ಗಣರಾಜ್ಯೋತ್ಸವದಂದು ರೈತನ ಸಾವು:ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಕುಟುಂಬಸ್ಥರಿಂದ ಹೈಕೋರ್ಟಿಗೆ ಮೊರೆ

ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್‌ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ೨೫ ವರ್ಷದ ನವೀತ್‌ ಸಿಂಗ್‌ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್‌ ಸಿಂಗ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು … Continued

ಪಾಂಗೋಂಗ್‌ ಲೇಕ್‌ನಿಂದ ಹಂಹಂತವಾಗಿ ಸೈನ್ಯ ಹಿಂತೆಗೆತ: ರಾಜನಾಥ್‌

ನವದೆಹಲಿ: ಭಾರತ ಹಾಗೂ ಚೀನಾ ದೇಶಗಳ ಮಾತುಕತೆಯಿಂದಾಗಿ ಪಾಂಗೋಂಗ್‌ ಸರೋವರದ ಉತ್ತರ ಹಾಗೂ ದಕ್ಷಿಣ ತೀರದಿಂದ ಸೈನ್ಯ ಹಿಂತೆಗೆಯುವ ಒಪ್ಪಂದಕ್ಕೆ ಕಾರಣವಾಗಿದ್ದು, ಉಭಯ ದೇಶಗಳು ಸಮನ್ವಯತೆಯಿಂದ ಹಂತ ಹಂತವಾಗಿ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳಲಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಪೂರ್ವ ಲಡಾಕ್‌ನ ಪಂಗೊಂಗ್ ಸರೋವರದ ದಕ್ಷಿಣ ಮತ್ತು ಉತ್ತರದ ದಡಗಳಲ್ಲಿ ಭಾರತೀಯ ಮತ್ತು … Continued

ಸೋಶಿಯಲ್‌ ಮೀಡಿಯಾ ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಅವಕಾಶವಿಲ್ಲ: ಟ್ವಿಟ್ಟರ್‌ಗೆ ಸಚಿವರ ಖಡಕ್‌ ಸಂದೇಶ

ನವ ದೆಹಲಿ; ಸಾಮಾಜಿಕ ಮಾಧ್ಯಮ (ಸೋಶಿಯಲ್‌ ಮೀಡಿಯಾ)ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಭಾರತದಲ್ಲಿ ಅವಕಾಶವಿಲ್ಲ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹಾಗೂ ದ್ವೇಷದ ಸುದ್ದಿ ಹರಡುವುದನ್ನು ಸರಕಾರ ಸಹಿಸುವುದಿಲ್ಲ ಸಾಮಾಜಿಕ ಜಾಲತಾಣಗಳ ದೈತ್ಯರಾದ ಟ್ವಿಟರ್‌, ಫೇಸ್‌ಬುಕ್‌ ಹಾಗೂ ವ್ಯಾಟ್ಸಪ್‌ ನಮ್ಮ ನೆಲದ ನಿಯಮವನ್ನು ಪಾಲನೆ ಮಾಡಬೇಕು … Continued

ತೆಂಡುಲ್ಕರ್‌, ಲತಾ ಮಂಗೇಶ್ಕರ್‌ ವಿರುದ್ಧ ತನಿಖೆಗೆ ಆದೇಶ:ರಾಜ್ಯಸಭೆಯಲ್ಲಿ ಚರ್ಚೆಗೆ ನೋಟಿಸ್‌

ನವ ದೆಹಲಿ: ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಬಿಜೆಪಿ ಸಂಸದ ಭಗವತ್ ಕರದ್ ಗುರುವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೋಟಿಸ್ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಸಂಸದರು ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಬಹುದಾಗಿದ್ದು, ರೈತರ ಪ್ರತಿಭಟನೆ ಕುರಿತು ಸಚಿನ್ ತೆಂಡೂಲ್ಕರ್, ಅಕ್ಷಯ್ ಕುಮಾರ್, ಲತಾ … Continued

ಎಲ್‌ಎಸಿ: ಭಾರತ-ಚೀನಾ ಮಾತುಕತೆ ಮುಂದುವರಿಕೆ

ನವ ದೆಹಲಿ; ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಎಲ್ಲಾ ಘರ್ಷಣೆ ಹಂತಗಳಲ್ಲಿ ಶಾಂತಿ ಪುನಃಸ್ಥಾಪಿಸಲು ಭಾರತವು ಚೀನಾದೊಂದಿಗೆ ಮಾತುಕತೆ ಮುಂದುವರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಲೀಧರನ್ ಬುಧವಾರ ಸಂಸತ್ತಿನಲ್ಲಿ ತಿಳಿಸಿದರು. ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಪ್ರಶ್ನೆಗೆ ಉತ್ತರಿಸಿದ ಮುರಲೀಧರನ್, ಕಳೆದ ವರ್ಷದ ಏಪ್ರಿಲ್-ಮೇಯಿಂದ ಎಲ್‌ಎಸಿಯ ಪಶ್ಚಿಮ ವಲಯದಲ್ಲಿ … Continued

ಅಧಿಕಾರ ಬದಲಾವಣೆ ನಮ್ಮ ಗುರಿಯಲ್ಲ,ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕು ಅಷ್ಟೆ 

