ಜೈನರ ಪವಿತ್ರ ಸ್ಥಳ ಶ್ರೀ ಸಮ್ಮೇದ್ ಶಿಖರ್ಜಿ ಕುರಿತ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಮಾಡುತ್ತಿದ್ದ ಮತ್ತೊಬ್ಬ ಜೈನ ಸನ್ಯಾಸಿ ನಿಧನ

ಜೈಪುರ: ಜೈನರ ಪವಿತ್ರ ಕ್ಷೇತ್ರ ಶ್ರೀ ಸಮ್ಮೇದ್ ಶಿಖರ್ಜಿಯನ್ನು ಪ್ರವಾಸಿ ಸ್ಥಳವನ್ನಾಗಿ ಘೋಷಿಸುವ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೈನ ಸನ್ಯಾಸಿಯೊಬ್ಬರು ಜೈಪುರದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಸಮುದಾಯದ ಮುಖಂಡರೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಜೈನ ಸನ್ಯಾಸಿ ಸಮರ್ಥ ಸಾಗರ (74) ಅವರು ಐದು ದಿನಗಳ ಉಪವಾಸದ ನಂತರ ಶುಕ್ರವಾರ ಬೆಳಗಿನ ಜಾವ … Continued

ಸಲಿಂಗ ವಿವಾಹ: ಹೈಕೋರ್ಟ್‌ಗಳ ಮುಂದಿರುವ ಎಲ್ಲ ಅರ್ಜಿಗಳನ್ನು ತನಗೆ ವರ್ಗಾಯಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗಿ, ದ್ವಿಲಿಂಗಿ, ಮಂಗಳಮುಖಿ, ಲಿಂಗಪರಿವರ್ತಿತ, ಅಸಮ, ಅಂತರ್‌ ಲಿಂಗಿ, ಅಲೈಂಗಿಕ ಮತ್ತಿತರ (ಎಲ್‌ಜಿಬಿಟಿಕ್ಯುಐಎ ಪ್ಲಸ್‌) ಸಮುದಾಯಕ್ಕೆ ಸೇರಿದವರಿಗೂ ವಿವಾಹದ ಹಕ್ಕನ್ನು ವಿಸ್ತರಿಸುವಂತೆ ಕೋರಿ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸಲ್ಲಿಸಲಾಗಿರುವ ಎಲ್ಲಾ ಅರ್ಜಿಗಳನ್ನು ತನಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ … Continued

ಸದ್ಯಕ್ಕೆ ದೆಹಲಿಗೆ ಮೇಯರ್ ಇಲ್ಲ: ಎಎಪಿ-ಬಿಜೆಪಿ ಘರ್ಷಣೆ ನಂತರ ಚುನಾವಣೆ ಮುಂದೂಡಿಕೆ

ನವದೆಹಲಿ : 10 ಮಂದಿ ಆಲ್ಡರ್‌ಮನ್‌ಗಳಿಗೆ ಮೊದಲು ಪ್ರಮಾಣ ವಚನ ಬೋಧಿಸುವ ಸಭಾಧ್ಯಕ್ಷರ ನಿರ್ಧಾರದ ಕುರಿತು ಆಪ್ ಕೌನ್ಸಿಲರ್‌ಗಳ ತೀವ್ರ ಪ್ರತಿಭಟನೆಯ ನಡುವೆ ಹೊಸದಾಗಿ ಆಯ್ಕೆಯಾದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನ ಮೊದಲ ಸಭೆಯಲ್ಲಿ ಮೇಯರ್ ಮತ್ತು ಉಪಮೇಯರ್ ಆಯ್ಕೆ ಮಾಡದೆ ಮುಂದೂಡಲಾಗಿದೆ. ಸಭೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ … Continued

