ಚಂದ್ರಬಾಬು ನಾಯ್ಡು ಸಮಾವೇಶದಲ್ಲಿ ಮತ್ತೊಂದು ದುರಂತ, ಸೀರೆ ಪಡೆಯಲು ನೂಕುನುಗ್ಗಲು ಉಂಟಾಗಿ 3 ಮಹಿಳೆಯರು ಸಾವು

ಗುಂಟೂರು: ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಮಂದಿ ಮೃತಪಟ್ಟ ಬೆನ್ನಲ್ಲೇ ಬೆನ್ನಲ್ಲೇ ಭಾನುವಾರ (ಜನವರಿ 1) ಸಂಕ್ರಾಂತಿ ಹಬ್ಬದ ಅಂಗವಾಗಿ ಚಂದ್ರಬಾಬುನಾಯ್ಡು ಅವರು ಸೀರೆ ಹಂಚುತ್ತಿದ್ದ ಕಾರ್ಯಕ್ರಮದಲ್ಲಿ ಮತ್ತೆ 3 ಮಹಿಳೆಯರು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ. ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ಈ ದುರಂತ ಸಂಭವಿಸಿದೆ. ತೆಲುಗುದೇಶಂ … Continued

2023ರಲ್ಲಿ ಸರಣಿ ವಿಧಾನಸಭೆ ಚುನಾವಣೆಗಳು : ಇದು ಲೋಕಸಭಾ ಚುನಾವಣೆ ಮುನ್ನ ‘ಸೆಮಿಫೈನಲ್’..?

ನವದೆಹಲಿ: 2023 ರಲ್ಲಿ ಭಾರತದ ಹಲವಾರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಈ ವರ್ಷ ಚುನಾವಣೆಗೆ ಹೋಗುತ್ತವೆ, ಜೊತೆಗೆ ಈಶಾನ್ಯದ ಕೆಲ ರಾಜ್ಯಗಳು ಸಹ ಚುನಾವಣೆಗೆ ಹೋಗಲಿವೆ. ವಿಧಾನಸಭೆ ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯಗಳೆಂದರೆ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ. ಫೆಬ್ರುವರಿ-ಮಾರ್ಚ್‌ನಲ್ಲಿ ವಿಧಾನಸಭೆ ಆ … Continued

ಮಹಿಳಾ ಕೋಚ್‌ಗೆ ಲೈಂಗಿಕ ಕಿರುಕುಳ ಆರೋಪ : ಹರಿಯಾಣದ ಕ್ರೀಡಾ ಸಚಿವ ರಾಜೀನಾಮೆ

ಚಂಡೀಗಡ: ಶುಕ್ರವಾರ ಜೂನಿಯರ್ ಅಥ್ಲೆಟಿಕ್ಸ್ ಕೋಚ್ ನೀಡಿದ ದೂರಿನ ಆಧಾರದ ಮೇಲೆ ಚಂಡೀಗಢ ಪೊಲೀಸರು ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ಮೇಲಿನ ಆರೋಪಗಳನ್ನು ‘ತಮ್ಮ ಇಮೇಜ್ ಹಾಳು ಮಾಡುವ’ ಪ್ರಯತ್ನ ಎಂದು ತಳ್ಳಿಹಾಕಿದ್ದಾರೆ. … Continued

