ಅಟಲ್ ಸುರಂಗವು ‘10,000 ಅಡಿಗಳ ಮೇಲಿನ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ’: ಪ್ರಮಾಣೀಕರಿಸಿದ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್

ನವದೆಹಲಿ: ಬುಧವಾರ ನವದೆಹಲಿಯಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅಟಲ್ ಸುರಂಗವನ್ನು ‘10,000 ಅಡಿ ಎತ್ತರದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ’ ಎಂದು ಪ್ರಮಾಣೀಕರಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. ಮನಾಲಿಯನ್ನು ಲಾಹೌಲ್-ಸ್ಪಿತಿಗೆ ಸಂಪರ್ಕಿಸುವ ಈ ಎಂಜಿನಿಯರಿಂಗ್ ಅದ್ಭುತವನ್ನು ನಿರ್ಮಿಸುವಲ್ಲಿ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ನ ಅನುಕರಣೀಯ ಕಾರ್ಯಕ್ಷಮತೆಯನ್ನು … Continued

ಮಣಿಪುರ ವಿಧಾನಸಭಾ ಚುನಾವಣಾ ದಿನಾಂಕ ಬದಲಾವಣೆ

ನವದೆಹಲಿ: ಚುನಾವಣಾ ಆಯೋಗವು ಮಣಿಪುರ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು ಬದಲಾವಣೆ ಮಾಡಿದೆ. ಮೊದಲ ಹಂತದ ಮತದಾನ ಫೆಬ್ರವರಿ 27ಕ್ಕೆ ಬದಲಾಗಿ ಫೆಬ್ರವರಿ 28ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಮಾರ್ಚ್ 3ರ ಬದಲು ಮಾರ್ಚ್ 5ರಂದು ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮುಂಬರುವ ಚುನಾವಣೆಗೆ ಇಂಫಾಲ್ … Continued

ಲಖಿಂಪುರ ಖೇರಿ ಘಟನೆ: ಕೇಂದ್ರ ಸಚಿವ ಅಜಯ್ ಮಿಶ್ರಾ ಮಗನಿಗೆ ಜಾಮೀನು

ಅಲಹಾಬಾದ್‌: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಕಳೆದ ವರ್ಷ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ವೇಳೆ ರೈತರ ಮೇಲೆ ಕಾರು ಹಾಯಿಸಿ ಕೊಂದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶೀಶ್ ಮಿಶ್ರಾ ಅವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಮುಖ್ಯ ಆರೋಪಿ ಆಶಿಶ್ … Continued

ಯುವಕರಿಗೆ ಸ್ಫೂರ್ತಿ: ಮಾಜಿ ಡಬ್ಲ್ಯುಡಬ್ಲ್ಯುಇ ಸ್ಟಾರ್ ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ದಿ ಗ್ರೇಟ್ ಖಲಿ ಎಂದು ಖ್ಯಾತರಾಗಿರುವ ವೃತ್ತಿಪರ ಕುಸ್ತಿಪಟು ಮತ್ತು ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (ಡಬ್ಲ್ಯುಡಬ್ಲ್ಯುಇ) ಸ್ಟಾರ್ ದಿಲೀಪ್ ಸಿಂಗ್ ರಾಣಾ ಗುರುವಾರ ಬಿಜೆಪಿಗೆ ಸೇರಿದ್ದಾರೆ. ಖಲಿ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಮುಂಜಾನೆ ತಲುಪಿದರು ಮತ್ತು ಮಧ್ಯಾಹ್ನ 1 ಗಂಟೆಗೆ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಯಿತು. ದಿ ಗ್ರೇಟ್ … Continued

ಹಿಜಾಬ್ ವಿವಾದ: ಮುಸ್ಕಾನ್ ಖಾನ್ ಬೆಂಬಲಿಸಿದ ಆರ್‌ಎಸ್‌ಎಸ್ ಮುಸ್ಲಿಂ ಘಟಕ, ಜೈ ಶ್ರೀ ರಾಮ್” ಘೋಷಣೆ ಕೂಗಿ ಭೀತಿಗೊಳಿಸುವ ಹುಡುಗರ ವರ್ತನೆ ಸ್ವೀಕಾರಾರ್ಹವಲ್ಲ ಎಂದು ಹೇಳಿಕೆ

ಅಯೋಧ್ಯಾ: ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮಂಡ್ಯದ ಪಿಇಎಸ್​ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್​ ಖಾನ್ ಅವರಿಗೆ ಆರ್​ಎಸ್​ಎಸ್​ನ ಮುಸ್ಲಿಂ ಘಟಕ, ಮುಸ್ಲಿಂ ರಾಷ್ಟ್ರೀಯ ಮಂಚ್​ ಬೆಂಬಲ ವ್ಯಕ್ತಪಡಿಸಿದೆ. ಬೀಬಿ ಮುಸ್ಕಾನ್ ಅವರ ಹಿಜಾಬ್‌ನ ಕರೆಗೆ ಬೆಂಬಲವಾಗಿ ನಿಂತ ಮುಸ್ಲಿಂ ರಾಷ್ಟ್ರೀಯ ಮಂಚ್ ಅವಳನ್ನು ಸುತ್ತುವರೆದಿರುವ ಕೇಸರಿ ಉನ್ಮಾದವನ್ನು ಖಂಡಿಸಿದೆ. ಅಲ್ಲದೆ, ಹಿಜಾಬ್ ಅಥವಾ ‘ಪರ್ದಾ’ ಭಾರತೀಯ ಸಂಸ್ಕೃತಿಯ … Continued

ಖ್ಯಾತ ಫುಟ್ಬಾಲ್‌ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊಗೆ ಇನ್‌ಸ್ಟಾಗ್ರಾಮ್‌ನಲ್ಲಿ 40 ಕೋಟಿ ಫಾಲೋವರ್ಸ್..! ಈ ಸಾಧನೆ ಮಾಡಿದ ವಿಶ್ವದ ಏಕೈಕ ವ್ಯಕ್ತಿ ..ಟಾಪ್‌ ಟೆನ್‌ ಪಟ್ಟಿ ಇಲ್ಲಿದೆ

ಕ್ರಿಸ್ಟಿಯಾನೋ ರೊನಾಲ್ಡೊ ಇನ್‌ಸ್ಟಾಗ್ರಾಮ್‌ನಲ್ಲಿ 400 ಮಿಲಿಯನ್ ((40 ಕೋಟಿ) ಫಾಲೋವರ್ಸ್ ತಲುಪುವ ಮೂಲಕ ಇತಿಹಾಸವನ್ನು ಸೃಷ್ಟಸಿದ್ದಾರೆ. ಇನ್‌ಸ್ಟಾಗ್ರಾಮ್‌ (Instagram)ನಲ್ಲಿ 40 ಕೋಟಿ ಅನುಯಾಯಿಗಳನ್ನು ತಲುಪಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೈಲಿ ಜೆನ್ನರ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 309 ಮಿಲಿಯನ್ (30.9 ಕೋಟಿ) ಅನುಯಾಯಿಗಳೊಂದಿಗೆ ಪಟ್ಟಿಯಲ್ಲಿ ಮುಂದಿನ ಸೆಲೆಬ್ರಿಟಿಯಾಗಿದ್ದಾರೆ ಲಿಯೋನೆಲ್ ಮೆಸ್ಸಿ ಒಟ್ಟಾರೆ ಪಟ್ಟಿಯಲ್ಲಿ ಮೂರನೇ … Continued

ಸತತ ಹತ್ತನೇ ಬಾರಿ ರೆಪೋ ದರ, ರಿವರ್ಸ್ ರೆಪೋ ದರ ಯಥಾಸ್ಥಿತಿಯಲ್ಲಿಟ್ಟ ಆರ್ ಬಿಐ

ಮುಂಬೈ: ಆರ್‌ಬಿಐ ಬೆಂಚ್‌ಮಾರ್ಕ್ ಸಾಲದ ದರವನ್ನು ಸತತವಾಗಿ 10 ನೇ ಬಾರಿಗೆ 4 ಪ್ರತಿಶತದಲ್ಲಿ ಬದಲಾಯಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಮತ್ತು ಹಣದುಬ್ಬರದ ಎತ್ತರದ ಹಿನ್ನೆಲೆಯಲ್ಲಿ ಅದರ ಹೊಂದಾಣಿಕೆಯ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ. ರಿವರ್ಸ್ ರೆಪೊ ದರವನ್ನು ಸಹ 3.35 ಪ್ರತಿಶತಕ್ಕೆ ಬದಲಾಯಿಸದೆ ಯಥಾಸ್ಥಿತಿ ಇರಿಸಲಾಗಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ … Continued

ಹಿಜಾಬ್ ಪ್ರಕರಣ ಸುಪ್ರೀಕೋರ್ಟ್‌ ಮುಂದೆ ಸಿಬಲ್ ಪ್ರಸ್ತಾಪ: ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ ಎಂದ ಸಿಜೆಐ

ನವದೆಹಲಿ: ಸುಪ್ರೀಂ ಕೋರ್ಟ್ ಹಿಜಾಬ್ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಧಾರ್ಮಿಕ ವಿಷಯವಾಗಿರುವುದರಿಂದ ಪ್ರಕರಣವನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಮನವಿ ಮಾಡಿದಾಗ ಸಿಜೆಐ ರಮಣ ಈ ಹೇಳಿಕೆ ನೀಡಿದ್ದಾರೆ. ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ. ಕಲ್ಲೆಸೆಯಲಾಗುತ್ತಿದೆ. ಈ … Continued

ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಕಚೇರಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಿಜೆಪಿ ಪದಾಧಿಕಾರಿಯೊಬ್ಬರು ಬಾಂಬ್ ಎಸೆದ ಘಟನೆಗೆ ಆಡಳಿತಾರೂಢ ಡಿಎಂಕೆಯನ್ನು ದೂಷಿಸಿದ್ದಾರೆ ಮತ್ತು ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿದೆ ಎಂದು ಹೇಳಿದ್ದಾರೆ. ದಾಳಿಯ ಬಗ್ಗೆ … Continued

ಭಾರತದಲ್ಲಿ ಹೊಸದಾಗಿ 67,084 ಕೋವಿಡ್‌ ಪ್ರಕರಣಗಳು ದಾಖಲು.. ಇದು ನಿನ್ನೆಗಿಂತ 6% ಇಳಿಕೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶವು 67,084 ಸೋಂಕುಗಳನ್ನು ದಾಖಲಿಸುವುದರೊಂದಿಗೆ ಕೋವಿಡ್ -19 ಪ್ರಕರಣಗಳು ಭಾರತದಲ್ಲಿ ಶೇಕಡಾ 6 ರಷ್ಟು ಇಳಿಕೆ ಕಂಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಒಟ್ಟಾರೆ ಪ್ರಕರಣ 4,24,78,060 ಕ್ಕೆ ಏರಿದೆ. ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ 1,241 ಜನರು ಕೋವಿಡ್ -19 ಸೋಂಕಿಗೆ ಮೃತಪಟ್ಟಿದ್ದು, … Continued