ಶೀತಗಾಳಿ ಆಘಾತ : ಕಾನ್ಪುರದಲ್ಲಿ ಒಂದೇ ದಿನ 25 ಮಂದಿ ಹೃದಯಾಘಾತ, ಬ್ರೈನ್ ಸ್ಟ್ರೋಕ್‌ನಿಂದ ಸಾವು

ಕಾನ್ಪುರ: ಉತ್ತರ ಪ್ರದೇಶದಲ್ಲಿ ಚಳಿಗಾಳಿ ದಿನದಿಂದ ದಿನಕ್ಕೆ ಮಾರಕವಾಗುತ್ತಿದೆ. ಕಾನ್ಪುರದಲ್ಲಿ ಗುರುವಾರ 25 ಮಂದಿ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರಲ್ಲಿ ಹದಿನೇಳು ಮಂದಿ ವೈದ್ಯಕೀಯ ನೆರವು ನೀಡುವ ಮುನ್ನವೇ ಸಾವಿಗೀಡಾಗಿದ್ದಾರೆ. ವೈದ್ಯರ ಪ್ರಕಾರ, ಶೀತದಲ್ಲಿ ರಕ್ತದೊತ್ತಡವು ಹಠಾತ್ ಹೆಚ್ಚಳ ಮತ್ತು ರಕ್ತ ಹೆಪ್ಪುಗಟ್ಟುವಿಕೆ ಹೃದಯಾಘಾತ ಮತ್ತು ಮೆದುಳಿನ ಮೇಲೆ ಪರಿಣಾಮಕ್ಕೆ … Continued

ಮಹಿಳಾ ಪೊಲೀಸ್‌ ಅಧಿಕಾರಿ ಬೆನ್ನಟ್ಟಿ ಕತ್ತಿ ತೋರಿಸಿ ಬೆದರಿಸಿದ ಪ್ರಕರಣ: ಮೂವರ ಬಂಧನ

ಭುವನೇಶ್ವರ: ಎರಡು ದಿನಗಳ ಹಿಂದೆ ರಾತ್ರಿ ಕರ್ತವ್ಯ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಕತ್ತಿ ತೋರಿಸಿ ಬೆದರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭುವನೇಶ್ವರದ ವಿವಿಧ ಪ್ರದೇಶಗಳಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಪ್ರತೀಕ್ ಸಿಂಗ್ ತಿಳಿಸಿದ್ದಾರೆ. ಭುವನೇಶ್ವರದ ಮಹಿಳಾ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುಭಾಶ್ರೀ ನಾಯಕ್ ಅವರು ತಮ್ಮ ದೂರಿನಲ್ಲಿ ಜನವರಿ … Continued

ಟಿಆರ್​​ಎಫ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಮೂಲದ ಟಿಆರ್​​ಎಫ್ (The Resistance Front) ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಾತ್ರವಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಭಯೋತ್ಪಾದಕನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ನೆರಳು ಸಂಘಟನೆ(shadow organisation)ಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕಾಶ್ಮೀರದಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಿದ ಮೂರು … Continued

ಜೈನ ಸಮುದಾಯಕ್ಕೆ ದೊಡ್ಡ ಗೆಲುವು: ಜಾರ್ಖಂಡ್‌ನ ಜೈನರ ಪವಿತ್ರ ಸ್ಥಳ ಸಮ್ಮೇದ್‌ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರದಿಂದ ತಡೆ

ನವದೆಹಲಿ: ವಿವಿಧ ನಗರಗಳಲ್ಲಿ ಜೈನ ಸಮುದಾಯದಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಧಾರ್ಮಿಕ ತಾಣವಾದ ಶ್ರೀ ಸಮ್ಮೇದ್ ಶಿಖರ್ಜಿಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಜಾರ್ಖಂಡ್ ಸರ್ಕಾರದ ನಿರ್ಧಾರಕ್ಕೆ ಕೇಂದ್ರವು ಗುರುವಾರ ತಡೆ ನೀಡಿದೆ. ಹೆಚ್ಚುವರಿಯಾಗಿ, ಗಿರಿದಿಹ್‌ನಲ್ಲಿರುವ ಸಮುದಾಯದ ಪವಿತ್ರ ಸ್ಥಳಗಳಲ್ಲಿ ಒಂದಾದ ಪಾರಸನಾಥ ಪರ್ವತದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಬಗೆಗಿನ ಸಮಸ್ಯೆ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರವು ಸಮಿತಿಯನ್ನು … Continued

