ವಿಮಲ್ ಎಲೈಚಿ ಜಾಹೀರಾತು : ಅಜಯ ದೇವಗನ್, ಶಾರುಖ್ ಖಾನ್, ಟೈಗರ್ ಶ್ರಾಫ್‌ಗೆ ಎಫ್‌ಡಿಎ ನೋಟಿಸ್

ಮುಂಬೈ: ವಿಮಲ್ ಎಲೈಚಿ ಜಾಹೀರಾತಿನಲ್ಲಿ ಬ್ರ್ಯಾಂಡ್ ಅನುಮೋದಕರಾಗಿ ಕಾಣಿಸಿಕೊಂಡಿರುವ ಬಾಲಿವುಡ್ ನಟರಾದ ಅಜಯ ದೇವಗನ್, ಶಾರುಖ್ ಖಾನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ‘ವಿಮಲ್ ಎಲೈಚಿ’ ಹೆಸರಿನಲ್ಲಿ ಪ್ರಸಾರವಾಗಿರುವ ಈ ಜಾಹೀರಾತು ನಿಷೇಧಿತ ಅಥವಾ ನಿರ್ಬಂಧಿತ ಉತ್ಪನ್ನದ ಪರೋಕ್ಷ, ಪರ್ಯಾಯ … Continued

ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ನೂತನ ತಂಡದ ಘೋಷಣೆ ; ಹಲವು ಬದಲಾವಣೆ, ಮಹಿಳೆಯರಿಗೆ ಆದ್ಯತೆ

ನವದೆಹಲಿ : ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ.  ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ ಮಾಧವ ಅವರಿಗೆ ಪ್ರಮುಖ ಸಂಘಟನಾ ಜವಾಬ್ದಾರಿಗಳನ್ನು ನೀಡಲಾಗಿದೆ. ನಬೀನ್ ಅವರು … Continued

ಈ ಮೊದಲಿನ ರಾಜೀನಾಮೆ ಅಂಗೀಕರಿಸದ ಕಾರಣ ಬಿಜೆಪಿಗೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ ಶೆಹಜಾದ್ ಪೂನಾವಾಲಾ

ನವದೆಹಲಿ : ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಾವು ಹಿಂದೆ ನೀಡಿದ್ದ ರಾಜೀನಾಮೆಯನ್ನುಬಿಜೆಪಿ ಅಧ್ಯಕ್ಷರು ಸ್ವೀಕರಿಸದ ಕಾರಣ ಈಗ ಪಕ್ಷಕ್ಕೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ್ದು, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಮನವಿ ಮಾಡಿದ್ದಾರೆ. ಆಗಸ್ಟ್ 17ರಂದು ಬರೆದಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ರಾಷ್ಟ್ರೀಯ ವಕ್ತಾರ ಹುದ್ದೆಯ … Continued

ದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯ

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಂತಹ ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪವಿತ್ರ ಶ್ರಾವಣ ಮಾಸದ ಸೋಮವಾರದ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಶಿವನ ದರ್ಶನ ಹಾಗೂ ಪೂಜೆ ಸಲ್ಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಜಿಲ್ಲಾಧಿಕಾರಿ … Continued

ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?

ನವದೆಹಲಿ: ಆಗ್ನೇಯ ಏಷ್ಯಾದ ದೇಶಗಳಿಂದ ಭಾರತಕ್ಕೆ ಅಡಕೆ ಆಮದು ಮಾಡಿಕೊಂಡು, ಅದನ್ನು ಬಾಂಗ್ಲಾದೇಶ ಮೂಲದ ಅಡಕೆ ಎಂದು ಸುಳ್ಳು ಹೇಳಿ ವಂಚಿಸಿ ದಕ್ಷಿಣ ಏಷ್ಯಾ ಮುಕ್ತ ವ್ಯಾಪಾರ ಒಪ್ಪಂದ (SAFTA) ಅಡಿ ದೊರೆಯುವ ಕಸ್ಟಮ್ಸ್ ಸುಂಕ ವಿನಾಯಿತಿ ಪಡೆಯುತ್ತಿದ್ದರೆನ್ನಲಾದ ದೊಡ್ಡ ಜಾಲವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಭೇದಿಸಿದೆ. ಡಿಆರ್‌ಐ(DRI) ನಡೆಸಿದ ತನಿಖೆಯಲ್ಲಿ ಈ ಜಾಲದಿಂದ … Continued

