ಟಿವಿಕೆಗೆ ಕಾಂಗ್ರೆಸ್‌ ಬೆಂಬಲ ; ಇದು ಅಪ್ಪಟ ವಿಶ್ವಾಸ ದ್ರೋಹ ಎಂದ ಡಿಎಂಕೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಶಕಗಳ ಕಾಲದ ಡಿಎಂಕೆ ಮತ್ತು ಎಐಎಡಿಎಂಕೆ ಏಕಸ್ವಾಮ್ಯವನ್ನು ಮುರಿದು ಇತಿಹಾಸ ಸೃಷ್ಟಿಸಿರುವ ನಟ ವಿಜಯ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿಗೆ ಮುಂದಾಗಿರುವುದು ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ತನ್ನ ದೀರ್ಘಕಾಲದ ಮಿತ್ರಪಕ್ಷವಾದ ಕಾಂಗ್ರೆಸ್‌ನ ಈ ನಡೆಯನ್ನು ಡಿಎಂಕೆ “ಅಪ್ಪಟ ವಿಶ್ವಾಸದ್ರೋಹ” ಎಂದು ಕರೆದಿದೆ. … Continued

ಪಶ್ಚಿಮ ಬಂಗಾಳ : ಬಿಜೆಪಿ ಸರ್ಕಾರ ರಚನೆಗೂ ಮುನ್ನ ಮಮತಾ ನೇಮಿಸಿದ ನಿವೃತ್ತ ಅಧಿಕಾರಿಗಳಿಗೆ ಕಚೇರಿ ಪ್ರವೇಶ ನಿಷೇಧ !

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗಳು ಆರಂಭವಾಗಿವೆ. ಮಮತಾ ಬ್ಯಾನರ್ಜಿ ಅವರ ಅವಧಿಯಲ್ಲಿ ನೇಮಕಗೊಂಡಿದ್ದ ಹಲವು ನಿವೃತ್ತ ಅಧಿಕಾರಿಗಳಿಗೆ ಸರ್ಕಾರಿ ಕಚೇರಿಗಳನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಭರ್ಜರಿ ಬಹುಮತದೊಂದಿಗೆ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗುತ್ತಿದೆ. ಈ … Continued

ವಿಡಿಯೋ | ಪಂಜಾಬಿನ ರಕ್ಷಣಾ ನೆಲೆಗಳ ಬಳಿ 2 ತಾಸಿನಲ್ಲಿ 2 ‘ಸ್ಫೋಟಗಳು’….!

ಅಮೃತಸರ/ಜಲಂಧರ್:  ಪಂಜಾಬಿನ ಎರಡು ಪ್ರಮುಖ ನಗರಗಳಾದ ಜಲಂಧರ್ ಮತ್ತು ಅಮೃತಸರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳು ರಾಜ್ಯವನ್ನು ಬೆಚ್ಚಿಬೀಳಿಸಿವೆ. ಈ ಎರಡೂ ಘಟನೆಗಳು ರಕ್ಷಣಾ ನೆಲೆಗಳ ಅತ್ಯಂತ ಸಮೀಪದಲ್ಲೇ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಜಲಂಧರ್‌ನಲ್ಲಿರುವ ಗಡಿ ಭದ್ರತಾ ಪಡೆ (BSF) ಪ್ರಧಾನ ಕಚೇರಿಯ ಮುಖ್ಯ … Continued

‘ಅನಿಲ್’ ಆರ್ಮಿಯ ಮಾಸ್ಟರ್ ಪ್ಲಾನ್: ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ ನಟ ʼವಿಜಯʼ ಪಡೆಯ 6 ರಣತಂತ್ರಗಳು !

ತಮಿಳುನಾಡು ರಾಜಕೀಯ ಭೂಪಟದಲ್ಲಿ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸಂಚಲನ ಸೃಷ್ಟಿಸಿದೆ. ಒಟ್ಟು 234  ಸ್ಥಾನಗಳಲ್ಲಿ108ರಲ್ಲಿ ಜಯಗಳಿಸಿರುವ ಟಿವಿಕೆ ಪಕ್ಷವು  ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿಯ ಸಮೀಪಕ್ಕೆ ಬಂದು ನಿಂತಿದೆ. ಇದು ವರ್ಷಗಳ ಕಾಲ ನಡೆದ ವ್ಯವಸ್ಥಿತ ತಯಾರಿ ಮತ್ತು ಹಂತ ಹಂತವಾಗಿ ಕಟ್ಟಿದ ಭದ್ರ ಬುನಾದಿಯ ಫಲವಾಗಿದೆ. … Continued

ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಕೋರಿದ ನಟ ವಿಜಯ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ, ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ. ಈ ಬೆಳವಣಿಗೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಂಗಳವಾರ ದೃಢಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ … Continued

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು ಈಗಿರುವ 34 ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಮೇ 5) ಅನುಮೋದನೆ ನೀಡಿದೆ. ಪ್ರಸ್ತುತ, ಭಾರತದ ಮುಖ್ಯ ನ್ಯಾಯಾಧೀಶರು (CJI) ಸೇರಿದಂತೆ ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, “ಪ್ರಸ್ತುತ ಸುಪ್ರೀಂ … Continued

ಚುನಾವಣೆಯಲ್ಲಿ ಟಿಎಂಸಿ ಸೋತು ಸುಣ್ಣವಾದ್ರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಲನುಭವಿಸಿದರೂ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ. ಈ ಚುನಾವಣಾ ಫಲಿತಾಂಶವು ಜನರ ನೈಜ ತೀರ್ಪಲ್ಲ, ಬದಲಾಗಿ ಇದೊಂದು “ಪಿತೂರಿ” ಎಂದು ಅವರು ಆರೋಪಿಸಿದ್ದಾರೆ. 2026ರ ಪಶ್ಚಿಮ ಬಂಗಾಳ ಚುನಾವಣಾ ಸೋಲಿನ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ … Continued

ತೃಣಮೂಲ ಭದ್ರಕೋಟೆಯಲ್ಲೇ ಮಮತಾ ಸೋಲಿಸಿದ ಸುವೇಂದು ; ಭವಾನಿಪುರದಲ್ಲಿ ʼದೀದಿʼಯನ್ನು ಬಿಜೆಪಿ ‘ಚಕ್ರವ್ಯೂಹ’ದಲ್ಲಿ ಕೆಡವಿದ್ದು ಹೇಗೆ ?

ಕೋಲ್ಕತ್ತಾ: ಸರಿಯಾಗಿ ಐದು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಕಹಿ ಉಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಈಗ 2026ರಲ್ಲಿ ಅದನ್ನು ಮರುಕಳಿಸಿದ್ದಾರೆ. ಈ ಬಾರಿ ನಂದಿಗ್ರಾಮದಲ್ಲಲ್ಲ, ಬದಲಿಗೆ ಮಮತಾ ಅವರ ಭದ್ರಕೋಟೆಯಾದ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಸುವೇಂದು ಗೆಲುವಿನ ನಗೆ ಬೀರಿದ್ದಾರೆ. 2021ರಲ್ಲಿ ನಂದಿಗ್ರಾಮದ ಸೋಲಿನ ನಂತರ … Continued

ಮೈ ಜುಂ ಎನ್ನುವ ವಿಡಿಯೋ : ತಲೆಗೆ ಕತ್ತಿ ಹೊಕ್ಕಿದ್ದರೂ ನಡೆದುಕೊಂಡೇ ಆಸ್ಪತ್ರೆಗೆ ಬಂದ ವ್ಯಕ್ತಿ

ಮುಂಬೈ: ಮುುಂಬೈನಲ್ಲಿ ನಡೆದ ಭೀಕರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ವ್ಯಕ್ತಿಯೊಬ್ಬನ ತಲೆಗೆ ಕತ್ತಿಯಿಂದ (Sickle) ಹಲ್ಲೆ ಮಾಡಲಾಗಿದ್ದು, ಆ ಕತ್ತಿ ತಲೆಯ ಒಳಭಾಗಕ್ಕೆ ಹೊಕ್ಕಿದ್ದರೂ ಸಹ ಆತ ಯಾವುದೇ ಆತಂಕವಿಲ್ಲದೆ ನಡೆದುಕೊಂಡೇ ಆಸ್ಪತ್ರೆಗೆ ಬಂದಿರುವ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮೇ 4ರಂದು ಮುಂಜಾನೆ ವಿಕ್ರೋಲಿಯ ಕಣ್ಣಂವರ್ ನಗರದಲ್ಲಿ ಇಸ್ಮಾ ಎಂಬ ಯುವಕನ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ

 ನವದೆಹಲಿ:  ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued