ಇದು ಅಪರೂಪದಲ್ಲಿ ಅಪರೂಪದ ಘಟನೆ..:ಮುಂಬೈನಲ್ಲಿ ಚರಂಡಿಯಲ್ಲಿದ್ದ ನವಜಾತ ಶಿಶುವನ್ನು ರಕ್ಷಿಸಿದ ಬೆಕ್ಕುಗಳು..!

ಮುಂಬೈ: ಒಂದು ಅಪರೂಪದ ವಿದ್ಯಮಾನದಲ್ಲಿ ಮುಂಬೈನಲ್ಲಿ ಬೆಕ್ಕುಗಳು ನವಜಾತ ಶಿಶುವನ್ನು ಉಳಿಸಿದ ವಿಶಿಷ್ಟ ಘಟನೆ ವರದಿಯಾಗಿದೆ. ಮುಂಬೈನ ಪಂತ ನಗರದಲ್ಲಿ ನೀರು ಹರಿಯುವ ಚರಂಡಿಯಲ್ಲಿತ್ತು. ಬೆಕ್ಕುಗಳು ಮೊದಲು ಅವನನ್ನು ನೋಡಿದವು ಮತ್ತು ಈ ಬೆಕ್ಕುಗಳು ವಿಶಿಷ್ಟ ಧ್ವನಿಗಳನ್ನು ಹೊರಡಿಸುವ ಮೂಲಕ ಸುತ್ತಲಿನ ಜನರನ್ನು ಎಚ್ಚರಿಸಿದವು. ಈ ಬೆಕ್ಕುಗಳ ವಿಚಿತ್ರ ಧ್ವನಿ ಕೇಳಿದ ಜನರು ಕುತೂಹಲದಿಂದ ಅಲ್ಲಿಗೆ … Continued

ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕನ ಬಂಧನ

ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ … Continued

ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು ಭಿಕ್ಷೆ: ಮಹಾತ್ಮಾ ಗಾಂಧಿ ಲೇವಡಿ ಮಾಡಿದ ಕಂಗನಾ

ಮಂಗಳವಾರ ನಟಿ ಕಂಗನಾ ರಣಾವತ್ ಅವರು ಮತ್ತೊಮ್ಮೆ ವಿವಾದಿತ ಹೇಳಿಕೆ ನೀಡಿದ್ದಾರೆ. ಈಗ ಅವರು ರಾಷ್ಟ್ರಪತಿ ಮಹಾತ್ಮಾ ಗಾಂಧಿ ಅವರನ್ನು ಗುರಇಯಾಗಿಸಿಕೊಂಡಿದ್ದಾರೆ. ಸುಭಾಷ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಮಹಾತ್ಮ ಗಾಂಧಿ ಅವರಿಂದ ಯಾವುದೇ ಬೆಂಬಲ ಸಿಗಲಿಲ್ಲ ಎಂದು ಹೇಳಿದ್ದಾರೆ ಮತ್ತು ಅಲ್ಲದೆ, ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು … Continued

ಈಗ ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆ ನಡೆಸಬಹುದು; ಕೇಂದ್ರ ಸರ್ಕಾರದಿಂದ ಅನುಮತಿ

ನವದೆಹಲಿ: ಹತ್ಯೆ, ಆತ್ಮಹತ್ಯೆ, ಅತ್ಯಾಚಾರ ಮತ್ತು ಕೊಳೆತ ದೇಹಗಳನ್ನು ಹೊರತುಪಡಿಸಿ ಸಾಕಷ್ಟು ಮೂಲಸೌಕರ್ಯ ಹೊಂದಿರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ನಂತರ ಮರಣೋತ್ತರ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ. ಈ ಬೆಳವಣಿಗೆಯನ್ನು ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ, “ಬ್ರಿಟಿಷರು ಜಾರಿಗೆ ತಂದ ವ್ಯವಸ್ಥೆಗೆ ಅಂತ್ಯ! ಮರಣೋತ್ತರ ಪರೀಕ್ಷೆಯನ್ನು ರಾತ್ರಿಯಿಡೀ … Continued

ಲಖೀಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್‌

ಲಕ್ನೋ: ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮುಖೇಶ್ ಮಿಶ್ರಾ ಹಾಗೂ ಮತ್ತಿಬ್ಬರ ಜಾಮೀನು ಅರ್ಜಿ ವಜಾ ಮಾಡಿದ್ದಾರೆ. ಪ್ರಕರಣ ತೀವ್ರ ಸ್ವರೂಪದಾಗಿದ್ದು, ಗಂಭೀರವಾಗಿದೆ. ಅಲ್ಲದೇ ತನಿಖೆ ಇನ್ನೂ ಚಾಲ್ತಿಯಲ್ಲಿದ್ದು … Continued

