ಗ್ರಾಹಕರಿಗೆ ಶಾಕ್… ಇಂದು ಮತ್ತೆ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ.. ಐದು ದಿನದಲ್ಲಿ ಲೀಟರಿಗೆ 3.10 ರೂ. ಹೆಚ್ಚಳ

ನವದೆಹಲಿ: ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು (ಮಾ.26) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಪ್ರತಿ ಲೀಟರಿಗೆ ಮತ್ತೆ 80 ಪೈಸೆ ಏರಿಕೆಯಾಗಿದೆ. ಐದು ದಿನಗಳಲ್ಲಿ ಮಾ. 24 ಒಂದು ದಿನ ಮಾತ್ರ ಇಂಧನ ದರದಲ್ಲಿ ಬದಲಾವಣೆ ಆಗಿರಲಿಲ್ಲ. ಮಾರ್ಚ್​ 22 ಮತ್ತು ಮಾ.23ರಂದು ಬೆಲೆ ಏರಿಕೆಯಾಗಿತ್ತು. ಒಂದು … Continued

ಸಾರ್ವಜನಿಕ ಸ್ಥಳವನ್ನು ದೇವರು ಒತ್ತುವರಿ ಮಾಡಿಕೊಂಡರೂ ಅದನ್ನು ತೆರವು ಮಾಡಲು ಕೋರ್ಟ್‌ ನಿರ್ದೇಶಿಸಲಿದೆ: ಮದ್ರಾಸ್‌ ಹೈಕೋರ್ಟ್‌

ಚೆನ್ನೈ: ಸಾರ್ವಜನಿಕ ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಶುಕ್ರವಾರ ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಮದ್ರಾಸ್‌ ಹೈಕೋರ್ಟ್‌, ಸಾರ್ವಜನಿಕ ಹಿತಾಸಕ್ತಿ ಮತ್ತು ಕಾನೂನನ್ನು ಎತ್ತಿ ಹಿಡಿಯಲು ಸಾರ್ವಜನಿಕ ಸ್ಥಳವನ್ನು ದೇವರು ಒತ್ತುವರಿ ಮಾಡಿದರೂ ಅದನ್ನು ತೆರವು ಮಾಡಲು ನ್ಯಾಯಾಲಯ ನಿರ್ದೇಶಿಸಲಿದೆ ಎಂದು ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಸಾರ್ವಜನಿಕ ಸ್ಥಳದಲ್ಲಿ ದೇವಸ್ಥಾನವೊಂದರ ನಿರ್ಮಾಣದಿಂದ ಸಾರ್ವಜನಿಕರ … Continued

ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಪಿ ಮಸೀದಿ ವಿವಾದ: ಮಾರ್ಚ್ 29 ರಿಂದ ನಿಯಮಿತವಾಗಿ ಆಲಿಸಲಿರುವ ಅಲಹಾಬಾದ್ ಹೈಕೋರ್ಟ್

ಪ್ರಯಾಗರಾಜ: ವಾರಣಾಸಿಯ ಕಾಶಿ ವಿಶ್ವನಾಥ ದೇಗುಲ-ಜ್ಞಾನವಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾರ್ಚ್ 29 ರಿಂದ ನಿಯಮಿತವಾಗಿ ವಿಚಾರಣೆ ನಡೆಸುವುದಾಗಿ ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ. ವಾರಣಾಸಿಯ ಅಂಜುಮನ್ ಇಂತಾಝಾಮಿಯಾ ಮಸೀದಿಯು ಕಳೆದ ವರ್ಷ ವಿಚಾರಣೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ ಅವರ ಪೀಠ ಈ ಆದೇಶ ನೀಡಿದೆ. … Continued

ಸಾಬರಮತಿ ಆಶ್ರಮದ ಪುನಾರಭಿವೃದ್ಧಿ ವಿರೋಧಿಸಿ ಸುಪ್ರೀಂಕೋರ್ಟ್‌ ಕದತಟ್ಟಿದ ಮಹಾತ್ಮ ಗಾಂಧಿ ಮರಿಮೊಮ್ಮಗ

