ಬೇಸಿಗೆ ರಜೆಯ ನಂತರ 370 ನೇ ವಿಧಿಯ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸಬಹುದು

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿ ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸವಲತ್ತು ಹಿಂತೆಗೆದುಕೊಂಡ ನಿರ್ಧಾರ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು … Continued

ತರಗತಿಯಲ್ಲೇ ಶರ್ಟ್‌ ಬಿಚ್ಚಿ ಶಿಕ್ಷಕರಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ವಿದ್ಯಾರ್ಥಿಗಳು…ವೀಡಿಯೊ ವೈರಲ್‌ ಆದ ನಂತರ ಮೂವರ ಅಮಾನತು…ವೀಕ್ಷಿಸಿ

ತಿರುಪತ್ತೂರು: ಶಾಲಾ ಶಿಕ್ಷಕರಿಗೆ ತರಗತಿಯಲ್ಲಿ ವಿದ್ಯಾರ್ಥಿಗಳು ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಅಂಬೂರು ಸಮೀಪದ ಮಾದನೂರು ಸರ್ಕಾರಿ ಶಾಲೆಯ 18 ವರ್ಷದ ವಿದ್ಯಾರ್ಥಿಯೊಬ್ಬ ಪ್ರಾಣಿಶಾಸ್ತ್ರ ಶಿಕ್ಷಕ ಸಂಜಯ್ ಗಾಂಧಿಗೆ ಬೆದರಿಕೆ ಹಾಕಿದ್ದಲ್ಲದೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಈ … Continued

ಸರ್ಕಾರ ಇನ್ನೂ ಎಚ್ಚರಿಕೆ ಗಂಟೆ ಬಾರಿಸದಿದ್ರೂ ಭಾರತದಲ್ಲಿ ಕೋವಿಡ್ ಪ್ರಕರಣಗಳು ಒಂದು ವಾರದಲ್ಲಿ ಎರಡು ಪಟ್ಟು ಹೆಚ್ಚಳ..!

ನವದೆಹಲಿ: ಮತ್ತೊಂದು ಕೋವಿಡ್ ಅಲೆಯ ಬಗ್ಗೆ ಆರೋಗ್ಯ ತಜ್ಞರು ಇನ್ನೂ ಎಚ್ಚರಿಕೆ ನೀಡದಿದ್ದರೂ, ದೇಶಾದ್ಯಂತ ಪ್ರಕರಣಗಳು ಹೆಚ್ಚಳಕಾಣುತ್ತಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ ವಾರದಲ್ಲಿ ಭಾರತದಲ್ಲಿ ಹೊಸ ರೋಗಿಗಳ ಸಂಖ್ಯೆ ಸುಮಾರು ದ್ವಿಗುಣಗೊಂಡಿದೆ. ಏಪ್ರಿಲ್ 24 ರ ಭಾನುವಾರದಂದು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,873 ಎಂದು ವರದಿಯಾಗಿದೆ. ಸೋಮವಾರ, ಏಪ್ರಿಲ್ 25 ರಂದು, ಭಾರತವು … Continued

ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಇಮ್ಯಾನುಯೆಲ್ ಮ್ಯಾಕ್ರನ್ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ಸೋಮವಾರ ಬೆಳಿಗ್ಗೆ ಅಭಿನಂದಿಸಿದ್ದಾರೆ. ತಮ್ಮ ಟ್ವೀಟ್‌ನಲ್ಲಿ, “ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರಾನ್ ಅವರಿಗೆ ಅಭಿನಂದನೆಗಳು. ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಗಾಢಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಟ್ವಟ್ಟರಿನಲ್ಲಿ ಬರೆದಿದ್ದಾರೆ. … Continued

ಪಂಜಾಬ್‌ನಲ್ಲಿ ಅಫ್ಘಾನಿಸ್ತಾನದಿಂದ ಬಂದ್‌ ಟ್ರಕ್‌ನಲ್ಲಿ 700 ಕೋಟಿ ರೂ.ಗಳ ಮೌಲ್ಯದ ಹೆರಾಯಿನ್ ಪತ್ತೆ

ಅಮೃತಸರ: ಕಸ್ಟಮ್ ಅಧಿಕಾರಿಗಳು ಭಾನುವಾರ ಅಮೃತಸರದಲ್ಲಿ ಪಾಕಿಸ್ತಾನ ಚೆಕ್ ಪೋಸ್ಟ್ ಮೂಲಕ ಅಫ್ಘಾನಿಸ್ತಾನದಿಂದ ಬರುತ್ತಿದ್ದ ಟ್ರಕ್‌ನಿಂದ 700 ಕೋಟಿ ರೂಪಾಯಿ ಮೌಲ್ಯದ 102 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿ ಮೂಲದ ಆಮದುದಾರರಿಂದ ಅಫ್ಘಾನಿಸ್ತಾನದಿಂದ ಆಮದು ಮಾಡಿಕೊಳ್ಳಲಾದ ಲೈಕೋರೈಸ್ ರೂಟ್ಸ್ (ಮುಲೇಥಿ) ರವಾನೆಯಲ್ಲಿ ಔಷಧಗಳನ್ನು ಮರೆಮಾಡಿ ತರಲಾಗುತ್ತಿತ್ತು. ಜೂನ್ 2019 ರ ನಂತರ ಅಮೃತಸರ ಕಸ್ಟಮ್ಸ್ … Continued

