ಭೇಟಿ ಮಾಡಬಹುದು, ತಬ್ಬಿಕೊಳ್ಳಬಹುದು, ಆದರೆ ಆತನ ಸಿದ್ಧಾಂತ ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ : ವರುಣ್ ಗಾಂಧಿ ಬಗ್ಗೆ ರಾಹುಲ್ ಗಾಂಧಿ

ಹೋಶಿಯಾರಪುರ (ಪಂಜಾಬ್): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಸೋದರ ಸಂಬಂಧಿ ಮತ್ತು ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ತಾನು ಭೇಟಿಯಾಗಬಹುದು ಮತ್ತು ಅಪ್ಪಿಕೊಳ್ಳಬಹುದು ಆದರೆ ಅವರ ಸಿದ್ಧಾಂತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ನನ್ನ ಸಿದ್ಧಾಂತವು ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ನಾನು ಆರ್‌ಎಸ್‌ಎಸ್ ಕಚೇರಿಗೆ ಹೋಗಲಾರೆ. ನೀವು ನನ್ನ ಕತ್ತು … Continued

ಪಾಕ್‌ ಕ್ರಿಕೆಟ್‌ ತಂಡದ ನಾಯಕ ಬಾಬರ್ ಆಜಮ್ ಖಾಸಗಿ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆ: ನೆಟಿಜನ್‌ಗಳಿಗೆ ಆಘಾತ

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ತಮ್ಮ ವೃತ್ತಿಪರ ಹಾಗೂ ವೈಯಕ್ತಿಕ ಜೀವನದಲ್ಲಿ ತೊಂದರೆ ಎದುರಿಸುತ್ತಿದ್ದಾರೆ. ಬಾಬರ್ ಅಜಮ್ ಅವರು ಈಗಾಗಲೇ ತನ್ನ ತವರು ನೆಲದಲ್ಲಿ ಸೋಲನುಭವಿಸಿದ ಟೆಸ್ಟ್ ಋತುವಿನ ನಂತರ ತಮ್ಮ ನಾಯಕತ್ವದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಪಾಕಿಸ್ತಾನಿ ಕ್ರಿಕೆಟಿಗ ಅವರು ಮತ್ತು ಮಹಿಳೆಯನ್ನು ಒಳಗೊಂಡ ಖಾಸಗಿ ವೀಡಿಯೊಗಳು, ಆಡಿಯೊಗಳು … Continued

ಜೂನ್ 2024ರ ವರೆಗೆ ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ಮಂಗಳವಾರ ವಿಸ್ತರಿಸಲಾಗಿದೆ. 2024ರ ಲೋಕಸಭೆ ಚುನಾವಣೆಗೆ ಜೆಪಿ ನಡ್ಡಾ ಬಿಜೆಪಿ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024ರ ವರೆಗೆ ವಿಸ್ತರಿಸಲಾಗಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ … Continued

ಭಾರತ ಜೋಡೋ ಯಾತ್ರೆ : ರಾಹುಲ್‌ ಗಾಂಧಿಯನ್ನು ತಬ್ಬಿಕೊಳ್ಳಲು ಯತ್ನಿಸಿದ ವ್ಯಕ್ತಿ | ವೀಡಿಯೊ

ಹೋಶಿಯಾರ್‌ಪುರ (ಪಂಜಾಬ್): ಭಾರತ್ ಜೋಡೋ ಯಾತ್ರೆ ಪಂಜಾಬಿನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಚರಿಸುತ್ತಿದ್ದಾಗ ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯತ್ತ ಒಮ್ಮೆಲೇ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಈ ವ್ಯಕ್ತಿಯನ್ನು ತಡೆದರು. ಪೊಲೀಸ್ ಮಹಾನಿರೀಕ್ಷಕ ಜಿ ಎಸ್ ಧಿಲ್ಲೋನ್ ಅವರು ರಾಹುಲ್‌ ಗಾಂಧಿಯೇ ಆ ವ್ಯಕ್ತಿಗೆ ಕರೆ … Continued

ಪಾಕಿಸ್ತಾನದ ಕರಾಚಿಯಲ್ಲಿ ದಾವೂದ್ ಇಬ್ರಾಹಿಂ 2ನೇ ಮದುವೆ : ಮಾಹಿತಿ ಬಹಿರಂಗಪಡಿಸಿದ ದಾವೂದ್ ಸಹೋದರಿಯ ಪುತ್ರ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನಿ ಮಹಿಳೆಯನ್ನು ಎರಡನೇ ಮದುವೆಯಾಗಿದ್ದು, ವಾಂಟೆಡ್ ಕ್ರಿಮಿನಲ್ ಕರಾಚಿಯ ಡಿಫೆನ್ಸ್ ಏರಿಯಾದಲ್ಲಿರುವ ಹೊಸ ಮನೆಗೆ ಸ್ಥಳಾಂತರಗೊಂಡಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ವಿಚಾರಣೆ ವೇಳೆ ದಾವೂದ್‌ನ ಮೃತ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಇಬ್ರಾಹಿಂ ಪಾರ್ಕರ್ ಈ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ದಾವೂದ್ ಇಬ್ರಾಹಿಂನ ಎರಡನೇ … Continued