ಹೈದರಾಬಾದ್‌: ಟಾಲಿವುಡ್ ನಟಿ ಶಾಲು ಚೌರಾಸಿಯಾ ಮೇಲೆ ಹಲ್ಲೆ, ದರೋಡೆ

ಹೈದರಾಬಾದ್: ಟೋನಿ ಬಂಜಾರಾ ಹಿಲ್ಸ್‌ನ ಕೆಬಿಆರ್ ಪಾರ್ಕ್ ಬಳಿ ಭಾನುವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ದಾಳಿಯಿಂದ ಟಾಲಿವುಡ್ ನಟಿ ಶಾಲು ಚೌರಾಸಿಯಾ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ 8.30ರ ಸುಮಾರಿಗೆ ಅಡ್ಡಾಡುತ್ತಿದ್ದಾಗ ಯುವ ನಟಿ ಮೇಲೆ ಹಲ್ಲೆ ನಡೆಸಿ ಅವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವ್ಯಕ್ತಿ ಮೊದಲು ತನ್ನ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಕೇಳಿದ್ದಾನೆ … Continued

ರಸ್ತೆ ಅಪಘಾತದಲ್ಲಿ ಬಾಲಿವುಡ್‌ ನಟ ಸುಶಾಂತ್​ ಸಿಂಗ್‌ ರಜಪೂತ್‌ 6 ಸಂಬಂಧಿಗಳ ಸಾವು ; ನಾಲ್ವರ ಸ್ಥಿತಿ ಗಂಭೀರ

ನವದೆಹಲಿ : ಬಿಹಾರದ ಲಖಿಸರಾಯ್ ಎಂಬಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ಸಂಬಂಧಿಗಳು ಸೇರಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ. ವರದಿಯ ಪ್ರಕಾರ, ಸಿಕಂದರಾ-ಶೇಖ್‌ಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333 ರಲ್ಲಿ ಅವರು ಪ್ರಯಾಣಿಸುತ್ತಿದ್ದ ಎಸ್‌ಯುವಿ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್‌ಗೆ … Continued

ಆಘಾತಕಾರಿ ಘಟನೆ…10 ತಿಂಗಳ ಹಸುಳೆ ಮೇಲೆ ಮನೆಕೆಲಸದವನಿಂದ ಅತ್ಯಾಚಾರ..!

ಲಕ್ನೋ: ಆಘಾತಕಾರಿ ಘಟನೆಯೊಂದರಲ್ಲಿ, ಮನೆಯ ಕೆಲಸದನಿಂದ ಹತ್ತು ತಿಂಗಳ ಮಗುವಿನ ಮೇಲೆ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಮಗುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (ಕೆಜಿಎಂಯು) ಪೀಡಿಯಾಟ್ರಿಕ್ ಸರ್ಜರಿ ವಿಭಾಗಕ್ಕೆ ದಾಖಲಿಸಲಾಗಿದೆ. ಮಗುವಿನ ಖಾಸಗಿ ಅಂಂಆಂಗಗಳಿಗೆ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಭಾನುವಾರ ರಾತ್ರಿ ಸಾದತ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. … Continued

ಕಾಂಗ್ರೆಸ್‌ ಕಾರ್ಯಕರ್ತರಿಂದ ನಾಥೂರಾಮ್ ಗೋಡ್ಸೆ ಪ್ರತಿಮೆ ಧ್ವಂಸ !

ಅಹ್ಮದಾಬಾದ್‌: ಗುಜರಾಥಿನ ಜಾಮ್‌ ನಗರದಲ್ಲಿ ಸ್ಥಾಪಿಸಿದ್ದ ಮಹಾತ್ಮಾ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಪ್ರತಿಮೆಯನ್ನು ಗುಜರಾತಿನ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ ಧ್ವಂಸಗೊಳಿಸಿದ್ದಾರೆ. ಇಂದು ಬೆಳಗ್ಗೆ ಜಾಮ್ ನಗರದ ಕಾಂಗ್ರೆಸ್ ಅಧ್ಯಕ್ಷ ದಿಗುಭಾ ಜಡೇಜಾ ಹಾಗೂ ಅವರ ಸಹಚರರು ಸೇರಿ ಧ್ವಂಸಗೊಳಿಸಿದ್ದಾರೆ. ಅಲ್ಲದೆ ಧ್ವಂಸಗೊಳಿಸುತ್ತಿರುವ ವೇಳೆಯಲ್ಲಿ ಕಾರ್ಯಕರ್ತರೆಲ್ಲರು ಅದರ ಮೇಲೆ ಕೇಸರಿ ಬಣ್ಣದ ಬಟ್ಟೆ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಿಯಲ್ ಎಸ್ಟೇಟ್ ಗ್ರೂಪ್ ಐಆರ್​​ಇಒ ವ್ಯವಸ್ಥಾಪಕ ನಿರ್ದೇಶಕ ಲಲಿತ್ ಗೋಯಲ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್​​ಇಒ(Ireo) ಗ್ರೂಪ್‌ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಲಲಿತ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ. ನಾಲ್ಕು ದಿನಗಳ ವಿಚಾರಣೆಯ ನಂತರ ಗೋಯಲ್ ಅವರನ್ನು ಬಂಧಿಸಲಾಯಿತು. 2010 ರಿಂದ ಕಂಪನಿಯ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (FEMA) ಉಲ್ಲಂಘನೆ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ. … Continued