‌ಗಳಲ್ಲಿ ಎಎಪಿ ಸ್ಪಷ್ಟ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಫಲಿತಾಂಶವನ್ನು ತಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಸೂಚಿಗೆ … Continued

5 ತಿಂಗಳ ಸ್ಕೆಚ್‌, ಚಾಕು ಇರಿತ, ಸುಟ್ಟ ಕಾರಿನಲ್ಲಿ ಶವಗಳು : ಕುಟುಂಸ್ಥರ ಭೀಕರ ಹತ್ಯಾಕಾಂಡಕ್ಕೆ ಅಪ್ರಾಪ್ತನೇ ಮಾಸ್ಟರ್ ಮೈಂಡ್ !

ಜೈಪುರ: ಕೌಟುಂಬಿಕ ಕಲಹ, ಆಸ್ತಿ ವಿವಾದದ ಆರೋಪ, ತಿಂಗಳುಗಟ್ಟಲೆ ನಡೆಸಿದ ಮಾಸ್ಟರ್ ಪ್ಲಾನ್ ಮತ್ತು ಅಪರಾಧ ಜಗತ್ತಿನ ವೆಬ್ ಸೀರೀಸ್‌ಗಳ ಮೇಲಿದ್ದ ಅತಿಯಾದ ವ್ಯಾಮೋಹದಿಂದ ಅಪರಾಧದ ಗೀಳು ! ಅಜ್ಮೀರ್‌ನ ಮಾಜಿ ಸರಪಂಚ ರಾಮ ಸಿಂಗ್ ಚೌಧರಿ, ಅವರ ಎರಡನೇ ಪತ್ನಿ, ತಾಯಿ ಮತ್ತು ಸೋದರ ಸೊಸೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊರಹಾಕಿರುವ … Continued

ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ

ನವದೆಹಲಿ: ದೇಶದ ಬಹುತೇಕ ಭಾಗಗಳು ಭೀಕರ ಬೇಸಿಗೆಯ ಬಿಸಿಲ ಧಗೆಯಿಂದ ತತ್ತರಿಸುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಹಾಗೂ ಕೃಷಿ ವಲಯಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ಹವಾಮಾನ ಇಲಾಖೆಯು ಶುಕ್ರವಾರದ ತನ್ನ ಮುನ್ಸೂಚನೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯ ನೈಋತ್ಯ ಮುಂಗಾರು ಮಳೆಯ ಪ್ರಮಾಣವನ್ನು ಶೇ. 92 ರಿಂದ ಶೇ. 90ಕ್ಕೆ ಇಳಿಕೆ … Continued

ಚಂದ್ರನ ಮೇಲೆ ಇಸ್ರೋದ ಮಹತ್ವದ ಆವಿಷ್ಕಾರ ; ಚಂದ್ರನ ದಕ್ಷಿಣ ಧ್ರುವದಲ್ಲಿ ʼಹಿಮʼ ಪತ್ತೆ ಮಾಡಿದ ಚಂದ್ರಯಾನ-2; ಇದು ಯಾಕೆ ಮುಖ್ಯ?

ಅಹಮದಾಬಾದ್: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ ಯೋಜನೆ ಮತ್ತೊಂದು ಐತಿಹಾಸಿಕ ವೈಜ್ಞಾನಿಕ ಮೈಲಿಗಲ್ಲನ್ನು ಸಾಧಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿದ್ದ ಎರಡನೇ ಚಂದ್ರಯಾನ (ಚಂದ್ರಯಾನ-2) ಮಿಷನ್‌ನ ದತ್ತಾಂಶಗಳನ್ನು ವಿಶ್ಲೇಷಿಸಿರುವ ವಿಜ್ಞಾನಿಗಳು, ಚಂದ್ರನ ದಕ್ಷಿಣ ಧ್ರುವದ ಬಳಿಯ ಕುಳಿಗಳ (Craters) ಮೇಲ್ಮೈ ಅಡಿಯಲ್ಲಿ ನೀರ್ಗಲ್ಲು ಅಥವಾ ಹಿಮ (Water-ice) ಇರುವುದಕ್ಕೆ ಬಲವಾದ ಪುರಾವೆಗಳನ್ನು ಪತ್ತೆಹಚ್ಚಿದ್ದಾರೆ. ಸೌರಮಂಡಲದ … Continued

