ನಿಪಾ ವೈರಸ್: ಕೇರಳದ ಕೋಝಿಕ್ಕೋಡ್‌ನಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಕೋಝಿಕ್ಕೋಡ್ : ಕೇರಳದಲ್ಲಿ ಕೋಝಿಕ್ಕೋಡಿನಲ್ಲಿ ʼನಿಪಾʼ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಕೋಝಿಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕೋಝಿಕ್ಕೋಡ್ ಜಿಲ್ಲಾಧಿಕಾರಿ ಎ. ಗೀತಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ರಜೆ ಘೋಷಿಸಿದ್ದು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಎರಡು ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ. ಆದರೆ, ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯಲ್ಲಿ … Continued

ಕೆಲವು ನಿರೂಪಕರು, ಟಿವಿ ಶೋಗಳನ್ನು ಬಹಿಷ್ಕರಿಸಲು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಿರ್ಧಾರ : ಶೀಘ್ರದಲ್ಲೇ ಪಟ್ಟಿಯ ತಯಾರಿ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಕೆಲ ಸುದ್ದಿ ವಾಹಿನಿಗಳ ನಿರೂಪಕರು ಮತ್ತು ಕಾರ್ಯಕ್ರಮಗಳನ್ನು ಬಹಿಷ್ಕರಿಸಲಿದೆ. ವಿಪಕ್ಷಗಳ ಮೈತ್ರಿಕೂಟ ಹೇಳಿಕೆಯಲ್ಲಿ, ಸಮನ್ವಯ ಸಮಿತಿಯು ಅಂತಹ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಪಟ್ಟಿ ಮಾಡುತ್ತದೆ ಎಂದು ಹೇಳಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಬಹಿಷ್ಕರಿಸಲಿರುವ … Continued

ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿ ಬಿಡುಗಡೆ ಮಾಡಿದ ಸರ್ಕಾರ

ನವದೆಹಲಿ : ಸೆಪ್ಟೆಂಬರ್ 18ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಐದು ದಿನಗಳ ಅಧಿವೇಶನದಲ್ಲಿ ಸಂಸತ್ತಿನ 75 ವರ್ಷಗಳ ಇತಿಹಾಸದ ಕುರಿತು ಚರ್ಚೆ ನಡೆಯಲಿದೆ ಎಂದು ಸರ್ಕಾರ ಬುಧವಾರ ಸಂಜೆ ಬಹಿರಂಗ ಪಡಿಸುವ ಮೂಲಕ ಹಲವು ದಿನಗಳ ಊಹಾಪೋಹಗಳಿಗೆ ತೆರೆ ಎಳೆದಿದೆ. ಹಲವು ವಿವಾದಗಳನ್ನು ಸೃಷ್ಟಿಸಿರುವ ಮುಖ್ಯ ಚುನಾವಣಾ ಆಯುಕ್ತರ ನೇಮಕ ಸೇರಿದಂತೆ ನಾಲ್ಕು ಮಸೂದೆಗಳನ್ನು ಸರ್ಕಾರವು … Continued

ಅಪರಾಧಗಳ ಕುರಿತ ಪೊಲೀಸರ ಮಾಧ್ಯಮ ವಿವರಣೆ : ಹೊಸ ಮಾರ್ಗಸೂಚಿ ಸಿದ್ಧಪಡಿಸಲು ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಮಾಧ್ಯಮ ವಿಚಾರಣೆ ತಡೆಯುವುದಕ್ಕಾಗಿ ಅಂತಹ ಪ್ರಕರಣಗಳಲ್ಲಿ ಮಾಧ್ಯಮಗಳಿಗೆ ಕೃತ್ಯದ ವಿವರ ನೀಡುವಾಗ ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತು ಸಮಗ್ರ ಕೈಪಿಡಿ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ. ಈಗಿರುವ ಮಾರ್ಗಸೂಚಿಗಳು ಬಹಳ ಹಳೆಯದಾಗಿದ್ದು, ನಂತರದಲ್ಲಿ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಮಿನಲ್ ಪ್ರಕರಣ ವರದಿಗೆ ಸಂಬಂಧಿಸಿದಂತೆ … Continued

ಕಾಶ್ಮೀರ : ಎನ್‌ಕೌಂಟರ್‌ ವೇಳೆ 2 ಸೇನಾ ಅಧಿಕಾರಿಗಳು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಲ್, ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಮೇಜರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪಾಧೀಕ್ಷಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುಮಾಯೂನ್‌ ಮುಜಾಮಿಲ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ … Continued

ಉಜ್ವಲಾ ಯೋಜನೆಯಡಿ ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ : ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ : ಪ್ರಧಾನ ಮಂತ್ರಿ ಉಜ್ವಲಾ ಯೋಜನೆ ಅಡಿ ಕೇಂದ್ರ ಸರ್ಕಾರವು ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ ನೀಡಲು ಮುಂದಾಗಿದೆ. ಇದಕ್ಕಾಗಿ ತೈಲ ಮಾರಾಟ ಸಂಸ್ಥೆಗಳಿಗೆ 1,650 ಕೋಟಿ ರೂ.ಗಳ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ … Continued

ವಿಶೇಷ ಅಧಿವೇಶನಕ್ಕೆ ಮೊದಲು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಪ್ರಾರಂಭವಾಗುವ ಮೊದಲು ಸೋಮವಾರ ಸಂಜೆ ಸರ್ಕಾರವು ಸರ್ವಪಕ್ಷ ಸಭೆಯನ್ನು ನಡೆಸಲಿದೆ. ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಲ್ಹಾದ ಜೋಶಿ ಅವರು, ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ: ಈ ತಿಂಗಳ 18 ರಿಂದ ಸಂಸತ್ತಿನ ಅಧಿವೇಶನಕ್ಕೆ ಮುಂಚಿತವಾಗಿ, 17 ರಂದು ಸಂಜೆ 4:30 … Continued

ಕೆಟ್ಟು ನಿಂತಿದ್ದ ಬಸ್ಸಿಗೆ ಹಿಂದಿನಿಂದ ಗುದ್ದಿದ ಲಾರಿ : 11 ಮಂದಿ ಸಾವು, 12 ಮಂದಿಗೆ ಗಾಯ

ಭರತಪುರ: ರಾಜಸ್ಥಾನದ ಭರತಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಇಂದು ಬುಧವಾರ ಮುಂಜಾನೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ … Continued

17 ವೈದ್ಯರಿಂದ ಕಂಡುಹಿಡಿಯಲಾಗದ 4 ವರ್ಷದ ಮಗುವಿನ ನಿಗೂಢ ಕಾಯಿಲೆಯನ್ನು ಸರಿಯಾಗಿ ಪತ್ತೆಹಚ್ಚಿದ ಚಾಟ್ ಜಿಪಿಟಿ (ChatGPT)…!

17 ವೈದ್ಯರಿಂದ ಕಂಡುಹಿಡಿಯಲು ಸಾಧ್ಯವಾಗದ ಬಾಲಕನ ಕಾಯಿಲೆಯನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಚಾಟ್ ಜಿಪಿಟಿ (ChatGPT) ಕಂಡುಹಿಡಿದಿದೆ…! ತನ್ನ ಮಗನ ಕಾಯಿಲೆ ಪತ್ತೆಯಾಗದ ಕಾರಣ ಬಾಲಕನ ತಾಯಿ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಚಾಟ್ ಜಿಪಿಟಿ (ChatGPT) ಮೊರೆ ಹೋಗಿದ್ದು, ಅದರ ಮೂಲಕ ತಿಳಿದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕೋವಿಡ್‌-19 ಸಾಂಕ್ರಾಮಿಕದ ಉತ್ತುಂಗದಲ್ಲಿ, ಕರ್ಟ್ನಿಯ ಎಂಬ ಮಹಿಳೆಯ ನಾಲ್ಕು ವರ್ಷದ ಮಗ … Continued

ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ದೃಢ : ಕೇಂದ್ರದಿಂದ ತಜ್ಞರ ತಂಡ ರವಾನೆ

ಕೋಝಿಕ್ಕೋಡ್‌ : ಕೋಝಿಕ್ಕೋಡ್‌ನಲ್ಲಿ ಇಬ್ಬರು ನಿಪಾಹ್ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಜ್ಞರ ತಂಡವನ್ನು ಕೇರಳಕ್ಕೆ ಕಳುಹಿಸಿದೆ. ಒಬ್ಬ ವ್ಯಕ್ತಿ ಸೆಪ್ಟೆಂಬರ್ 11 ರಂದು ಸಾವಿಗೀಡಾದರೆ, ಇನ್ನೊಬ್ಬರು ಆಗಸ್ಟ್ 30 ರಂದು ಮೃತಪಟ್ಟಿದ್ದಾರೆ. ಸೋಮವಾರ (ಸೆಪ್ಟೆಂಬರ್ 11) ಮೃತಪಟ್ಟ ವ್ಯಕ್ತಿಯ 9 ವರ್ಷದ ಮಗು ಮತ್ತು 24 ವರ್ಷದ … Continued