ಸತೀಶನ್, ವೇಣುಗೋಪಾಲ ಅಥವಾ ಚೆನ್ನಿತ್ತಲ…? ಕೇರಳದ ಮುಂದಿನ ಸಿಎಂ ಯಾರು ?

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಪೂರ್ಣ ಬಹುಮತದೊಂದಿಗೆ ಭರ್ಜರಿ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಒಟ್ಟು 140 ಸ್ಥಾನಗಳಲ್ಲಿ 102 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷವೊಂದೇ 63 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಆದರೆ, ಈ ಅಭೂತಪೂರ್ವ ಯಶಸ್ಸಿನ ನಡುವೆಯೂ ಕೇರಳಂಗೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ … Continued

ಅಪರಾಧ ಪ್ರಜ್ಞೆ….ಡಿಎನ್‌ಎ….ʼಪ್ರೇತ’ದ ಭೀತಿ : 34 ವರ್ಷಗಳ ನಂತರ ಬಯಲಾಯ್ತು ಭೀಕರ ಕೊಲೆ ರಹಸ್ಯ !

ಅಹಮದಾಬಾದ್ : ಅಹಮದಾಬಾದ್ ಸಿಟಿ ಕ್ರೈಮ್ ಬ್ರಾಂಚ್ ಪೊಲೀಸರು ಬರೋಬ್ಬರಿ ಮೂರು ದಶಕಗಳ ಕಾಲ ರಹಸ್ಯವಾಗಿದ್ದ ಭೀಕರ ಕೊಲೆ ಪ್ರಕರಣವೊಂದನ್ನು ಭೇದಿಸಿದ್ದಾರೆ. 18 ಅಡಿ ಆಳದ ಗುಂಡಿಯಲ್ಲಿ ಹೂತುಹಾಕಲಾಗಿದ್ದ ಮಹಿಳೆಯ ಅಸ್ಥಿಪಂಜರವನ್ನು ಡಿಎನ್‌ಎ (DNA) ಪರೀಕ್ಷೆಯ ನೆರವಿನಿಂದ ಗುರುತಿಸುವ ಮೂಲಕ, 34 ವರ್ಷಗಳ ಹಿಂದೆ ನಡೆದಿದ್ದ ಅಪರಾಧಕ್ಕೆ ತಾರ್ಕಿಕ ಅಂತ್ಯ ಹಾಡಿದ್ದಾರೆ. ಹೂತುಹೋಗಿದ್ದ ರಹಸ್ಯ ಹೊರಬಂದಿದ್ದು … Continued

ತಮಿಳುನಾಡಲ್ಲಿ ರಾಜಕೀಯ ಅನಿಶ್ಚಿತತೆ ಅಂತ್ಯ : ತಮಿಳುನಾಡು ಸಿಎಂ ಆಗಿ ವಿಜಯ ನಾಳೆ ಪ್ರಮಾಣವಚನ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾಗಿದ್ದ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ ಅವರು ಶನಿವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯಪಾಲರ ಅನುಮೋದನೆಯ ನಂತರ, ಭಾನುವಾರ (ಮೇ ೧೦) ಬೆಳಿಗ್ಗೆ 10 ಗಂಟೆಗೆ ವಿಜಯ ತಮಿಳುನಾಡಿನ ಮುಖ್ಯಮಂತ್ರಿಯಾಗಿ … Continued

ತಮಿಳುನಾಡು : ವಿಜಯ ನೇತೃತ್ವದ ಟಿವಿಕೆಗೆ ವಿಸಿಕೆ ಬೆಂಬಲ ; ಸರ್ಕಾರ ರಚನೆಗೆ ಹಾದಿ ಸುಗಮ

ಚೆನ್ನೈ : ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರ ‘ಸಂಖ್ಯಾಬಲದ ಆತಂಕ’ ಕೊನೆಗೂ ಮುಗಿದಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 118 ಆಗಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಮೈತ್ರಿಕೂಟವು ಈ ಮೊದಲು 116 ಸದಸ್ಯರ ಬಲ ಹೊಂದಿತ್ತು. ಈಗ ವಿಸಿಕೆ (VCK) … Continued

ವಿಡಿಯೋ | ಬಂಗಾಳ ಸಿಎಂ ಪದಗ್ರಹಣ ಸಮಾರಂಭಲ್ಲಿ 98 ವರ್ಷದ ಮಖನ್‌ಲಾಲ ಸರ್ಕಾರ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಇವರು ಯಾರು ?