ದೆಹಲಿಯ ಭಯಾನಕ: ಅಪಘಾತದ ನಂತರ ತಮ್ಮ ವಾಹನವ ಬಿಟ್ಟು ಆಟೋದಲ್ಲಿ ಪರಾರಿಯಾದ ಆರೋಪಿಗಳು | ವೀಕ್ಷಿಸಿ

ನವದೆಹಲಿ: ದೆಹಲಿಯಲ್ಲಿ ಹೊಸ ವರ್ಷದ ಮುಂಜಾನೆ ವಾಹನದ ಅಪಘಾತದ ಭೀಕರ ಘಟನೆಯಲ್ಲಿ ಇಬ್ಬರು ಹೊಸ ಶಂಕಿತರು ರಾಡಾರ್‌ಗೆ ಬಂದಿದ್ದಾರೆ. ಅಪಘಾತದಲ್ಲಿ 20 ವರ್ಷದ ಯುವತಿಯೊಬ್ಬರು ಕಾರಿನ ಕೆಳಗೆ ಸಿಲುಕಿದ ನಂತರ ಕಾರು 13 ಕಿಲೋಮೀಟರ್ ಎಳೆದೊಯ್ದು ಸಾವಿಗೀಡಾಗಿದ್ದಾರೆ. ಅಪಘಾತದ ನಂತರ ಅವರು ತಮ್ಮ ವಾಹನವನ್ನು ಪಾರ್ಕಿಂಗ್ ಸ್ಥಳದಲ್ಲಿ ಬಿಟ್ಟು ಆಟೋದಲ್ಲಿ ಪರಾರಿಯಾಗುವುದನ್ನು ಕಾಣಬಹುದು. “ಬಂಧಿತ ಐವರನ್ನು … Continued

ಪ್ರಸಾರ ಭಾರತಿ ಉನ್ನತೀಕರಣಕ್ಕೆ 2,539 ಕೋಟಿ ರೂ. : ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ : ‘ಪ್ರಸಾರ ಭಾರತಿ’ಯ ಉನ್ನತೀಕರಣಕ್ಕೆ 2025 – 26ನೇ ಸಾಲಿನವರೆಗೆ 2,539.61 ಕೋಟಿ ರೂ. ಮೀಸಲಿರಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಆಕಾಶವಾಣಿ ಮತ್ತು ದೂರದರ್ಶನದ ಪ್ರಸಾರ ವ್ಯಾಪ್ತಿ ಜಾಲವನ್ನು ವಿಸ್ತರಿಸುವ ಉದ್ದೇಶದೊಂದಿಗೆ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ’ (ಬಿಐಎನ್‌ಡಿ) ಯೋಜನೆಯ … Continued

ಸರ್ಕಾರದ ವಿರುದ್ಧ 10,000 ಕೋಟಿ ರೂ. ನಷ್ಟ ಪರಿಹಾರದ ದಾವೆ ಹೂಡಿದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ವ್ಯಕ್ತಿ

ಇಂದೋರ್‌: ಗ್ಯಾಂಗ್ ರೇಪ್ ಪ್ರಕರಣದಲ್ಲಿ 2022ರ ಅಕ್ಟೋಬರ್‌ನಲ್ಲಿ ಖುಲಾಸೆಗೊಂಡಿದ್ದ ಮಧ್ಯಪ್ರದೇಶದ ರಾಟ್ಲಂನ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ, ಮಧ್ಯಪ್ರದೇಶ ಸರ್ಕಾರದ ವಿರುದ್ಧ ದಾವೆ ಹೂಡಿದ್ದಾನೆ. ‘ಸುಳ್ಳು ಆರೋಪ’ಗಳನ್ನು ಹೊರಿಸಿ 666 ದಿನಗಳ ಕಾಲ ಕಂಬಿ ಹಿಂದೆ ಕೂರುವಂತೆ ಮಾಡಿದ್ದಕ್ಕಾಗಿ ಸರ್ಕಾರ ತನಗೆ 10,006 ಕೋಟಿ ರೂ ಪರಿಹಾರ ನೀಡಬೇಕು ಎಂದು ಆತ ಒತ್ತಾಯಿಸಿದ್ದಾನೆ. ತನ್ನ ಸೆರೆವಾಸವು ತನ್ನ … Continued