ಕ್ರಿಪ್ಟೋ ಕರೆನ್ಸಿ: ಶೀಘ್ರವೇ ಕಾನೂನು ರಚನೆಗೆ ನಿರ್ಧಾರ

ನವ ದೆಹಲಿ: ಕ್ರಿಪ್ಟೋ ಕರೆನ್ಸಿಗಳ ಬಗ್ಗೆ ಸರ್ಕಾರವು ಶೀಘ್ರದಲ್ಲೇ ಮಸೂದೆ ತರಲಿದೆ, ಏಕೆಂದರೆ ಅವುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳು ಅಸಮರ್ಪಕವಾಗಿವೆ ಎಂದು ಕೇಂದ್ರದ ಹಣ ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಠಾಕೂರ್, ಆರ್‌ಬಿಐ ಮತ್ತು ಸೆಬಿಯಂತಹ ನಿಯಂತ್ರಕ ಸಂಸ್ಥೆಗಳು ಕ್ರಿಪ್ಟೋ ಕರೆನ್ಸಿಗಳನ್ನು ನೇರವಾಗಿ ನಿಯಂತ್ರಿಸಲು … Continued

ಕಿಸಾನ್‌ ಮಹಾಪಂಚಾಯತ್‌ನಲ್ಲಿ ಪ್ರಿಯಾಂಕಾ ಗಾಂಧಿ ಭಾಗಿ

ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಫೆ.೧೦ರಂದು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆಯುವ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಫೆ.೧೩ರಂದು ಪ್ರಿಯಾಂಕಾ ಬಿಜ್ನೋರ್ ಮತ್ತು ಮುಜಫರ್‌ನಗರ ಜಿಲ್ಲೆಗಳ ರೈತರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ದೆಹಲಿ ಗಡಿಯಲ್ಲಿ ವಿವಾದಾತ್ಮಕ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಪಂಜಾಬ್‌, ಹರಿಯಾಣ ಹಾಗೂ ಉತ್ತರ … Continued

ಸಂಪುಟದಿಂದ ವಿ.ಕೆ.ಸಿಂಗ್‌ ಕೈಬಿಡಲು ರಾಹುಲ್‌ ಒತ್ತಾಯ

ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ವಿ.ಕೆ.ಸಿಂಗ್‌ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಚೀನಾ ಗಡಿಯನ್ನು ಗುರುತಿಸಲು ನಮಗೆ ಸಾಧ್ಯವಾಗಿಲ್ಲ, ಉಭಯ ದೇಶಗಳು ನೈಜ ಗಡಿ ಬಗೆಗಿನ ಗ್ರಹಿಕೆಯನ್ನು ಹಲವು ಬಾರಿ ಮೀರಿವೆ ಎಂದು ಸಿಂಗ್‌ ಹೇಳಿಕೆ ನೀಡುವ ಮೂಲಕ ಚೀನಾ ನಮ್ಮ ದೇಶದ ವಿರುದ್ಧ ಮೊಕದ್ದಮೆ … Continued

ಬಂಗಾಳಕ್ಕೆ ಕಿಸಾನ್‌ ಸಮ್ಮಾನ ಹಣ ನೀಡದ ಕೇಂದ್ರ: ಮಮತಾ ಆರೋಪ

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ರೈತರಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಪ್ರೋತ್ಸಾಹಧನವನ್ನು ನೀಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬಿಜೆಪಿ ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುತ್ತಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದು, ರಾಜ್ಯದ ತೃಣಮೂಲ ಕಾಂಗ್ರೆಸ್‌ ಸರಕಾರ ರೈತರಿಗೆ ತಲಾ ೫೦೦೦ರೂ. ಪ್ರೋತ್ಸಾಹಧನದೊಂದಿಗೆ ಉಚಿತ ಬೆಳೆ ವಿಮೆಯನ್ನೂ … Continued

ಆನ್‌ಲೈನ್‌ನಲ್ಲಿ ಸೋಫಾ ಮಾರಲು ಹೋಗಿ ಮೋಸ ಹೋದ ಕೇಜ್ರಿ ಪುತ್ರಿ!

ನವ ದೆಹಲಿ: ಇ-ಕಾಮರ್ಸ್‌ನಲ್ಲಿ ಸೋಫಾ ಮಾರಲು ಹೋಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರು ೩೪ ಸಾವಿರ ಕಳೆದುಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ವ್ಯಕ್ತಿಯೋರ್ವ ವೆಬ್ ಪೋರ್ಟಲ್‌ನಲ್ಲಿ ಸೋಫಾ ಕೊಂಡುಕೊಳ್ಳುವುದಾಗಿ ಹರ್ಷಿತಾಳನ್ನು ಸಂಪರ್ಕಿಸಿ ದರ ನಿಗದಿಯಾದ ಬಳಿಕ ಹರ್ಷಿತಾಳ ಖಾತೆಗೆ ಸ್ವಲ್ಪ ಹಣ ಹಾಕಿದ್ದಾನೆ. ಬಳಿಕ ಅದನ್ನು ಖಾತರಿಪಡಿಸಲು … Continued

ಕೊರೋನಾ ಪ್ರಕರಣ: ಗಣನೀಯ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಆಗುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿ ೯,೧೧೦ ಮಂದಿಗೆ ಹೊಸ ಸೋಂಕು ಪ್ರಕರಣ ಧೃಢಪಟ್ಟಿವೆ ಹಾಗೂ ೭೮ ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಹೊಸದಾಗಿ ದಾಖಲಾಗಿರುವ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟಾರೆ ೧,೦೮,೪೭,೩೦೪ಕ್ಕೆ ಏರಿಕೆಯಾಗಿದೆ. ಈ ಪೈಕಿ … Continued

