ಅಯ್ಯೋ ದೇವ್ರೆ….. ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ಸ್ ನೀಡಿದ್ದಾರೆಂದು ಗಣಿತ ಶಿಕ್ಷಕರನ್ನು ಮರಕ್ಕೆ ಕಟ್ಟಿ‌ ಥಳಿಸಿದ ವಿದ್ಯಾರ್ಥಿಗಳು….!

ದುಮ್ಕಾ: ನೀವು ಬೆಳೆಯುತ್ತಿರುವಾಗ ಶಾಲೆಯಲ್ಲಿ ನಿಮಗೆ ಶಿಕ್ಷಕರು ಹೊಡೆದಿರಬಹುದು ಅಥವಾ ನಿಮ್ಮ ಕೆಲವು ಸಹಪಾಠಿಗಳಿಗೆ ಹೊಡೆದಿರುವುದನ್ನು ನೋಡಿರಬಹುದು. ಆದರೆ ನೀವು ಎಂದಾದರೂ ಶಿಕ್ಷಕರನ್ನು ಹೊಡೆಯಲು ಯೋಚಿಸಿದ್ದೀರಾ? ಇಲ್ಲ. ಆದರೆ, ಆಘಾತಕಾರಿ ಘಟನೆಯೊಂದರಲ್ಲಿ, ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡಿದ್ದಕ್ಕಾಗಿ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನು ಮರಕ್ಕೆ ಕಟ್ಟಿ ವಿದ್ಯಾರ್ಥಿಗಳು ಥಳಿಸಿದ್ದಾರೆ … Continued

ಕಾಶ್ಮೀರ: 3 ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ನಾಗಬಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ಶೋಧ ಕಾರ್ಯಾಚರಣೆಯ ವೇಳೆ ಮೂವರು ಉಗ್ರರನ್ನು … Continued

ಜಯಲಲಿತಾ ಸಾವು ಪ್ರಕರಣ : ಆಪ್ತೆ ಶಶಿಕಲಾ ವಿರುದ್ಧ ತನಿಖೆಗೆ ಶಿಫಾರಸು ಮಾಡಿದ ತನಿಖಾ ಆಯೋಗ

ಚೆನ್ನೈ: ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಆರ್ಮುಗಂ ಸ್ವಾಮಿ ಅವರ ಆಯೋಗವು ಘಟನೆಗೆ ಸಂಬಂಧಿಸಿದಂತೆ ವಿಕೆ ಶಶಿಕಲಾ ಮತ್ತು ಇತರರ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು ಇತರರ ವಿರುದ್ಧ ತನಿಖೆ ನಡೆಸುವಂತೆ ಶಿಫಾರಸು ಮಾಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಡಿಸೆಂಬರ್ 2016 ರಲ್ಲಿ ನಿಧನರಾಗುವ … Continued

ಭಾರತದಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ?: ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ 15% ಹೆಚ್ಚಳ, ಮೆಟ್ರೋ ನಗರಗಳಲ್ಲಿ ದೆಹಲಿ ನಂ.1, ಬೆಂಗಳೂರು ನಂ.3

ನವದೆಹಲಿ: ಒಂದು ವರ್ಷದ ಹಿಂದೆ ಹೋಲಿಸಿದರೆ 2021 ರಲ್ಲಿ ಮಹಿಳೆಯರ ವಿರುದ್ಧದ ಅಪರಾಧದಲ್ಲಿ 15.3%ರಷ್ಟು ಹೆಚ್ಚಳವಾಗಿದೆ, ಪ್ರತಿ 1 ಲಕ್ಷ ಜನಸಂಖ್ಯೆಗೆ ಅಂತಹ ಅಪರಾಧಗಳ ಘಟನೆಗಳ ಸಂಖ್ಯೆಯು ಭಾರತದಾದ್ಯಂತ ಶೇಕಡಾ 8 ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿದ ಅಂಕಿಅಂಶಗಳು ತೋರಿಸಿವೆ. ಅಂಕಿಅಂಶಗಳ ಪ್ರಕಾರ, 2021 ರಲ್ಲಿ ಒಟ್ಟು … Continued

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಭಾರೀ ಆಘಾತ: ಗುಲಾಂ ನಬಿ ಆಜಾದ್‌ ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ 51 ನಾಯಕರು

ಜಮ್ಮು: ಉನ್ನತ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಆಗಾತ ಎದುರಿಸುತ್ತಿದ್ದು, 51 ನಾಯಕರು ರಾಜೀನಾಮೆ ನೀಡಿದ್ದು, ಆಜಾದ್ ಅವರ ಹೊಸ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ. ಆಜಾದ್ ರಾಜೀನಾಮೆ ನಂತರ 64 ನಾಯಕರು ಪಕ್ಷ ತೊರೆದಿದ್ದಾರೆ. ಮಂಗಳವಾರ ಇಲ್ಲಿ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ … Continued

ಪ್ರಶಾಂತ್ ಭೂಷಣ್, ತರುಣ್ ತೇಜ್ಪಾಲ್ ವಿರುದ್ಧ 2009ರ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂಕೋರ್ಟ್