ನವದೆಹಲಿ: ಸಾಬರಮತಿ ಆಶ್ರಮದ ಪ್ರಸ್ತಾವಿತ ಪುನರಾಭಿವೃದ್ಧಿ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾತ್ಮಾ ಗಾಂಧಿ ಅವರ ಮರಿ ಮೊಮ್ಮಗ ತುಷಾರ ಗಾಂಧಿ ಅವರು ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. ತುರ್ತಾಗಿ ಪ್ರಕರಣ ಆಲಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರನ್ನು ಕೋರಿದರು. “ವರ್ಚುವಲ್‌ … Continued

ಎಷ್ಟೇ ಸಲ ಆಯ್ಕೆಯಾದರೂ ಪಂಜಾಬ್ ಶಾಸಕರಿಗೆ ಕೇವಲ ಒಂದು ಪಿಂಚಣಿ: ಸಿಎಂ ಮಾನ್‌ ಘೋಷಣೆ

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎಲ್ಲಾ ಶಾಸಕರಿಗೆ ಕೇವಲ ಒಂದು ಪಿಂಚಣಿ ಮಾತ್ರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಎಷ್ಟು ಬಾರಿ ಗೆದ್ದರೂ ಕೂಡಾ ಒಂದೇ ಪಿಂಚಣಿ ಎಂದು ಸ್ಪಷ್ಟಪಡಿಸಿರುವ ಅವರು, ಶಾಸಕರ ಕುಟುಂಬ ಪಿಂಚಣಿಯನ್ನೂ ಕೂಡಾ ಕಡಿತಗೊಳಿಸಿದ್ದಾರೆ. ಎಷ್ಟು ಬಾರಿ ಗೆದ್ದರೂ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯುತ್ತಾರೆ ಹಾಗೂ ಶಾಸಕರ ಕುಟುಂಬಗಳಿಗೆ … Continued

ಐತಿಹಾಸಿಕ ಎರಡನೇ ಅವಧಿಗೆ ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ

ಲಕ್ನೋ: ಯೋಗಿ ಆದಿತ್ಯನಾಥ್ ಅವರು ಶುಕ್ರವಾರ, ಶುಕ್ರವಾರ, ಮಾರ್ಚ್ 25 ರಂದು ಸತತ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ಯೋಗಿ ಆದಿತ್ಯನಾಥ್ ಅವರು ಐದು ವರ್ಷಗಳ ಪೂರ್ಣ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಮತ್ತೆ ಮುಖ್ಯಮಂತ್ರಿಯಾಗುತ್ತಿರುವ ಉತ್ತರ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. … Continued

ಚೀನಾ ವಿದೇಶಾಂಗ ಸಚಿವ-ಜೈಶಂಕರ್ ಭೇಟಿ: ಗಡಿ ವಿವಾದದ ನಡುವೆ ಬೀಜಿಂಗ್ ಜೊತೆಗಿನ ಸಂಬಂಧ ಸಾಮಾನ್ಯವಲ್ಲ ಎಂದು ಹೇಳಿದ ವಿದೇಶಾಂಗ ಸಚಿವ

ನವದೆಹಲಿ: ಮಾರ್ಚ್ 25, ಶುಕ್ರವಾರದಂದು ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಎಸ್ ಜೈಶಂಕರ್, ಚೀನಾದೊಂದಿಗಿನ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗಿದೆ ಮತ್ತು (ಸದ್ಯ ಚೀನಾದೊಂದಿಗೆ) ಸಂಬಂಧವು ಸಾಮಾನ್ಯವಲ್ಲ ಎಂದು ಹೇಳಿದ್ದಾರೆ. “ಇಲ್ಲ, 1993-96ರ ಒಪ್ಪಂದಗಳಿಗೆ ವಿರುದ್ಧವಾಗಿ ಹೆಚ್ಚಿನ ಸಂಖ್ಯೆಯ ಸೈನಿಕರ ಉಪಸ್ಥಿತಿಯನ್ನು ಗಮನಿಸಿದರೆ (ಪ್ರಸ್ತುತ ಚೀನಾದೊಂದಿಗೆ) ನಮ್ಮ ಸಂಬಂಧವು ಸಾಮಾನ್ಯವಲ್ಲ. ಆದ್ದರಿಂದ, … Continued

