ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು

  ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು ನವ ದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಭೇಟಿಯಾಗಲು ಅಕಾಲಿ ದಳ, ಡಿಎಂಕೆ, ಎನ್‌ಸಿಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ ೧೭ ಸಂಸದರನ್ನು ಘಾಜಿಪುರ ಗಡಿಯನ್ನು ತಲುಪದಂತೆ ಗುರುವಾರ ಪೊಲೀಸರು ತಡೆದರು. ಪ್ರತಿಭಟನಾ ನಿರತ ರೈತರ ಭೇಟಿಯನ್ನು … Continued

ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್‌ನವರೂ ಭಾಗಿ..!

  ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ … Continued

ಶಶಿಕಲಾ ಸ್ವಾಗತಕ್ಕೆ ನಿಂತರೆ ಎಐಎಡಿಎಂಕೆಯಿಂದ ವಜಾ

  ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರ ಬೆಂಬಲಿಗರ ಮೇಲೆ ಎಐಎಡಿಎಂಕೆ ಕ್ರಮ ಕೈಗೊಳ್ಳಲಾರಂಭಿಸಿದೆ. .ಶಶಿಕಲಾ ಬೆಂಗಳೂರು ಜೈಲಿನಿಂದ ಬಿಡುಗಡೆಯಾದಾಗಿನಿಂದ, ಅವರನ್ನು ‘ಪಕ್ಷದ ಪ್ರಧಾನ ಕಾರ್ಯದರ್ಶಿ’ ಎಂದು ಸ್ವಾಗತಿಸುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪಕ್ಷವು ಹಲವಾರು ಕಾರ್ಯಕರ್ತರನ್ನು ವಜಾ ಮಾಡಿದೆ. ಪಕ್ಷವು 2017 ರಲ್ಲಿ ಶಶಿಕಲಾ ಅವರನ್ನು ಹೊರಹಾಕಿತ್ತು. ಅಕ್ರಮ … Continued

ಭಾರತದಲ್ಲಿ 12,899 ಕೊರೋನು ಸೋಂಕು

ನವ ದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 12,899 ಕೊರೋನು ಸೋಂಕುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಭಾರತದ ಒಟ್ಟು ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 1,07,90,183 ಆಗಿದ್ದು, ಕೋವಿಡ್ -19 ವಿರುದ್ಧ ಒಟ್ಟು 44,49,552 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯದಹೇಳಿದೆ. ಭಾರತವು ಈ ರೋಗದ ವಿರುದ್ಧ ವಿಶ್ವದ ಅತಿದೊಡ್ಡ ಇನಾಕ್ಯುಲೇಷನ್ … Continued

ಪ್ರಧಾನಿ ಸಹೋದರನಿಂದ ಲಕ್ನೋ ಏರ್‌ಪೋರ್ಟ್‌ನಲ್ಲಿ ಧರಣಿ..!

ಲಕ್ನೊ:  ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿಯಲ್ಲಿ ನಡೆಸಿದ ವಿದ್ಯಾಮನ ನಡೆದಿದೆ. ಅಖಿಲ ಭಾರತ ನ್ಯಾಯೋಚಿತ ಬೆಲೆ ಅಂಗಡಿಗಳ ಮಾರಾಟಗಾರರ ಒಕ್ಕೂಟದ (ಎಐಎಫ್‌ಪಿಎಸ್‌ಡಿಎಫ್) ಉಪಾಧ್ಯಕ್ಷರಾದ  ಪ್ರಹ್ಲಾದ್ ಮೋದಿ  ಲಕ್ನೋ ಪೊಲೀಸರ ಕಾರ್ಯವೈಖರಿಯನ್ನು ಪ್ರಶ್ನಿಸಿ ತಮ್ಮ ಸಹಚರರನ್ನು   ತಕ್ಷಣದಿಂದ ಬಿಡುಗಡೆ ಮಾಡದಿದ್ದರೆ ಅನಿರ್ದಿಷ್ಟ ಉಪವಾಸ … Continued

ಮಹಾತ್ಮ ಗಾಂಧಿ ಹೆಸರೂ ಎಂʼನಿಂದಲೇ ಆರಂಭ: ರಾಹುಲ್‌ಗೆ ಜಾವಡೆಕರ್‌ ತಿರುಗೇಟು

ನವ ದೆಹಲಿ: ಮಹಾತ್ಮ ಗಾಂಧಿಯವರ ಹೆಸರು ಸಹ ಎಂ ನಿಂದಲೇ ಆರಂಭವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವಡೆಕರ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಜಗತ್ತಿನಲ್ಲಿರುವ  ಅನೇಕ ಸರ್ವಾಧಿಕಾರಿಗಳ   ಹೆಸರು ಎಂ ಇಂದ ಆರಂಭವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌  ಪ್ರಧಾನಿ ಮೋದಿ ಅವರಿಗೆ ಹೇಳುವ ಅರ್ಥದಲ್ಲಿತ್ತು.  ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಜಾವಡೆಕರ, … Continued

ಪ್ರಗತಿಗಾಗಿ ಭಾರತವು ಒಟ್ಟಾಗಿ ನಿಂತಿದೆ: ಅಮಿತ್‌ ಶಾ

ನವ ದೆಹಲಿ: ಪ್ರಚಾರವು ಭಾರತದ ಏಕತೆಗೆ ಭಂಗ ತರುವುದಿಲ್ಲ ಅಥವಾ ಭಾರತದ ಭವಿಷ್ಯವನ್ನೂ ನಿರ್ಧರಿಸುವುದಿಲ್ಲ. ಭಾರತವು ಒಗ್ಗಟ್ಟಿನಿಂದ ಮತ್ತು ಪ್ರಗತಿಯನ್ನು ಸಾಧಿಸಲು ಒಟ್ಟಾಗಿ ನಿಂತಿದೆ  ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಅವರು ಇಂಡಿಯಾ ಅಗೆನೆಸ್ಟ್‌ ಪ್ರೊಪಗಂಡ ಮತ್ತು   ಇಂಡಿಯಾ ಟುಗೆದರ್ ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಹೀಗೆ ಬರೆದಿದ್ದಾರೆ. ಅನೇಕ ಮಂತ್ರಿಗಳು ಮತ್ತು ಬಿಜೆಪಿ … Continued

ಇಂಡಿಯಾ ಟುಗೆದರ್‌: ಕೇಂದ್ರ ಸಚಿವರಿಂದ ಸೋಶಿಯಲ್‌ ಮೀಡಿಯಾ ಚಳವಳಿ

ನವ ದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ   ರೈತರ ಪ್ರತಿಭಟನೆಗೆ ‘ಅಂತಾರಾಷ್ಟ್ರೀಯ ಪ್ರಚೋದನೆ’ ಖಂಡಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಎಲ್ಲ ಸಚಿವರು    ಈ ಹೇಳಿಕೆ ಖಂಡಿಸಿ  # ಇಂಡಿಯಾ ಟುಗೆದರ್ ಮತ್ತು # ಇಂಡಿಯಾ ಅಗೆನೆಸ್ಟ್‌ ಪ್ರೊಪಗೆಂಡ ಎಂಬ ಸಾಮಾಜಿಕ ಜಾಲತಾಣದ ಚಳವಳಿ ಆರಂಭಿಸಿದ್ದಾರೆ. ‌ ಇದು ಸಾಮಾಜಿಕ ಮಾಧ್ಯಮದ … Continued

ಎನ್‌ಸಿಪಿಗೆ ಬಿಜೆಪಿ ಶಾಸಕನ ೫ ಕೋಟಿ ರೂ. ದೇಣಿಗೆ !

ಮುಂಬೈ: ಶರದ್‌ ಪವಾರ್‌ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ೨೦೧೯-೨೦ನೇ ಸಾಲಿನಲ್ಲಿ ೫೯.೯೪ ಕೋಟಿ ರೂ. ಪಕ್ಷದ ದೇಣಿಗೆ ಸಂಗ್ರಹ ಮಾಡಿದ್ದು, ಕಳೆದ ವರ್ಷ ಪಕ್ಷ ಕೇವಲ ೧೨.೦೫ ಕೋಟಿ ರೂ. ದೇಣಿಗೆ ಸಂಗ್ರಹಿಸಿತ್ತು. ಶಿವಸೇನಾ, ಕಾಂಗ್ರೆಸ್‌ ನೊಂದಿಗೆ ಮಹಾ ವಿಕಾಸ ಅಗಾಢಿ ಸರಕಾರ ನಡೆಸುತ್ತಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಹಣ ಹರಿದು … Continued

ಟ್ವಿಟರ್‌ಗೆ ಕೇಂದ್ರದ ನೋಟಿಸ್‌

ನವದೆಹಲಿ: ರೈತರ ನರಮೇಧ ಎಂಬಂತೆ ತಪ್ಪು ಮಾಹಿತಿಯಿರುವ ಹ್ಯಾಷ್ ಟ್ಯಾಗ್ ಹೊಂದಿರುವ ಖಾತೆಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರಕಾರ ಮೈಕ್ರೊ ಬ್ಲಾಗಿಂಗ್‌ ಸೈಟ್‌ ಟ್ವಿಟರ್‌ಗೆ ನೊಟೀಸ್‌ ನೀಡಿದ್ದು, ಆದೇಶ ಪಾಲನೆಗೆ ತಪ್ಪಿದರೆ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಎಲೆಕ್ಟ್ರಾನಿಕ್ಸ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ-೨೦೦೦ರ ಕಾಯ್ದೆಯ ೬೯ ಎ ಅನುಚ್ಛೇದದಡಿ ತುರ್ತು ಮಧ್ಯಂತರ … Continued