ನವದೆಹಲಿ: ವಕೀಲ ಪ್ರಶಾಂತ್ ಭೂಷಣ್ ಮತ್ತು ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಕ್ಷಮಾಪಣೆ, ವಿವರಣೆಯನ್ನು ಪರಿಗಣಿಸಿ ಅವರ ವಿರುದ್ಧ 2009ರಲ್ಲಿ ಹೂಡಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಬಿಟ್ಟಿದೆ. ತೆಹಲ್ಕಾ ನಿಯತಕಾಲಿಕದಲ್ಲಿ ಪ್ರಕಟವಾದ ಸಂದರ್ಶನಕ್ಕೆ ಸಂಬಂಧಿಸಿದಂತೆ ಭೂಷಣ್ ಮತ್ತು ತೇಜ್ಪಾಲ್ ವಿರುದ್ಧ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಶಶಿ ತರೂರ್ ಯೋಜನೆ…? : ವರದಿ

ನವದೆಹಲಿ: ಕಾಂಗ್ರೆಸ್‌ ನಾಯಕ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಸಂಭಾವ್ಯ ಅವಕಾಶಗಳನ್ನು ಹುಡುಕುತ್ತಿದ್ದಾರೆ. ಆದರೆ ಅವರಿನ್ನೂ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ತರೂರ್ ಅವರು ಈ ಬಗ್ಗೆ ಮಾನಸಿಕವಾಗಿ ಸಿದ್ಧರಾಗಿಲ್ಲ. ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ … Continued

ಮಾನವ ರೂಪಿ ಮುಖದ ಗಣೇಶ ವಿಗ್ರಹ ಹೊಂದಿರುವ ವಿಶ್ವದ ಏಕೈಕ ದೇವಾಲಯ….ಮಾಹಿತಿ ಇಲ್ಲಿದೆ

ಗಣೇಶನಿಗೆ ಸಮರ್ಪಿತವಾದ ದೇಶಾದ್ಯಂತ ನೀವು ಅನೇಕ ವಿಶಿಷ್ಟ ಮತ್ತು ಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಪ್ರತಿಯೊಂದು ದೇವಾಲಯವು ತನ್ನದೇ ಆದ ವಿಶೇಷತೆ ಮತ್ತು ಪೌರಾಣಿಕ ಪ್ರಾಮುಖ್ಯತೆಯನ್ನು ಹೊಂದಿದೆ, ಆದರೆ ನಿಮಗೆ ಎಲ್ಲೆಡೆಯೂ ಸಿಗುವುದು ಗಜಮುಖದ ಗಣಪತಿಯ ವಿಗ್ರಹ ಅಥವಾ ಮೂರ್ತಿಯೇ. ಆದರೆ ಇದಕ್ಕೆ ಭಿನ್ನವಾದ ದೇವಾಲಯ ತಮಿಳುನಾಡಿನ ತಿರುವರೂರ್ ಜಿಲ್ಲೆಯ ಕೊತ್ತನೂರಿನ ತಿಲತರ್ಪಣಪುರಿಯ ಗಣೇಶನ ದೇವಾಲಯ. ಇಲ್ಲಿ … Continued

ಭಾರತದ ಗೌತಮ್ ಅದಾನಿ ಈಗ ವಿಶ್ವದ 3ನೇ ಅತಿದೊಡ್ಡ ಶ್ರೀಮಂತ, ಈ ಸ್ಥಾನ ತಲುಪಿದ ಮೊದಲ ಏಷ್ಯನ್…!

ನವದೆಹಲಿ: ಕೆಲವೇ ವರ್ಷಗಳ ಹಿಂದೆ ಗೌತಮ್ ಅದಾನಿ ಬಗ್ಗೆ ಭಾರತದ ಹೊರಗಿನ ಕೆಲವರು ಮಾತ್ರ ಕೇಳಿದ್ದರು. ಇದೀಗ ಭಾರತೀಯ ಉದ್ಯಮಿ, ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಏಷ್ಯಾದ ವ್ಯಕ್ತಿಯೊಬ್ಬರು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ ಮೊದಲ ಮೂರು ಸ್ಥಾನಗಳಿಗೆ ಪ್ರವೇಶಿಸಿದ್ದು ಇದೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಚೀನಾದ … Continued

2020ರ ವಿವಾದಾತ್ಮಕ ಟ್ವೀಟ್‌ಗಾಗಿ ನಟ ಕಮಲ್ ಆರ್ ಖಾನ್ ಬಂಧನ

ಮುಂಬೈ: ಕೆಆರ್‌ಕೆ ಎಂಬ ಮೊದಲಕ್ಷರಗಳಿಂದ ಪರಿಚಿತರಾಗಿರುವ ನಟ ಕಮಲ್ ಆರ್ ಖಾನ್ ಅವರನ್ನು ಎರಡು ವರ್ಷಗಳ ಹಿಂದಿನ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಇಂದು, ಮಂಗಳವಾರ ಬಂಧಿಸಲಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಮಂಗಳವಾರ ಖಾನ್ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮುಂಬೈನ ಬೊರಿವಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಕಮಲ್ ರಶೀದ್ ಖಾನ್ … Continued