ಭಾರತದ ತಪ್ಪು ನಕಾಶೆ ಪ್ರಕಟಿಸಿದ್ದಕ್ಕೆ ಕೇಂದ್ರ ಸಚಿವರ ತರಾಟೆ ನಂತರ ಕ್ಷಮೆ ಕೋರಿದ ವಾಟ್ಸಾಪ್

ನವದೆಹಲಿ: ಭಾರತದ ವಿರೂಪಗೊಳಿಸಿದ ನಕ್ಷೆಯನ್ನು ಹಾಕಿದ್ದಕ್ಕಾಗಿ ಮೆಟಾ ಒಡೆತನದ ವಾಟ್ಸಾಪ್ ಅನ್ನು ಕೇಂದ್ರ ಸಚಿವ ರಾಜೀವ ಚಂದ್ರಶೇಖರ ತರಾಟೆಗೆ ತೆಗೆದುಕೊಂಡ ನಂತರ ಅದು ಕ್ಷಮೆಯಾಚಿಸಿದೆ. ವಾಟ್ಸಾಪ್ ತಪ್ಪು ನಕ್ಷೆಯನ್ನು ತೆಗೆದುಹಾಕಿದೆ. ಉದ್ದೇಶಪೂರ್ವಕವಲ್ಲದ ದೋಷದ ಬಗ್ಗೆ ಸೂಚಿಸಿದ್ದಕ್ಕಾಗಿ ಸಚಿವರಿಗೆ ಧನ್ಯವಾದಗಳು; ನಾವು ತಕ್ಷಣವೇ ಸ್ಟ್ರೀಮ್ ಅನ್ನು ತೆಗೆದುಹಾಕಿದ್ದೇವೆ, ಕ್ಷಮೆಯಾಚಿಸುತ್ತೇವೆ. ಭವಿಷ್ಯದಲ್ಲಿ ನಾವು ಜಾಗರೂಕರಾಗಿರುತ್ತೇವೆ ಎಂದು ರಾಜೀವ ಚಂದ್ರಶೇಖರ … Continued

ಚೀನಾವು ಬೌದ್ಧ ಧರ್ಮ ನಾಶಮಾಡಲು ಪ್ರಯತ್ನಿಸಿತು ಆದರೆ…: ಚೀನಾ ಸರ್ಕಾರದ ವಿರುದ್ಧ ಹರಿಹಾಯ್ದ ದಲೈ ಲಾಮಾ

ನವದೆಹಲಿ : ಚೀನಾವು ಬೌದ್ಧ ಧರ್ಮವನ್ನು ಗುರಿಯಾಗಿಸಿಕೊಂಡು ನಾಶಮಾಡಲು ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗುವುದಿಲ್ಲ ಎಂದು ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ಬೋಧಗಯಾದ ಕಾಲಚಕ್ರ ಮೈದಾನದಲ್ಲಿ ಮೂರನೇ ಮತ್ತು ಕೊನೆಯ ದಿನದ ಬೋಧನಾ ಕಾರ್ಯಕ್ರಮದಲ್ಲಿ ಹೇಳಿದರು. ಚೀನಾ ಬೌದ್ಧ ಧರ್ಮವನ್ನು ವಿಷಪೂರಿತವೆಂದು ಪರಿಗಣಿಸುತ್ತಿದೆ ಮತ್ತು ಧರ್ಮವನ್ನು ನಾಶಮಾಡಲು ಮತ್ತು ಅದರ ಸಂಸ್ಥೆಗಳನ್ನು ನಾಶಪಡಿಸುವ … Continued

ಸ್ನಿಫರ್ ನಾಯಿ 3 ಮರಿಗಳಿಗೆ ಜನ್ಮ ನೀಡಿದ ನಂತ್ರ ಗಡಿ ಭದ್ರತಾ ಪಡೆ ನ್ಯಾಯಾಲಯದ ತನಿಖೆಗೆ ಆದೇಶ..!

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಕರ್ತವ್ಯದಲ್ಲಿದ್ದ ಸ್ನಿಫರ್ ನಾಯಿಯು ಸಕ್ರಿಯ ಕರ್ತವ್ಯದಲ್ಲಿರುವಾಗ ಅನಿರೀಕ್ಷಿತವಾಗಿ 3 ನಾಯಿಗಳಿಗೆ ಜನ್ಮ ನೀಡಿದೆ. ಇದರ ಬೆನ್ನಲ್ಲೇ ಭದ್ರತಾ ಪಡೆ ಈ ಲೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದೆ. ಶಿಲ್ಲಾಂಗ್‌ನ ಬಾಂಗ್ಲಾದೇಶದ ಗಡಿಯಲ್ಲಿರುವ ಬಾರ್ಡರ್ ಔಟ್‌ಪೋಸ್ಟ್‌ನಲ್ಲಿ (BOB) ನಿಯೋಜಿಸಲಾದ ಗಡಿ ಭದ್ರತಾ ಪಡೆ (BSF)ಯ ನಾಯಿ ಮೂರು ಮರಿಗಳಿಗೆ … Continued

