ರೈತರ ಆಂದೋಳನ:ಇಂದು ಸರ್ವಪಕ್ಷಗಳ ಸಭೆ ಕರೆದ ಪಂಜಾಬ್‌ ಸಿಎಂ

ಚಂಡಿಗಡ: ಕೃಷಿ ಕಾನೂನುಗಳ ಕುರಿತಂತೆ ದೇಶದ  ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಆಂದೋಳನ ಹಾಗೂ ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಂಗಳವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದ ನಂತರ ಪೊಲೀಸರು ಪ್ರಕರಣ ದಾಖಲಿಸಿರುವ  ರೈತರ ಪರವಾಗಿ ವಾದ ಮಂಡಿಸಲು ಪಂಜಾಬ್‌ ಸರ್ಕಾರ  70 ವಕೀಲರ ತಂಡವನ್ನು ನಿಯೋಜಿಸಿದೆ ಎಂದು … Continued

ಬಜೆಟ್: ಆ‌ರೋಗ್ಯ ಕ್ಷೇತ್ರಕ್ಕೆ ದುಪ್ಪಟ್ಟು ಅನುದಾನ

ನವ ದೆಹಲಿ:ಆರೋಗ್ಯ ಕ್ಷೇತ್ರಕ್ಕೆ  ಕಳೆದ ಆರ್ಥಿಕ ವರ್ಷಕ್ಕಿಂತ ದುಪ್ಪಟ್ಟು ಅನುದಾನ   ನಿಗದಿ ಮಾಡಿರುವುದಾಗಿ ಕೇಂದ್ರ ಸಚಿವೆ ನಿರ್ಮಲಾಸೀತಾರಾಮನ್ ಹೇಳಿದ್ದಾರೆ. 2021-22ನೇ ಸಾಲಿಗೆ ಕೇಂದ್ರ ಸರ್ಕಾರ  ಆರೋಗ್ಯ ಮತ್ತು ಯೋಗಕ್ಷೇಮ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ.ಗಳನ್ನು ನೀಡಿದೆ. ಆತ್ಮನಿರ್ಭರ್ ಆರೋಗ್ಯ ಯೋಜನೆಯ ಹೊಸ ಕಾರ್ಯಕ್ರಮಗಳಿಗೆ 64180 ಕೋಟಿ ರೂ.ಗಳನ್ನು ಮುಂದಿನ ಆರು ವರ್ಷಗಳಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರೀಯ … Continued

250 ಟ್ವಿಟರ್‌ ಖಾತೆಗಳು ಬಂದ್‌..

ನವ ದೆಹಲಿ: ಟ್ವಿಟರ್ ಸೋಮವಾರ ಅನೇಕ ಖಾತೆಗಳನ್ನು ತಡೆಹಿಡಿದಿದೆ. ಸುಮಾರು 100 ಟ್ವಿಟ್ಟರ್ ಖಾತೆಗಳನ್ನು ಮತ್ತು 150 ಟ್ವೀಟ್‌ಗಳನ್ನು ನಿರ್ಬಂಧಿಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಮೀಟಿ) ಟ್ವಿಟರ್‌ಗೆ ನಿರ್ದೇಶನ ನೀಡಿದೆ ಎಂದು ಮೂಲಗಳು ದೃ  ಪಡಿಸಿವೆ. ಮೂರು ಕೃಷಿ ಕಾನೂನು ಕುರಿತಂತೆ ವಿವಾದಾತ್ಮಕ ಹ್ಯಾಶ್‌ಟ್ಯಾಗ್ ಬಳಸುತ್ತಿದೆ ಮತ್ತು ಜನವರಿ 30 ರಂದು  ಬೆದರಿಸುವ … Continued