ಕಾಶ್ಮೀರದ ಪುಲ್ವಾಮಾದಲ್ಲಿ ಎನ್‌ಕೌಂಟರ್‌ನಲ್ಲಿ ಲಷ್ಕರ್ ಉಪ ಕಮಾಂಡರ್ ಸೇರಿದಂತೆ 3 ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉಪ ಕಮಾಂಡರ್ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿನ ಉಪ ಕಮಾಂಡರ್ ಅನ್ನು ಆರಿಫ್ ಹಜಾರ್ ಅಲಿಯಾಸ್ ರೆಹಾನ್ ಎಂದು ಗುರುತಿಸಲಾಗಿದ್ದು, ಹತ್ಯೆಗೀಡಾದ ಇತರ ಇಬ್ಬರು ಉಗ್ರರ … Continued

ಎಂಎಫ್ ಹುಸೇನ್ ಪೇಂಟಿಂಗ್ ಅನ್ನು ರಾಣಾ ಕಪೂರ್‌ಗೆ ಮಾರಾಟ ಮಾಡಿರುವುದನ್ನು ಖಚಿತಪಡಿಸಿ: ಪ್ರಿಯಾಂಕಾ ಗಾಂಧಿ ಬರೆದ ಹಳೆಯ ಪತ್ರ ಹಂಚಿಕೊಂಡ ಬಿಜೆಪಿ ನಾಯಕ

ನವದೆಹಲಿ: ಬಿಜೆಪಿ ರಾಷ್ಟ್ರೀಯ ವಕ್ತಾರ ಆರ್‌.ಪಿ. ಸಿಂಗ್ ಭಾನುವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬರೆದಿರುವ ಪತ್ರವನ್ನು ಹಂಚಿಕೊಂಡಿದ್ದು, ರಾಣಾ ಕಪೂರ್ ಅವರು ಎಂಎಫ್ ಹುಸೇನ್ ಪೇಂಟಿಂಗ್ ಅನ್ನು 2 ಕೋಟಿ ರೂ.ಗೆ ಖರೀದಿಸಿದ್ದಾರೆಯೇ ಎಂಬುದನ್ನು ಖಚಿತಪಡಿಸುತ್ತದೆ. ಟ್ವಿಟರ್‌ನಲ್ಲಿ, ಸಿಂಗ್ ಅವರು ಪ್ರಿಯಾಂಕಾ ಗಾಂಧಿಯವರ ಸಹಿ ಇರುವ ಪತ್ರವನ್ನು ಹಂಚಿಕೊಂಡಿದ್ದಾರೆ, ಎಂಎಫ್ ಹುಸೇನ್ ಅವರು ಚಿತ್ರಿಸಿದ … Continued

ಪದೇ ಪದೇ ಬೆಂಕಿ ಅವಘಡ: 1,441 ಇ-ಸ್ಕೂಟರ್‌ಗಳನ್ನು ಹಿಂಪಡೆದ ಓಲಾ

ನವದೆಹಲಿ: ಇ-ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆಗಳ ಹಿನ್ನೆಲೆಯಲ್ಲಿ ಕಂಪನಿಯು ತನ್ನ 1,441 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಹಿಂಪಡೆಯುತ್ತಿದೆ ಎಂದು ಓಲಾ ಎಲೆಕ್ಟ್ರಿಕ್ ಭಾನುವಾರ ಪ್ರಕಟಿಸಿದೆ. ಈ ಸ್ಕೂಟರ್‌ಗಳನ್ನು ಇಂಜಿನಿಯರ್‌ಗಳು ಪರಿಶೀಲಿಸುತ್ತಾರೆ ಎಂದು ಅದು ಹೇಳಿದೆ. ಮಾರ್ಚ್ 26 ರಂದು ಪುಣೆಯಲ್ಲಿ ಸಂಭವಿಸಿದ ಬೆಂಕಿ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಓಲಾ ಹೇಳಿಕೆಯಲ್ಲಿ ತಿಳಿಸಿದೆ. ಓಲಾದ … Continued

ಆತ್ಮರಕ್ಷಣೆಗಾಗಿ ಬಾಟಲಿಗಳು, ಬಾಣಗಳನ್ನು ಸಂಗ್ರಹಿಸಿಟ್ಟುಕೊಳ್ಳಿ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

ಲಕ್ನೋ: ಗುಂಪು ದಾಳಿಯ ಸಂದರ್ಭದಲ್ಲಿ ಜನರು ತಮ್ಮ ಮನೆಗಳಲ್ಲಿ ಬಾಟಲಿಗಳು ಮತ್ತು ಬಾಣಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಕೇಳಿಕೊಂಡಿದ್ದಾರೆ. ಯಾಕೆಂದರೆ ಪೊಲೀಸರು ಅವರನ್ನು ರಕ್ಷಿಸುವುದಿಲ್ಲ ಮತ್ತು ಆದ್ದರಿಂದ ಅವರು ಸಿದ್ಧರಾಗಿರಬೇಕು ಎಂದು ಹೇಳಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಂದ ಆಗಾಗ್ಗೆ ಸುದ್ದಿಯಲ್ಲಿರುವ ಉನ್ನಾವೊ ಸಂಸದ ಫೇಸ್‌ಬುಕ್‌ನಲ್ಲಿ, ಈ ಜನಸಮೂಹವು ನಿಮ್ಮ ಬೀದಿ, … Continued

ಆಂಧ್ರದಲ್ಲಿ ಮತ್ತೊಂದು ಇವಿ ಬೈಕ್ ಬ್ಯಾಟರಿ ಸ್ಫೋಟ: ವ್ಯಕ್ತಿ ಸಾವು, ಪತ್ನಿಗೆ ಗಾಯ

ಅಮರಾವತಿ: ಮೂರು ದಿನಗಳ ಹಿಂದೆ ನೆರೆಯ ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ವಿದ್ಯುತ್ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿ ಸಾವಿಗೀಡಾದ ಘಟನೆ ವರದಿಯಾಗಿದೆ. ಮಲಗುವ ಕೋಣೆಯಲ್ಲಿ ಹೊಸ ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ … Continued