ವಿದ್ಯುತ್ ಇಲ್ಲದೆ ಕೆಲಸ ಮಾಡುವ ಮರದ ಟ್ರೆಡ್ ಮಿಲ್ ತಯಾರಿಸಿದ ತೆಲಂಗಾಣ ವ್ಯಕ್ತಿ…! ವೀಕ್ಷಿಸಿ

ಸಮಸ್ಯೆಗೆ ಯಾವುದೇ ಗೋಚರ ಪರಿಹಾರವಿಲ್ಲದಿದ್ದಾಗ, ಸಮಯ-ಪರೀಕ್ಷಿತ ಪರಿಕಲ್ಪನೆಯು ಯಾವಾಗಲೂ ಕಾರ್ಯನಿರ್ವಹಿಸುತ್ತದೆ. ಫಿಟ್ನೆಸ್ ಉತ್ಸಾಹಿಗಳಿಗೆ ಪ್ರಯೋಜನವನ್ನು ನೀಡುವಂತಹ ಮರದ ಟ್ರೆಡ್ ಮಿಲ್ ಒಂದನ್ನು ತೆಲಂಗಾಣದ ವ್ಯಕ್ತಿಯೊಬ್ಬರು ಅಭೀವೃದ್ಧಿಪಡಿಸಿದ್ದಾರೆ. ಅವರು ಸಂಪೂರ್ಣವಾಗಿ ಭೌತಶಾಸ್ತ್ರದ ತತ್ವದ ಮೇಲೆ ಚಲಿಸುವ ಮರದ ಟ್ರೆಡ್‌ಮಿಲ್ ಅನ್ನು ವಿನ್ಯಾಸಗೊಳಿಸಿದ್ದಾರೆ. ವೀಡಿಯೊದಲ್ಲಿ, ವ್ಯಕ್ತಿಯು ಮೊದಲು ಮರದ ವಸ್ತುಗಳನ್ನು ಜೋಡಿಸಿ ಮತ್ತು ಭಾಗಗಳನ್ನು ಬಿಗಿಯಾಗಿ ಜೋಡಿಸುವುದುನ್ನು ಕಾಣಬಹುದು. … Continued

ತನ್ನ ರಕ್ತದಲ್ಲಿ ದಿ ಕಾಶ್ಮೀರ್​ ಫೈಲ್ಸ್​ ಸಿನೆಮಾ ಪೋಸ್ಟರ್​ ಬಿಡಿಸಿದ ಮಹಿಳೆ…!

ಭಾರತದಲ್ಲಿ ಹಿಂದಿ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ಸೃಷ್ಟಿಸಿರುವ ಕ್ರೇಜ್ , ಮುರಿದಿರುವ ದಾಖಲೆಗಳು ಅಷ್ಟಿಷ್ಟಲ್ಲ. ಹೌದು , ದಿ ಕಾಶ್ಮೀರ್ ಫೈಲ್ಸ್’ ಸಿನೆಮಾ ಇಡೀ ದೇಶದ ಹಾಗೂ ವಿದೇಶಗಳ ಜನರ ಗಮನ ಸೆಳೆಯುತ್ತಿದೆ. ಜೊತೆಗೆ ಈ ಸಿನಿಮಾದಲ್ಲಿ ತೋರಿಸಲಾದ ಹಲವು ಸಂಗತಿಗಳ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿವೆ . ಕಾಶ್ಮೀರ್ ಪಂಡಿತರ … Continued

ಬಿರ್ಭೂಮ್‌ನಲ್ಲಿ ಎಂಟು ಜನರ ಜೀವಂತ ಸುಟ್ಟ ಘಟನೆ ಪ್ರಸ್ತಾಪಿಸಿ ರಾಜ್ಯಸಭೆಯಲ್ಲಿ ಗಳಗಳನೆ ಅತ್ತ ರೂಪಾ ಗಂಗೂಲಿ…ವೀಕ್ಷಿಸಿ

ನವದೆಹಲಿ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಜೀವಂತ ಸುಟ್ಟ ಘಟನೆ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡುವಾಗ ಬಿಜೆಪಿ ಸಂಸದೆ ರೂಪಾ ಗಂಗೂಲಿ ಗಳಗಳನೆ ಅತ್ತಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯವು ಬದುಕಲು ಯೋಗ್ಯವಾಗಿ ಉಳಿದಿಲ್ಲ ಎಂದು ಹೇಳಿದ ರೂಪಾ ಗಂಗೂಲಿ, ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು … Continued