ಶಿರಸಿ : 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್‌ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continued

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ (74) ಅವರು ಭಾನುವಾರ ಬೆಳಗ್ಗೆ ಬೀರಭೂಮ್ ಜಿಲ್ಲೆಯ ರಾಮಪುರಹತ್‌ನಲ್ಲಿರುವ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಚೇರಿಯಲ್ಲೇ ಅವರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಈ ಕಚೇರಿ ಬ್ಯಾನರ್ಜಿ ಅವರ ನಿವಾಸದ … Continued

ವಿಡಿಯೋ | ಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!

ಮೇಕೆ ಹಿಡಿಯಲು ಸುಮಾರು 15 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಮಾಂಸದ ಅಂಗಡಿಯೊಳಗೆ ನುಗ್ಗಿದಾಗ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು, ಅದನ್ನು ಮೈಗೆ ಸುತ್ತಿಕೊಂಡು ಅದರೊಂದಿಗೆ ಆಟವಾಡಿದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 15 ಅಡಿ ಉದ್ದದ ಬೃಹತ್ ಹೆಬ್ಬಾವು ಅಂಗಡಿ ನುಗ್ಗಿದಾಗ … Continued

ವಿಡಿಯೋ | ಚಪ್ಪಲಿಗಳ ರಾಶಿ ಮಧ್ಯೆ ಕಳೆದುಹೋದ ಚಪ್ಪಲಿ ; ಆದ್ರೆ ವ್ಯಕ್ತಿಗೆ ಅದನ್ನು ಹುಡುಕಿಕೊಟ್ಟಿತು ಚಾಟ್‌ಜಿಪಿಟಿ….!

ನವದೆಹಲಿ: ಸಾಮಾನ್ಯವಾಗಿ ದೇವಸ್ಥಾನದ ಹೊರಗೆ ಚಪ್ಪಲಿ ಕಳೆದುಹೋದರೆ, ಜನರು ಸಾಲುಸಾಲಾಗಿ ಇಟ್ಟಿರುವ ನೂರಾರು ಚಪ್ಪಲಿಗಳ ನಡುವೆ ತಮ್ಮ ಚಪ್ಪಲಿ ಹುಡುಕುತ್ತಾ ಪರದಾಡುತ್ತಾರೆ. ಆದರೆ ಗೋವಾ ಮೂಲದ ವ್ಯಕ್ತಿಯೊಬ್ಬರು ಇದಕ್ಕೆ ವಿಭಿನ್ನ ಹಾಗೂ ತಂತ್ರಜ್ಞಾನಮಯ ಪರಿಹಾರ ಕಂಡುಕೊಂಡಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳ ದೇವಸ್ಥಾನದ ಹೊರಗೆ ತಮ್ಮ ಚಪ್ಪಲಿಗಳನ್ನು ಕಳೆದುಕೊಂಡ ಅವರು, ಅವುಗಳನ್ನು ಹುಡುಕಲು ನೇರವಾಗಿ ಚಾಟ್‌ಜಿಪಿಟಿ (ChatGPT) … Continued

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ “ದಿಮಾಗಿ” ನಕ್ಸಲರ ಬಗ್ಗೆ ಎಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, “ದಿಮಾಗಿ ನಕ್ಸಲ್” ಬಗ್ಗೆ ಎಚ್ಚರಿಸಿದ್ದಾರೆ. ದೇಶದ ಅರಣ್ಯ ಪ್ರದೇಶಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಹೋರಾಡುತ್ತಿದ್ದ ನಕ್ಸಲರನ್ನು ಬಹುತೇಕ ಮಟ್ಟಹಾಕಲಾಗಿದೆ. ಆದರೆ ಅಧಿಕಾರದ ಕಾರಿಡಾರ್‌ಗಳಲ್ಲಿ ನೆಲೆಸಿರುವ ‘ದಿಮಾಗಿ ನಕ್ಸಲ್‌’ಗಳು (ಬೌದ್ಧಿಕ ನಕ್ಸಲರು) ಇನ್ನೂ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಅವರನ್ನು ಗುರುತಿಸಿ, ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ದೆಹಲಿಯ … Continued