ನವ ದೆಹಲಿ: ಆಂದೋಲನ ನಡೆಸುತ್ತಿರುವ ರೈತರು ಕೇಂದ್ರದಲ್ಲಿ ಯಾವುದೇ ಅಧಿಕಾರ ಬದಲಾವಣೆಯ ಗುರಿ ಹೊಂದಿಲ್ಲ, ಆದರೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕಿದೆ ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯಿತ್‌ ಬುಧವಾರ ಪ್ರತಿಪಾದಿಸಿದರು. ಅನೇಕ ರೈತ ನಾಯಕರು ಆಂದೋಲನವನ್ನು ವಿಸ್ತರಿಸಲು ದೇಶದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದರು. ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪ್ರದರ್ಶನದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ … Continued

ಕಾಂಗ್ರೆಸ್‌ ಅಧಕಾರಕ್ಕೆ ಬಂದರೆ ಕೃಷಿ ಕಾಯ್ದೆ ರದ್ದು:ಪ್ರಿಯಾಂಕಾ

ಲಖನೌ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲಾಗುವುದು ಎಂದು ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬುಧವಾರ ಉತ್ತರ ಪ್ರದೇಶದಲ್ಲಿ ಸಹಾರನ್ ಪುರದಲ್ಲಿ ಕಿಸಾನ್‌ ಪಂಚಾಯತ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಅವಮಾನಿಸುತ್ತಿದ್ದಾರೆ … Continued

ಫೆ,೧೮ರಂದು ರಾಷ್ಟ್ರವ್ಯಾಪಿ ರೈಲು ತಡೆ:ಸಂಯುಕ್ತ ಕಿಸಾನ್‌ ಮೋರ್ಚಾ ಘೋಷಣೆ

ನವ ದೆಹಲಿ: ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿದ ರೈತ ಸಂಘಗಳು ಫೆಬ್ರವರಿ 18 ರಂದು ರಾಷ್ಟ್ರವ್ಯಾಪಿ ನಾಲ್ಕು ತಾಸುಗಳ ರೈಲು ತಡೆ ಚಳವಳಿ ಮಾಡುವುದಾಗಿ ಪ್ರಕಟಿಸಿವೆ. ಫೆಬ್ರವರಿ 12 ರಿಂದ ರಾಜಸ್ಥಾನದಲ್ಲಿ ಟೋಲ್ ಸಂಗ್ರಹಣೆಗೆ ನೀಡುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ … Continued

೩೪ ಸಾವು, ಸುರಂಗದೊಳಗೆ ಕಾರ್ಮಿಕರ ಪತ್ತೆಗೆ ಡ್ರೋನ್‌-ಡಾಗ್ ಸ್ಕ್ವಾಡ್‌ ಬಳಕೆ

ಉತ್ತರಾಖಂಡ: ಚಮೋಲಿ ಜಿಲ್ಲೆಯ ತಪೋವನ್‌ನಲ್ಲಿರುವ ಎನ್‌ಟಿಪಿಸಿ ಹೈಡಲ್ ವಿದ್ಯುತ್ ಯೋಜನೆಯಲ್ಲಿ 1.7 ಕಿಲೋಮೀಟರ್ ಉದ್ದದ ಸುರಂಗದಲ್ಲಿ ಸುಮಾರು 35 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ.ಬುಧವಾರ ಸಂಜೆ ತನಕ, 1.7 ಕಿ.ಮೀ ಉದ್ದದ ಸುರಂಗದೊಳಗೆ 100 ಮೀಟರ್ ಸುರಂಗ ತೆರವುಗೊಳಿಸಲು ಸಾಧ್ಯವಾಯಿತು. 100 ಮೀ ನಂತರ ಪ್ರವಾಹದಿಂದ ತಂದ ದೊಡ್ಡ ಪ್ರಮಾಣದ ಕೆಸರು ತುಂಬಿದ್ದರಿಂದ ತೆರವಿಗೆ ಅಡಚಣೆಯಾಗಿದೆ. ಡ್ರೋನ್‌ಗಳು ಮತ್ತು … Continued

ಕೃಷಿ ಕಾಯ್ದೆಯಲ್ಲಿ ತೊಡಕಿದ್ದರೆ ಬದಲಾವಣೆಗೆ ಸಿದ್ಧ: ರೈತರಿಗೆ ಪ್ರಧಾನಿ ಅಭಯ

ನವದೆಹಲಿ: ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ಬಲವಂತವಾಗಿಲ್ಲ ಮತ್ತು ಆಯ್ಕೆಗಳನ್ನು ಮಾತ್ರ ನೀಡುತ್ತವೆ. ಒಂದೊಮ್ಮೆ ರೈತರು ಮನವರಿಕೆಯಾಗುವ ಸಮರ್ಥ ಸಲಹೆಯೊಂದಿಗೆ ಬಂದರೆ ಕಾನೂನಿನಲ್ಲಿ ಬದಲಾವಣೆ ಮಾಡಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೃಷಿ ಮಾರುಕಟ್ಟೆಗಳ ಹಳೆಯ ವ್ಯವಸ್ಥೆ ಮತ್ತು ಎಂಎಸ್‌ಪಿ ಮುಂದುವರಿಯುತ್ತದೆ ಎಂದು ಪುನರುಚ್ಚರಿಸಿದ ಅವರು, … Continued