ಕೇಂದ್ರ ಸರ್ಕಾರದ ಬಜೆಟ್‌ಗೆ ಸಿಪಿಐ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರವು  ಮಂಡಿಸಿದ  ೨೦೨೧-೨೨ನೇ ಸಾಲಿನ ಬಜೆಟ್‌  ಜನಸಮಾನ್ಯರ ಮೇಲೆ ಮತ್ತಷ್ಟು ತೆರಿಗೆಗಳನ್ನು ಹೊರಿಸಿದೆ ಎಂದು ಸಿಪಿಐ ಪಕ್ಷ ಹೇಳಿದೆ. ಈ ಬಜೆಟ್ ಜನ-ವಿರೋಧಿ ಹಾಗೂ ನಿರಾಶಾದಾಯಕವಾಗಿದೆ, ಸರ್ಕಾರದ ದುಷ್ಟ ಆರ್ಥಿಕ ನೀತಿಗಳಿಂದಾಗಿ ಮತ್ತು ಕೋವಿಡ್-೧೯ನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸದೇ ಹೋದ ಕಾರಣ, ನಿರುದ್ಯೋಗ ಹೆಚ್ಚಾಗಿದ್ದು ಸಾವಿರಾರು ಜನರು ಬೀದಿಪಾಲಾಗಿದ್ದಾರೆ, ಸರ್ಕಾರದ ತೆರಿಗೆ ಹೆಚ್ಚಳದ … Continued

7 ಜವಳಿ ಪಾರ್ಕ್ ಸ್ಥಾಪನೆ

ನವ ದೆಹಲಿ: ಮುಂದಿನ ಮೂರು ವರ್ಷಗಳಲ್ಲಿ  ದೇಶಾದ್ಯಂತ  7 ಜವಳಿ ಪಾರ್ಕ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು   ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಬಜೆಟ್ ಮಂಡನೆ ಮಾಡಿ,  ಜಾಗತಿಕ ಜವಳಿ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ರೀತಿಯಲ್ಲಿ ದೇಶಾದ್ಯಂತ 7 ಜವಳಿ ಪಾರ್ಕ್ಗಳನ್ನು ಮಾಡಲಾಗುವುದು,   ಉತ್ಪಾದನಾ ಕ್ಷೇತ್ರಕ್ಕೆ 1.94 ಕೋಟಿ ರೂ.   ಅನುದಾನ ನೀಡುತ್ತಿದ್ದು ಜವಳಿ ಪಾರ್ಕ್ ಗಳು … Continued

ಯಾವುದು ಏರಿಕೆ..ಯಾವುದು ಇಳಿಕೆ

ನವ ದೆಹಲಿ: ಪ್ರಧಾನಿ  ಮೋದಿ ನೇತೃತ್ವದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು,  ಅಭಿವೃದ್ಧಿ ಯೋಜನೆಗಳತ್ತ ಗಮನಹರಿಸಲಾಗಿದೆ. ಕೊರೊನಾ  ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಹಿಂಜರಿತ ಉಂಟಾಗಿದ್ದು,ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ  ಈ ಬಾರಿ ಸಾಮಾನ್ಯ ಜನರಿಗೆ ಬಜೆಟ್ ಯಾವ ರೀತಿ ಅನುಕೂಲವಾಗಿದೆ ಎಂಬ ಬಗ್ಗೆ ಚರ್ಚೆ ನಡೆದಿತ್ತು. ೨೦೨೧-೨೨ನೇ … Continued