ಕಾಶ್ಮೀರದ ಬುದ್ಗಾಮ್‌ನಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: “ಕಾಶ್ಮೀರದ ಬುದ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿದ್ದರು” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಮಂಗಳವಾರ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ನಂತರ ಸೈನಿಕರು ಬುದ್ಗಾಮ್‌ನಲ್ಲಿ ಮೊಬೈಲ್ ವಾಹನ ತಪಾಸಣಾ ಕೇಂದ್ರವನ್ನು ಸ್ಥಾಪಿಸಿದ್ದಾರೆ ಎಂದು ಸೇನಾ … Continued

‘ಭಾರತದ ಜೊತೆಗಿನ ಮೂರು ಯುದ್ಧಗಳಿಂದ ಪಾಕಿಸ್ತಾನ ಪಾಠ ಕಲಿತಿದೆ, ಈಗ ಶಾಂತಿ ಬೇಕು’: ‘ಮಾತುಕತೆ’ಗೆ ಪ್ರಧಾನಿ ಮೋದಿಗೆ ಪಾಕ್ ಪ್ರಧಾನಿ ಸಂದೇಶ

ನವದೆಹಲಿ: ಭಾರತದೊಂದಿಗೆ ಮೂರು ಯುದ್ಧಗಳ ನಂತರ ದೇಶವು ತನ್ನ ಪಾಠವನ್ನು ಕಲಿತಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ ಮತ್ತು ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಆಹಾರದ ಬೆಲೆಗಳು ಗಗನಕ್ಕೇರಿದ್ದು, ಆರ್ಥಿಕ ಬಿಕ್ಕಟ್ಟಿನೊಂದಿಗೆ ಹೆಣಗಾಡುತ್ತಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂದರ್ಶನವೊಂದರಲ್ಲಿ ಪಾಕಿಸ್ತಾನವು ಹಿಂದಿನ ಯುದ್ಧಗಳಿಂದ ಪಾಠಗಳನ್ನು ಕಲಿತಿದೆ ಮತ್ತು ಭಾರತದೊಂದಿಗೆ … Continued

ಪಕ್ಷದ ಸಹೋದ್ಯೋಗಿಯನ್ನು ನೆನೆಸಿಕೊಂಡು ಪತ್ರಿಕಾಗೋಷ್ಠಿಯಲ್ಲೇ ಗಳಗಳನೆ ಅತ್ತ ಕೇಂದ್ರ ಸಚಿವ

ಪಾಟ್ನಾ: ಬಕ್ಸರ್‌ನಲ್ಲಿ ಸೋಮವಾರ ನಿಧನರಾದ ಭಾರತೀಯ ಜನತಾ ಪಕ್ಷದ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪರಶುರಾಮ ಚತುರ್ವೇದಿ ಅವರನ್ನು ಸ್ಮರಿಸುವಾಗ ಕೇಂದ್ರ ರಾಜ್ಯ ಸಚಿವ (MoS) ಅಶ್ವಿನಿ ಚೌಬೆ ಅವರು ಸೋಮವಾರ ಕ್ಯಾಮರಾ ಮುಂದೆಯೇ ಗಳಗಳನೆ ಅತ್ತರು. “ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲಿ ರೈತ ಸಂಬಂಧಿ ಸಮಸ್ಯೆಗಳನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹದಲ್ಲಿ … Continued

ಭಾರತಕ್ಕೆ ದೊಡ್ಡ ಯಶಸ್ಸು…: ಚೀನಾ ತಾಂತ್ರಿಕ ತಡೆ ಹಿಂಪಡೆದ ನಂತರ ಪಾಕ್ ಮೂಲದ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ: ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಯಶಸ್ಸು ಎಂದು ವಿವರಿಸಬಹುದಾದ ಬೆಳವಣಿಗೆಯೊಂದರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಸೋಮವಾರ ರಾತ್ರಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಸಮಿತಿ ಎಂದೂ ಕರೆಯಲ್ಪಡುವ ನಿರ್ಬಂಧಗಳ ಸಮಿತಿಯ ಅಡಿಯಲ್ಲಿ ಮಕ್ಕಿಯನ್ನು ಪಟ್ಟಿ ಮಾಡುವ ಪ್ರಸ್ತಾಪವನ್ನು … Continued

2023ರಲ್ಲಿ ನಡೆಯುವ 9 ರಾಜ್ಯಗಳ ಚುನಾವಣೆಯಲ್ಲಿ ಯಾವುದರಲ್ಲೂ ಪಕ್ಷ ಸೋಲಬಾರದು : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧ್ಯಕ್ಷ ನಡ್ಡಾ

ನವದೆಹಲಿ: ಸೋಮವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷವು ಈ ವರ್ಷ ಒಂಬತ್ತು ವಿಧಾನಸಭಾ ಚುನಾವಣೆಗಳನ್ನು ಎದುರಿಸಬೇಕಾಗಿದೆ ಮತ್ತು ಅದರಲ್ಲಿ ಒಂದನ್ನು ಸಹ ಕಳೆದುಕೊಳ್ಳಬಾರದು ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಕರೆ ನೀಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ರವಿಶಂಕರ ಪ್ರಸಾದ ಹೇಳಿದ್ದಾರೆ. ಸಭೆಯಲ್ಲಿ ಚರ್ಚೆ ನಡೆದ ವಿಷಯಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ … Continued