ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ

ಲಖಿಂಪುರ್ ಖೇರಿ: ಚಂಡಮಾರುತದ ಮಧ್ಯಭಾಗದಲ್ಲಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಕ್ಟೋಬರ್ 3 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ಬುಧವಾರ ಜಾಮೀನು ನಿರಾಕರಿಸಿದೆ. ಆಶಿಶ್ ಮಿಶ್ರಾ ಮತ್ತು ಆತನ ಸಹಚರ ಆಶಿಶ್ ಪಾಂಡೆ ಇಂದು ತಮ್ಮ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಮುಖ್ಯ … Continued

ಅಪ್ರಾಪ್ತರು, ಅತ್ಯಾಚಾರದ ಗರ್ಭಧಾರಣೆಯಲ್ಲಿ 24 ವಾರಗಳ ವರೆಗೆ ಗರ್ಭಪಾತಕ್ಕೆ ಅವಕಾಶ: ಹೊಸ ನಿಯಮಕ್ಕೆ ಕೇಂದ್ರದಿಂದ ಅಧಿಸೂಚನೆ

ನವದೆಹಲಿ: ದುರ್ಬಲ ಮಹಿಳೆಯರ ಕೆಲವು ವರ್ಗಗಳಿಗೆ ಗರ್ಭಪಾತಕ್ಕೆ ಗರಿಷ್ಠ ಸಮಯಾವಕಾಶದ ಮಿತಿಯನ್ನು ಬುಧವಾರ ಪರಿಷ್ಕರಿಸಿರುವ ಕೇಂದ್ರ ಸರಕಾರವು ಅದನ್ನು 20 ವಾರಗಳಿಂದ 24 ವಾರಗಳಿಗೆ ಹೆಚ್ಚಿಸಿದೆ. ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ನಿಯಮಗಳು 2021ರಡಿ ಹೊಸ ನಿಯಮಗಳ ಬಗ್ಗೆ ಕೇಂದ್ರವು ಅಧಿಸೂಚನೆ ಹೊರಡಿಸಿದೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ನಿಷಿದ್ಧ ಲೈಂಗಿಕ ಸಂಪರ್ಕಕ್ಕೆ ಒಳಗಾದ ಮಹಿಳೆಯರು ಮತ್ತು … Continued

ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಇಲ್ಲ: ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ದೇಶದಲ್ಲಿ 20 ಲಕ್ಷ ಟನ್ ಕಲ್ಲಿದ್ದಲಿಗೆ ಬೇಡಿಕೆಯಿದೆ. ಇಂಧನ ಇಲಾಖೆಯ ಬೇಡಿಕೆಯಂತೆ ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ಮೊದಲು 19 ಲಕ್ಷ ಟನ್‌ ಕಲ್ಲಿದ್ದಲಿಗೆ … Continued

ಭಾರತದ ಭೂ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ: ಪುಣೆ-ಮುಂಬೈ ಮಾರ್ಗದಲ್ಲಿ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ

ಹೈದರಾಬಾದ್: ದೇಶದ ಮುಂಚೂಣಿ ಇಲೆಕ್ಟ್ರಿಕ್‌ ಬಸ್​ ಕಾರ್ಯಾಚರಣೆ ಸಂಸ್ಥೆ ಇವಿ ಟ್ರಾನ್ಸ್​ ಪ್ರೈವೇಟ್ ಲಿಮಿಟೆಡ್​ ‘ಪುರಿಬಸ್’ (PuriBus) ಬ್ರಾಂಡ್​ ಅಡಿಯಲ್ಲಿ ಪುಣೆ-ಮುಂಬೈ ಮಾರ್ಗದಲ್ಲಿ ಬುಧವಾರ ಇಲೆಕ್ಟ್ರಿಕ್‌ ಬಸ್​ ಸೇವೆ ಆರಂಭಿಸಿದೆ. ಮೇಘಾ ಎಂಜಿನಿಯರಿಂಗ್ ಲಿಮಿಟೆಡ್ (MEIL) ಗ್ರೂಪ್​ನ ಭಾಗವಾಗಿರುವ ಈ ಕಂಪನಿಯು ಇದೇ ಮೊದಲ ಬಾರಿಗೆ ದೇಶದಲ್ಲಿ ಎರಡು ಮುಖ್ಯ ನಗರಗಳ ನಡುವೆ ಇಲೆಕ್ಟ್ರಿಕ್‌ ಬಸ್​ … Continued

ವರುಣ್ ಗಾಂಧಿ ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸ್‌ ನಾಯಕನಿಗೆ ಶೋಕಾಸ್‌ ನೋಟಿಸ್‌…!