ಬಜೆಟ್‌ ಪ್ರಸ್ತಾವಕ್ಕೆ ಎಐಟಿಯುಸಿ ವಿರೋಧ

ಬೆಂಗಳೂರು: ಕೇಂದ್ರದ ಬಜೆಟ್‌  ಜನಸಮಾನ್ಯರ ಮೇಲೆ ಮತ್ತಷ್ಟು ತೆರಿಗೆಗಳನ್ನು ಹೊರಿಸಿದೆ.  ಈ ಬಜೆಟ್ ಜನ ವಿರೋಧಿ ಹಾಗೂ ನಿರಾಶಾದಾಯಕ ಬಜೆಟ್ ಅಗಿದೆ ಎಂದು ಎಐಟಿಯುಸಿ ಹೇಳಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ ಪಕೊರೋನಾ  ಹಾಗೂ ಇತರೆ ಕಾರಣಗಳಿಂದ ನಿರುದ್ಯೋಗ ಹೆಚ್ಚಾಗಿದ್ದು, ಸಾವಿರಾರು ಜನರು ಬೀದಿ ಪಾಲಾಗಿದ್ದಾರೆ, ಸರ್ಕಾರದ ತೆರಿಗೆ … Continued

ಸಮೃದ್ಧ ಭಾರತ ನಿರ್ಮಾಣದ ಐತಿಹಾಸಿಕ ಬಜೆಟ್ : ಪ್ರಲ್ಹಾದ ಜೋಶಿ

  ಹುಬ್ಬಳ್ಳಿ :   ಕೇಂದ್ರ ಅರ್ಥ ಸಚಿವೆ  ನಿರ್ಮಲಾ ಸೀತಾರಾಮನ್  ಮಂಡಿಸಿದ ೨೦೨೧-೨೨ನೇ ಸಾಲಿನ ಆಯವ್ಯಯ ಆರೋಗ್ಯ ಹಾಗೂ ಸಮೃದ್ಧ ಭಾರತ ನವನಿರ್ಮಾಣದ ದಿಸೆಯಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ  ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ. ಈ ಅಯವ್ಯಯದಲ್ಲಿ ಆರು ಮುಖ್ಯ ಆಧಾರ ಸ್ಥಂಭಗಳನ್ನು ಪರಿಚಯಿಸಿದ ಅರ್ಥಸಚಿವರು ಇದರ ಒಟ್ಟು ಸಾರವಾಗಿ ಈ … Continued

ಆರೋಗ್ಯ, ಮೂಲ ಸೌಕರ್ಯ, ಬೆಳವಣಿಗೆ ದೃಷ್ಟಿಯ ಸಮತೋಲಿತ ಬಜೆಟ್‌

  ನವ ದೆಹಲಿ: ಕೇಂದ್ರ ಬಜೆಟ್ 2021-22 ಬಜೆಟ್‌  ಅನಾವರಣಗೊಂಡಿದ್ದು,  ಮೊದಲ ಬಾರಿಗೆ ಡಿಜಿಟಲ್ ಸ್ವರೂಪದಲ್ಲಿ ಮಂಡನೆಯಾಗಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್   ನಿಯಂತ್ರಕ ಮಾನದಂಡಗಳನ್ನು ಅನುಸರಿಸುವ ಸಲುವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ  20,000 ಕೋಟಿ ರೂ.ಗಲ ಬಂಡವಾಳ ಹೂಡಿಕೆ ಪ್ರಕಟಿಸಿದ್ದಾರೆ. 2020-21ರ ಆರ್ಥಿಕ ವರ್ಷದಲ್ಲಿ ಪಿಎಸ್‌ಬಿಗಳ ಮರು ಬಂಡವಾಳೀಕರಣಕ್ಕಾಗಿ ಸರ್ಕಾರ   20,000 ಕೋಟಿ ರು. … Continued

ಕನಿಷ್ಠ ಬೆಂಬಲ ನೀಡಲು ಬದ್ಧ

ನವ ದೆಹಲಿ: 2021ನೇ ಸಾಲಿನ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಏಳ್ಗೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬದ್ಧವಾಗಿದ್ದು,  ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆಗೆ  ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಬೆಳೆಗಳು ಹಾಗೂ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಸರ್ಕಾರ ಮಾಡುತ್ತದೆ.  ವರ್ಷದಿಂದ ವರ್ಷಕ್ಕೆ ಸರ್ಕಾರ ಕೃಷಿ … Continued