ಎಐಎಡಿಎಂಕೆಗೆ ಮತ್ತೊಂದು ಆಘಾತ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂ ಟಿವಿಕೆ ಪಕ್ಷ ಸೇರಿದ ಮೂವರು ಶಾಸಕರು !

 ಚೆನ್ನೈ: ಇತ್ತೀಚಿನ ಚುನಾವಣಾ ಸೋಲಿನ ಬೆನ್ನಲ್ಲೇ ತೀವ್ರ ಆಂತರಿಕ ಕಲಹಕ್ಕೆ ಸಿಲುಕಿರುವ ಎಐಎಡಿಎಂಕೆಗೆ (AIADMK) ಸೋಮವಾರ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಪಕ್ಷದ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತದನಂತರ ಮುಖ್ಯಮಂತ್ರಿ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶಾಸಕರಾದ ಮರಗತಂ ಕುಮಾರವೇಲು, ಜಯಕುಮಾರ ಮತ್ತು … Continued

ವಿಡಿಯೋ | ಕಗ್ಗತ್ತಲಿನಲ್ಲಿ ಭಾರತ-ಪಾಕ್‌ ಗಡಿಯಲ್ಲಿ ʼಹೊಳೆಯುವ ಬೆಳಕಿನ ರೇಖೆʼ : ವಿಮಾನದಿಂದ ಪೈಲಟ್ ಸೆರೆಹಿಡಿದ ಅಪರೂಪದ ದೃಶ್ಯ !

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯು ಆಕಾಶದಿಂದ ನೋಡಿದಾಗಲೂ ಎಷ್ಟು ಸ್ಪಷ್ಟವಾಗಿ ಮತ್ತು ಆಕರ್ಷಕವಾಗಿ ಕಾಣುತ್ತದೆ ಎಂಬುದನ್ನು ತೋರಿಸುವ ಅದ್ಭುತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಂಡಿಗೊ (IndiGo) ವಿಮಾನದ ಪೈಲಟ್ ಕ್ಯಾಪ್ಟನ್ ಪ್ರದೀಪ ಕೃಷ್ಣನ್ ಅವರು ಕಾಕ್‌ಪಿಟ್‌ನಿಂದ ರಾತ್ರಿಯ ಸಮಯದಲ್ಲಿ ಚಿತ್ರೀಕರಿಸಿದ ಈ ಅಪರೂಪದ ದೃಶ್ಯ ನೆಟ್ಟಿಗರನ್ನು … Continued

‘ಡಾನ್ 3’ ವಿವಾದ: ಸಿನಿಮಾ ಕಾರ್ಮಿಕರ ಒಕ್ಕೂಟದಿಂದ ಸೂಪರ್‌ಸ್ಟಾರ್ ರಣವೀರ ಸಿಂಗ್‌ಗೆ ‘ಅಸಹಕಾರ’ದ ನಿಷೇಧ

ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯ್ಸ್ (FWICE) ನಟ ರಣವೀರ ಸಿಂಗ್ ವಿರುದ್ಧ ‘ಅಸಹಕಾರ’ (Non cooperation) ಆದೇಶ ಹೊರಡಿಸಿದ್ದು, ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ‘ಡಾನ್ 3’ (Don 3) … Continued

ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಬೆಲೆ ಮತ್ತೆ ಹೆಚ್ಚಳ

ನವದೆಹಲಿ: ದೇಶದಲ್ಲಿ ಮತ್ತೆ ತೈಲ ಬೆಲೆಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಳ ಹಾಗೂ ರೂಪಾಯಿ ಮೌಲ್ಯದ ಕುಸಿತದ ಹಿನ್ನೆಲೆಯಲ್ಲಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ₹2.61 ರಿಂದ ₹2.71 ವರೆಗೆ ಹೆಚ್ಚಿಸಿವೆ. ಕಳೆದ ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದಿರುವ ನಾಲ್ಕನೇ ದರ ಪರಿಷ್ಕರಣೆ … Continued