ಕೋಲ್ಕತ್ತಾ: ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಸುವೇಂದು ಅಧಿಕಾರಿ ಅವರ ನೇತೃತ್ವದ ರಾಜ್ಯದ ಮೊತ್ತಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜನಸಂಘದ ಕಾಲದ ಹಿರಿಯ ನಾಯಕ, 98 ವರ್ಷದ ಮಾಖನ್‌ಲಾಲ್ ಸರ್ಕಾರ ಅವರ ಪಾದ … Continued

ಪಶ್ಚಿಮ ಬಂಗಾಳದ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ: ಸಚಿವರಾಗಿ ಐವರಿಂದ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು, ಶನಿವಾರ ಬಿಜೆಪಿಯ ಯುಗ ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಐವರು ಶಾಕಸರು ಸಚಿವರಾಗಿ … Continued

ವಿಡಿಯೋ | ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ: 30 ವರ್ಷಗಳ ಹಿಂದಿನ ಪ್ರಮೋದ ಮಹಾಜನ್ ಮಾರ್ಮಿಕ ಭಾಷಣ ಈಗ ಮತ್ತೆ ವೈರಲ್‌

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯವನ್ನು ಅತಂತ್ರ ಸ್ಥಿತಿಗೆ ತಳ್ಳಿರುವ ಬೆನ್ನಲ್ಲೇ, ಸುಮಾರು ಮೂರು ದಶಕಗಳ ಹಿಂದಿನ ಸಂಸತ್ತಿನ ರೋಚಕ ಪ್ರಸಂಗವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ, ಅಂದು ಬಿಜೆಪಿ ನಾಯಕ ಪ್ರಮೋದ ಮಹಾಜನ್ ಅವರು ಮೈತ್ರಿ ರಾಜಕೀಯದ ವಿಡಂಬನೆ ಮಾಡುತ್ತಾ ನೀಡಿದ್ದ ಭಾಷಣವು ಇಂದಿನ … Continued

ತಮಿಳುನಾಡು : ರಾಜ್ಯಪಾಲರನ್ನು ಭೇಟಿಯಾದ ದಿನಕರನ್; ಇಪಿಎಸ್‌ಗೆ ಇದೆ 120 ಶಾಸಕರ ಬೆಂಬಲ ; ಸರ್ಕಾರ ರಚನೆಗೆ ಅಹ್ವಾನ ನೀಡಿ ಎಂದು ಮನವಿ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತು ಅನಿಶ್ಚಿತತೆ ಮುಂದುವರಿಯುತ್ತಿರುವ ಬೆನ್ನಲ್ಲೇ, ರಾಜಕೀಯ ಬೆಳವಣಿಗೆಗಳು ನಾಟಕೀಯ ತಿರುವು ಪಡೆದುಕೊಂಡಿವೆ. ಎಎಂಎಂಕೆ (AMMK) ಪಕ್ಷದ ಮುಖ್ಯಸ್ಥ ಟಿ.ಟಿ.ವಿ ದಿನಕರನ್ ಅವರು ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿ, ಎಡಪ್ಪಾಡಿ ಪಳನಿಸ್ವಾಮಿ (EPS) ಅವರಿಗೆ 120 ಶಾಸಕರ ಬೆಂಬಲವಿದ್ದು, ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪತ್ರ ನೀಡಿದ್ದಾರೆ. … Continued

ʼಆಪರೇಷನ್ ಸಿಂಧೂರ’ ವೇಳೆ ಸಹಾಯ ಮಾಡಲು ಪಾಕ್ ವಾಯುನೆಲೆಗಳಲ್ಲಿದ್ದ ಚೀನಾ ತಜ್ಞರ ತಂಡ : ಮೊದಲ ಬಾರಿಗೆ ಒಪ್ಪಿಕೊಂಡ ಚೀನಾ !

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಕಳೆದ ವರ್ಷ ನಡೆದ ಸೇನಾ ಸಂಘರ್ಷದ ವೇಳೆ ತಾನು ಪಾಕಿಸ್ತಾನಕ್ಕೆ ನೇರವಾಗಿ ‘ಆನ್-ಸೈಟ್’ ತಾಂತ್ರಿಕ ನೆರವು ನೀಡಿದ್ದಾಗಿ ಚೀನಾ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ನಡೆಸಿದ್ದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಚೀನಾದ ತಜ್ಞರ ತಂಡವು ಪಾಕಿಸ್ತಾನ ಸೇನೆಗೆ ಬೆಂಬಲವಾಗಿ … Continued

ಕಾಂಗ್ರೆಸ್ ಜೊತೆ ದೋಸ್ತಿ ಕಟ್: ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ

ನವದೆಹಲಿ: ತಮಿಳುನಾಡಿನ ರಾಜಕೀಯ ಸಮೀಕರಣಗಳಲ್ಲಿನ ಭಾರಿ ಬದಲಾವಣೆಯ ಬೆನ್ನಲ್ಲೇ, ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದೆ ಕನಿಮೊಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಲೋಕಸಭೆಯಲ್ಲಿ ಹೊಸ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಡಿಎಂಕೆ ಅಧಿಕೃತವಾಗಿ ಕಡಿದುಕೊಂಡಿರುವುದರಿಂದ, ಸದನದಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್‌ ಪಕ್ಷಗಳ ಸದಸ್ಯರು ಅಕ್ಕಪಕ್ಕದಲ್ಲಿ … Continued