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಗುರುವಾರ ಪಕ್ಷದ ಸಂಘಟನಾತ್ಮಕ ವಿಭಾಗದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದ್ದು, ದೇಶದ ಪ್ರಮುಖ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ತ್ರಿಪುರಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಪಕ್ಷದ … Continued

ಸೌದಿ ಜೈಲಿನಲ್ಲಿ 20 ವರ್ಷ, ಮಲಯಾಳಿಗಳಿಂದ 34 ಕೋಟಿ ರೂ. ‘ಬ್ಲಡ್ ಮನಿ’ ಸಂಗ್ರಹ :ಗಲ್ಲು ಶಿಕ್ಷೆಯಿಂದ ಪಾರಾಗಿ ತಾಯ್ನಾಡಿಗೆ ಮರಳಿದ ವ್ಯಕ್ತಿ !

ಕೋಝಿಕ್ಕೋಡ್ : ವಿದೇಶಿ ಜೈಲಿನಲ್ಲಿ ಸುದೀರ್ಘ 20 ವರ್ಷಗಳ ಕಾಲ ಮರಣದಂಡನೆ ಭೀತಿಯಲ್ಲಿ ದಿನದೂಡುತ್ತಿದ್ದ ಕೇರಳದ ಕೋಝಿಕ್ಕೋಡ್ ಮೂಲದ ವ್ಯಕ್ತಿ ಕೊನೆಗೂ ಗುರುವಾರ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ಅರೇಬಿಯಾದ ಜೈಲಿನಿಂದ ಬಿಡುಗಡೆಯಾಗಿ ಬಂದ ಅಬ್ದುಲ್ ರಹೀಮ್ಅವರನ್ನು ಕರಿಪುರ ವಿಮಾನ ನಿಲ್ದಾಣದಲ್ಲಿ ಅವರ ಕುಟುಂಬಸ್ಥರು, ಆಪ್ತರು ಹರ್ಷೋದ್ಗಾರಗಳೊಂದಿಗೆ ಬರಮಾಡಿಕೊಂಡರು. ಸೌದಿ ನಿಯಮಾವಳಿಗಳ ಪ್ರಕಾರ ಬರೋಬ್ಬರಿ 34 ಕೋಟಿ … Continued

ತ್ವಿಶಾ ಶರ್ಮಾ ಸಾವು : ಅತ್ತೆ-ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ ಬಂಧಿಸಿದ ಸಿಬಿಐ

ಭೋಪಾಲ್‌ : ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಬಿಐ (CBI) ಅಧಿಕಾರಿಗಳು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ತ್ವಿಶಾ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಭೋಪಾಲ್‌ನಲ್ಲಿ ಗುರುವಾರ ಬಂಧಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಟ್ವಿಶಾ ಶರ್ಮಾ ಅವರು ತಮ್ಮ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಗಿರಿಬಾಲಾ ಸಿಂಗ್ ಅವರಿಗೆ ಮೇ 15 ರಂದು ಭೋಪಾಲ್‌ನ 10ನೇ … Continued

ವಿಡಿಯೋ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು … Continued

ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ ; ಯುಸಿಸಿ ತಂದ ದೇಶದ 3ನೇ ರಾಜ್ಯ

ಗುವಾಹತಿ: ವಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯೇ, ಅಸ್ಸಾಂ ವಿಧಾನಸಭೆಯು ಬುಧವಾರ ‘ಏಕರೂಪ ನಾಗರಿಕ ಸಂಹಿತೆ (UCC) ಅಸ್ಸಾಂ, 2026’ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಿದೆ. ಇದರೊಂದಿಗೆ ಉತ್ತರಾಖಂಡ ಮತ್ತು ಗುಜರಾತ್ ನಂತರ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸಿದ ದೇಶದ ಮೂರನೇ ರಾಜ್ಯವಾಗಿ ಅಸ್ಸಾಂ ಹೊರಹೊಮ್ಮಿದೆ. (ಗೋವಾದಲ್ಲಿ ಪೋರ್ಚುಗೀಸ್ ಆಳ್ವಿಕೆಯ ಕಾಲದಿಂದಲೇ ಸಾಮಾನ್ಯ ನಾಗರಿಕ ಕಾನೂನು … Continued