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಸ್ಥಳೀಯ ಕಾಂಗ್ರೆಸ್ ನಾಯಕ ಇರ್ಷಾದ್ ಉಲ್ಲಾ (Irshad Ullah), ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi )ಮತ್ತು ಬಿಜೆಪಿ ಸಂಸದ ವರುಣ್ ಗಾಂಧಿ(BJP MP Varun Gandhi) ಅವರ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದು ಈಗ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು ಅವರಿಗೆ ನೋಟಿಸ್ ನೀಡಲಾಗಿದೆ. ಪಿಲಿಭಿತ್‌ ನಿಂದ ಲೋಕಸಭಾ … Continued

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್‌ ಅವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿನ್ನೆಯಿಂದ (ಮಂಗಳವಾರದಿಂದ) ಜ್ವರ ಹಾಗೂ ಅಶಕ್ತತೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ. ಈ ವರ್ಷದ ಆರಂಭದಲ್ಲಿ, 89 ವರ್ಷದ ಮಾಜಿ ಪ್ರಧಾನಿ … Continued

ಕಾಶ್ಮೀರ: ಪುಲ್ವಾಮ ಎನ್ಕೌಂಟರ್, ಜೈಶ್ ಉನ್ನತ ಕಮಾಂಡರ್ ಶಾಮ್ ಸೋಫಿ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರನನ್ನು ಸೇನಾಪಡೆಗಳು ಹೊಡೆದುರುಳಿಸಿವೆ. ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಜೈಶ್ ಇ ಮೊಹಮ್ಮದ್ ಭಯೋತ್ಪಾದನೆ ಸಂಘಟನೆಯ ಟಾಪ್ ಕಮಾಂಡರ್ ಶಾಮ್ ಸೋಫಿ ಎಂಬ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದೆ ಎಂದು … Continued

ಇನ್ಫೋಸಿಸ್​ಗೆ ಎರಡನೇ ತ್ರೈಮಾಸಿಕದಲ್ಲಿ 5421 ಕೋಟಿ ರೂ. ಲಾಭ; 15 ರೂ.ಗಳ ಡಿವಿಡೆಂಡ್ ಘೋಷಣೆ

ಬೆಂಗಳೂರು: ದೇಶದ ಎರಡನೇ ಅತಿದೊಡ್ಡ ಐ.ಟಿ. (ಮಾಹಿತಿ ತಂತ್ರಜ್ಞಾನ) ಸೇವಾ ಕಂಪೆನಿಯಾದ ಇನ್ಫೋಸಿಸ್ 2021ರ ಜುಲೈನಿಂದ ಸೆಪ್ಟೆಂಬರ್​ ತನಕದ ತ್ರೈಮಾಸಿಕ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, 5,421 ಕೋಟಿ ರೂ.ಗಳ ಕ್ರೋಡೀಕೃತ ಲಾಭವನ್ನು ವರದಿ ಮಾಡಿದೆ. ಜೂನ್ ತ್ರೈಮಾಸಿಕದಲ್ಲಿ ಬಂದಿದ್ದ 5,195 ಕೋಟಿ ರೂ.ಗಳ ನಿವ್ವಳ ಲಾಭಕ್ಕೆ ಹೋಲಿಸಿದರೆ ಶೇ 4.4ರಷ್ಟು ಹೆಚ್ಚಳವಾಗಿದೆ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ … Continued

ಆರ್ಯನ್​ ಖಾನ್​ಗೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ರೇವ್ಸ್​ ಪಾರ್ಟಿ ಮಾಡಿ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿ ಕುರಿತು ಇಂದು (ಬುಧವಾರ) ವಿಚಾರಣೆ ನಡೆಸಿದ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯಬೇಕಿದೆ. ಅಕ್ಟೋಬರ್ 3ರಿಂದ ಆರ್ಯನ್​ ವಿಚಾರಣೆ ನಡೆಸಿಲ್ಲಮ್ಯಾಜಿಸ್ಟ್ರೇಟ್ ಕೋರ್ಟ್​​​ನಲ್ಲಿ ಜಾಮೀನು ಅರ್ಜಿ … Continued

ನವರಾತ್ರಿಯ ಸಮಯದಲ್ಲಿ ಒಡಿಶಾದಲ್ಲಿ 2 ತಲೆ, 3 ಕಣ್ಣುಗಳುಳ್ಳ ಕರುವಿನ ಜನನ, ದುರ್ಗಾ ಅವತಾರ ಎಂದು ಪೂಜೆ, ವೀಕ್ಷಿಸಿ

ನಬರಂಗಪುರ್ (ಒಡಿಶಾ): ನವರಾತ್ರಿಯ ಹಬ್ಬದಲ್ಲಿ ಒರಿಸ್ಸಾದ ನಬರಂಗಪುರ್ ಜಿಲ್ಲೆಯಲ್ಲಿ ಎರಡು ತಲೆ ಮತ್ತು ಮೂರು ಕಣ್ಣುಗಳೊಂದಿಗೆ ಆಕಳ ಕರು ಜನಿಸಿದೆ. ಈಗ ಆ ಕರುವನ್ನು ದುರ್ಗಾದೇವಿಯ ಅವತಾರವೆಂದು ಪೂಜಿಸಲಾಗುತ್ತದೆ. ನಬರಂಪುರ ಜಿಲ್ಲೆಯ ಕುಮುಲಿ ಪಂಚಾಯತ್‌ನ ಬಿಜಾಪುರ ಗ್ರಾಮದ ಧನಿರಾಮ್ ಎಂಬ ರೈತನ ಮನೆಯ ಹಸು ಎರಡು ತಲೆ ಮತ್ತು ಮೂರು ಕಣ್ಣುಗಗಳುಳ್ಳ ಕರು ಜನಿಸಿದೆ. ಧನಿರಾಮ್ … Continued