2023ರ ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಹೆಚ್ಚಳ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 2023ರ ಹೊಸ ವರ್ಷದ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ವರೆಗೆ ಹೆಚ್ಚಿಸಿದ್ದಾರೆ. ಆದಾಗ್ಯೂ, ಗೃಹಬಳಕೆಯ ಸಿಲಿಂಡರ್‌ಗಳ ದರಗಳನ್ನು ಬದಲಾವಣೆ ಮಾಡಲಾಗಿಲ್ಲ. ವಾಣಿಜ್ಯ LPG ಸಿಲಿಂಡರ್ ಹೆಚ್ಚಳದ ಬೆಲೆಗಳು: ತೈಲ ಮಾರುಕಟ್ಟೆ ಕಂಪನಿಗಳು (OMC) ಜನವರಿ 1, 2023 ರಿಂದ … Continued

2022 : ಕಾಶ್ಮೀರದಲ್ಲಿ 42 ವಿದೇಶಿ ಉಗ್ರರು ಸೇರಿ 172 ಭಯೋತ್ಪಾದಕರ ಹತ್ಯೆ

ಶ್ರೀನಗರ: ಕಾಶ್ಮೀರದಲ್ಲಿ 2022ರಲ್ಲಿ ಭದ್ರತಾ ಪಡೆಗಳು ನಡೆಸಿದ 42 ವಿದೇಶಿ ಭಯೋತ್ಪಾದಕರೂ ಸೇರಿದಂತೆ 172 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ಭಾಗದಲ್ಲಿ ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗುವವರ ಸಂಖ್ಯೆಯಲ್ಲಿ ಶೇ 37ರಷ್ಟು ಇಳಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “2022ರಲ್ಲಿ ಕಾಶ್ಮೀರದಲ್ಲಿ ಒಟ್ಟು 93 ಯಶಸ್ವಿ ಎನ್‌ಕೌಂಟರ್‌ಗಳು … Continued

ನಾಗ್ಪುರದ ಆರ್‌ಎಸ್‌ಎಸ್ ಕೇಂದ್ರ ಸ್ಥಾನ ಸ್ಫೋಟಿಸುವುದಾಗಿ ಅಪರಿಚಿತ ಫೋನ್‌ ಬೆದರಿಕೆ, ಬಿಗಿ ಭದ್ರತೆ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಂದ್ರ ಕಚೇರಿಗೆ ಶನಿವಾರ ಅಪರಿಚಿತ ಕರೆ ಮಾಡಿದವರು ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಕರೆ ಬಂದಿತು. ಮಹಲ್ ಪ್ರದೇಶದಲ್ಲಿನ ಆರ್‌ಎಸ್‌ಎಸ್ ಕೇಂದ್ರ ಕಚೇರಿಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ … Continued

ಮಾನಸ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರ ವಾಹನವನ್ನು 3 ಕಿಮೀ ವರೆಗೆ ಬೆನ್ನಟ್ಟಿದ ಕೋಪೋದ್ರಿಕ್ತ ದೈತ್ಯ ಘೇಂಡಾಮೃಗ : ವೀಕ್ಷಿಸಿ

ಗುವಾಹತಿ: ಅಸ್ಸಾಂನ ಮಾನಸ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರು ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ; ಘೇಂಡಾಮೃಗವೊಂದು ಇದ್ದಕ್ಕಿದ್ದಂತೆ ಅವರ ವಾಹನವನ್ನು ಬೆನ್ನಟ್ಟಿದೆ ಘಟನೆ ನಡೆದಿದೆ. ರಾಷ್ಟ್ರೀಯ ಉದ್ಯಾನವನದ ಬಾನ್ ಹಬರಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಫಾರಿ ಜೀಪ್ ಉದ್ಯಾನವನದ ಹಬರಿ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಘೇಂಡಾಮೃಗವು ಪೊದೆಯಿಂದ ಹೊರಬಂದು ಅವರ ವಾಹನವನ್ನು ಹಿಂಬಾಲಿಸಲು ಪ್ರಾರಂಭಿಸಿತು. … Continued