ನಿಮಗೆ ನಮ್ಮ ಬಾಗಿಲು ತೆರೆದಿದೆ: ಗುಲಾಂ ನಬಿಗೆ ಮೋದಿ

ನವದೆಹಲಿ: ನೀವು ರಾಜ್ಯಸಭೆಯಿಂದ ನಿವೃತ್ತಿಯಾದರೂ ನಮ್ಮ  ಬಾಗಿಲು ನಿಮಗೆ ಯಾವಾಗಲೂ ತೆರೆದಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸಭೆಯಿಂದ ನಿವೃತ್ತಿಗೊಂಡ ಗುಲಾಂ ನಬಿ ಆಜಾದ್‌ ಅವರಿಗೆ ಹೇಳಿದರು. ರಾಜ್ಯಸಭೆಯಲ್ಲಿ ಆಜಾದ್‌ರನ್ನು ಬೀಳ್ಕೊಡುವ ಭಾಷಣ ಮಾಡಿದ ಪ್ರಧಾನಿ ಮೋದಿ, ನೀವು ಸದನದಲ್ಲಿ ಇಲ್ಲ ಎಂದು ಭಾವಿಸಬೇಡಿ. ನೀವು ನಿವೃತ್ತಿಯಾಗಲು ನಾನು ಬಿಡುವುದಿಲ್ಲ. ನಿಮ್ಮ ಸಲಹೆ ನಮಗೆ … Continued

ಪೆಟ್ರೋಲ್‌-ಡೀಸೆಲ್‌ ಬೆಲೆ ಗರಿಷ್ಠ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಏರಿಕೆಯಾಗುತ್ತಿದ್ದು, ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಂಗಳವಾರ ಪ್ರತಿ ಲೀಟರ್‌ ಪೆಟ್ರೋಲ್-ಡೀಸೆಲ್‌ಗೆ ೩೫ ಪೈಸೆಯಷ್ಟು ಹೆಚ್ಚಳವಾಗಿದೆ. ದಿನದಿಂದ ದಿನಕ್ಕೆ ಇಂಧನ ದರ ಗಗನಮುಖಿಯಾಗುತ್ತಿದೆ. ಅದರಲ್ಲೂ ಡೀಸೆಲ್ ದರ ಹೆಚ್ಚಳವಾಗುತ್ತಿರುವುದರಿಂದ ಅಗತ್ಯ ವಸ್ತುಗಳ ದರ ಏರಿಕೆಯಾಗಿ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಬಿದ್ದಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ೮೭.೩೦ರೂ., ಮುಂಬೈನಲ್ಲಿ … Continued

ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ: ಗುಲಾಂ ನಬಿ ಆಜಾದ್‌

ನವದೆಹಲಿ: ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ ಎಂದು ಕಾಂಗ್ರೆಸ್‌ ಸಂಸದ ಹಾಗೂ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಗುಲಾಂ ನಬಿ ಆಜಾದ್‌ ಹೇಳಿದರು. ರಾಜ್ಯಸಭೆಯಲ್ಲಿ ತಮ್ಮ ವಿದಾಯ ಭಾಷಣದಲ್ಲಿ ಅವರು, ವಿಭಜನೆ ನಂತರ ಪಾಕಿಸ್ತಾನಕ್ಕೆ ಹೋಗದ ಅದೃಷ್ಟವಂತ ಜನರಲ್ಲಿ ನಾನೂ ಕೂಡ ಒಬ್ಬ. ಪಾಕಿಸ್ತಾನದ ಸ್ಥಿತಿ-ಗತಿಯನ್ನು ನೋಡಿದಾಗ ನಾನು ಹಿಂದೂಸ್ತಾನದ ಮುಸ್ಲಿಂ ಆಗಿರಲು … Continued

ಗುಲಾಂ ನಬಿ ನಿವೃತ್ತಿ: ರಾಜ್ಯಸಭೆಯಲ್ಲಿ ಪ್ರಧಾನಿ ಕಣ್ಣೀರು

ನವದೆಹಲಿ: ರಾಜ್ಯಸಭೆಯಿಂದ ನಿವೃತ್ತರಾದ ಗುಲಾಂ ನಬಿ ಆಜಾದ್ ಅವರನ್ನು ಗುಣಗಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ ಭಾವೋದ್ವೇಗರಾಗಿ ಕಣ್ಣೀರು ಹಾಕಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಗುಲಾಂ ನಬಿ ಆಜಾದ್ ಅವರು ಸುದೀರ್ಘ ಸೇವೆ ಬಳಿಕ ನಿವೃತ್ತರಾದರು. ಅವರ ಬೀಳ್ಕೊಡುಗೆ ಸಂದರ್ಭದಲ್ಲಿ ಮಾತನಾಡಿದ ಮೋದಿ ಭಾವೋದ್ವೇಗಕ್ಕೆ ಒಳಗಾದರು. ರಾಜಕೀಯದಲ್ಲಿ ಪಕ್ಷ, ಸಿದ್ದಾಂತಗಳು ಬೇರೆ ಬೇರೆಯಾಗಿದ್ದಾಗ ಸಂಘರ್ಷವಾಗುವುದು, … Continued