“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ತ್ವಿಷಾ ಶರ್ಮಾ ಸಾವಿನ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ನವದೆಹಲಿ: ಯುವತಿ ತ್ವಿಷಾ ಶರ್ಮಾ ಅವರ ಶಂಕಾಸ್ಪದ ವರದಕ್ಷಿಣೆ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಮಾಧ್ಯಮ ವರದಿಗಳು ಮತ್ತು ಘಟನೆಯ ಗಂಭೀರತೆಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಶನಿವಾರ ಸ್ವಯಂಪ್ರೇರಿತವಾಗಿ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ.  ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ … Continued

10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ಮತ್ತು ಪಶ್ಚಿಮ ಏಷ್ಯಾದಲ್ಲಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಸಾರ್ವಜನಿಕ ವಲಯದ ತೈಲ ಕಂಪನಿಗಳು ಶನಿವಾರ ದೇಶಾದ್ಯಂತ ಇಂಧನ ದರಗಳನ್ನು ಮತ್ತೊಮ್ಮೆ ಪರಿಷ್ಕರಿಸಿವೆ. ಈ ತಿಂಗಳಲ್ಲೇ ನಡೆದಿರುವ ಮೂರನೇ ಬೆಲೆ ಏರಿಕೆ ಇದಾಗಿದ್ದು, ಲೀಟರ್ ಪೆಟ್ರೋಲ್ ದರದಲ್ಲಿ 87 ಪೈಸೆ ಹಾಗೂ ಡೀಸೆಲ್ ದರದಲ್ಲಿ … Continued

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ ; ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸಿಗುವುದೇ 3ನೇ 2ರಷ್ಟು ಬಹುಮತ ?

ನವದೆಹಲಿ: ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತೆರವಾಗಲಿರುವ 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಮತದಾನ ಮುಗಿದ ತಕ್ಷಣ ಅಂದೇ ಸಂಜೆ ಮತ ಎಣಿಕೆ ಕಾರ್ಯವೂ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಪ್ರಸಕ್ತ ಸಾಲಿನ ಜೂನ್ 21 ರಿಂದ ಜುಲೈ 19 … Continued

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಸಾವು

ಮುಂಬೈ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಶುಕ್ರವಾರ (ಮೇ 22)  ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಅರಣ್ಯ ಪ್ರದೇಶಕ್ಕೆ ತೇಂದು ಎಲೆಗಳನ್ನು ಸಂಗ್ರಹಿಸಲು ಹೋಗಿದ್ದ 13 ಮಹಿಳೆಯರ ಗುಂಪಿನ ಮೇಲೆ ಹುಲಿ ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಸಿಂದೇವಾಹಿ ತಹಸಿಲ್‌ನ ಗುಂಜೆವಾಹಿ ಗ್ರಾಮದ ನಿವಾಸಿಗಳಾದ … Continued

ತಂದೆ-ತಾಯಿ ಐಎಎಸ್ ಅಧಿಕಾರಿಗಳಾಗಿದ್ದರೆ ಮಕ್ಕಳಿಗೆ ಮೀಸಲಾತಿ ಯಾಕೆ ಬೇಕು : ಸುಪ್ರೀಂ ಕೋರ್ಟ್‌ ಪ್ರಶ್ನೆ

ನವದೆಹಲಿ: ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿ ಸಾಮಾಜಿಕವಾಗಿ ಮುನ್ನಡೆದಿರುವ ಕುಟುಂಬಗಳ ಮಕ್ಕಳಿಗೆ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನ ಪಡೆಯುವುದನ್ನು ಮುಂದುವರಿಸಬೇಕೇ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ. “ತಂದೆ-ತಾಯಿ ಇಬ್ಬರೂ ಐಎಎಸ್ (IAS) ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಏಕೆ ಬೇಕು? ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದಿಂದ ಸಾಮಾಜಿಕವಾಗಿ ಸ್ಥಾನಮಾನ ಸುಧಾರಿಸುತ್ತದೆ. … Continued