ಕಪಿಲ್‌ ಸಿಬಲ್ ಗಾಂಧಿಗಳ ಕಾಂಗ್ರೆಸ್‌ ನಾಯಕತ್ವ ಟೀಕಿಸಿದ ಬೆನ್ನಲ್ಲೇ, ಸಿಬಲ್‌ ಯಾಕೆ ಆರೆಸ್ಸೆಸ್‌-ಬಿಜೆಪಿ ಭಾಷೆಯಲ್ಲಿ ಮಾತನಾಡ್ತಿದ್ದಾರೆ ಎಂದು ಮಾಣಿಕ್ಕಂ ಠಾಗೋರ್ ಪ್ರಶ್ನೆ

ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಪಕ್ಷದ ಲೋಕಸಭೆ ವಿಪ್ ಮಾಣಿಕ್ಕಂ ಠಾಗೋರ್ ಅವರು ಮಂಗಳವಾರ ಹಿರಿಯ ನಾಯಕ ಕಪಿಲ್ ಸಿಬಲ್ ನಾಯಕತ್ವದ ವಿರುದ್ಧ ಟೀಕೆಗಳನ್ನು ಮಾಡಿದ್ದಕ್ಕೆ ಸಿಬಲ್‌ ಅವರು ಆರ್‌ಎಸ್‌ಎಸ್-ಬಿಜೆಪಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಗೋರ್, ಕಟ್ಟಾ ರಾಹುಲ್ ಗಾಂಧಿ ನಿಷ್ಠಾವಂತ ಎಂದೇ ಹೇಳಲಾಗುತ್ತಿದ್ದು, … Continued

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚೋಡಂಕರ್ ರಾಜೀನಾಮೆ

ಪಣಜಿ: ಇತ್ತೀಚೆಗಷ್ಟೇ ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ ಚೋಡಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚೋಡಂಕರ್ ತಮ್ಮ ರಾಜೀನಾಮೆಯನ್ನು ಎಐಸಿಸಿಗೆ ಕಳುಹಿಸಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಗೋವಾ ಡೆಸ್ಕ್ ಉಸ್ತುವಾರಿ ದಿನೇಶ್ ಗುಂಡೂ ರಾವ್ ಮಂಗಳವಾರ ತಿಳಿಸಿದ್ದಾರೆ. … Continued

ನವಾಬ್ ಮಲಿಕ್‌ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್, ನ್ಯಾಯಾಂಗ ಬಂಧನ ಮುಂದುವರಿಕೆ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಂಪುಟ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಪ್ರಸನ್ನ ಬಿ ವರಾಲೆ ಮತ್ತು ಶ್ರೀರಾಮ ಎಂ. ಮೋದಕ್ ಅವರ ಪೀಠವು … Continued

ಮಾರ್ಚ್ 31ರೊಳಗೆ ಪ್ಯಾನ್ ಕಾರ್ಡ್-ಆಧಾರ್ ಲಿಂಕ್‌ ಮಾಡದಿದ್ದರೆ ಬೀಳಲಿದೆ ದಂಡ

ನವದೆಹಲಿ:ಪ್ಯಾನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ: , 2022 ರೊಳಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡದಿದ್ದರೆ ಆದಾಯ ತೆರಿಗೆ ನಿಯಮಗಳ ಪ್ರಕಾರ 1000 ರೂ.ಗಳ ದಂಡವನ್ನು ವಿಧಿಸಬಹುದು. ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 234H ಪ್ರಕಾರ, ಒಬ್ಬ ವ್ಯಕ್ತಿಯು ಆದಾಯ ತೆರಿಗೆ ಇಲಾಖೆಗೆ ತನ್ನ ಆಧಾರ್ ಅನ್ನು ತಿಳಿಸಲು ವಿಫಲವಾದರೆ … Continued

ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಅನಾಹುತ: 4 ಸಾವು, 14 ಮಂದಿ ಗಾಯ

ಜಮ್ಮು: ಜಮ್ಮು ನಗರದಲ್ಲಿ ಸ್ಕ್ರ್ಯಾಪ್ ಅಂಗಡಿ ಮತ್ತು ಸುತ್ತಮುತ್ತಲಿನ ಗುಡಿಸಲೊಳಗೆ ಸೋಮವಾರ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಕ್ರ್ಯಾಪ್ ಅಂಗಡಿಯಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿತು ಮತ್ತು ರೆಸಿಡೆನ್ಸಿ ರಸ್ತೆಯ ಸುತ್ತಮುತ್ತಲಿನ ಗುಡಿಸಲುಗಳಿಗೆ ಆವರಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಜಮ್ಮುವಿನ ಎಸ್‌ಎಸ್‌ಪಿ ಚಂದನ್‌ ಕೊಹ್ಲಿ, … Continued

ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರನ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಚಂಡೀಗಡ: ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ನಾಲ್ವರು ದುಷ್ಕರ್ಮಿಗಳು ಸೋಮವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಹಕೋಟ್‌ನ ಮಲ್ಲಿಯನ್ ಕಲಾನ್ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಜಲಂಧರ್ (ಗ್ರಾಮೀಣ) ಪೊಲೀಸ್ ಉಪ ಅಧೀಕ್ಷಕ (ನಾಕೋದರ್) ಲಖ್ವಿಂದರ್ ಸಿಂಗ್ ಅವರು 40 ವರ್ಷದ … Continued

ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಏರ್ ಇಂಡಿಯಾ ಅಧ್ಯಕ್ಷರಾಗಿ ನೇಮಕ

ನವದೆಹಲಿ: ಏರ್ ಇಂಡಿಯಾದ ಅಧ್ಯಕ್ಷರಾಗಿ ನಟರಾಜನ್ ಚಂದ್ರಶೇಖರನ ಅವರನ್ನು ಟಾಟಾ ಗ್ರೂಪ್ ನೇಮಕ ಮಾಡಿದೆ , ಅವರ ನೇಮಕಾತಿಯನ್ನು ಮಂಡಳಿಯು ಸೋಮವಾರ ಖಚಿತಪಡಿಸಿದೆ. ಟಾಟಾ ಗ್ರೂಪ್ ಈ ಹಿಂದೆ ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ಘೋಷಿಸಿತ್ತು, ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದರ ಪರಿಣಾಮವಾಗಿ, … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ದೇಶ್‌ಮುಖ್ ಜಾಮೀನು ಅರ್ಜಿ ತಿರಸ್ಕರಿಸಿದ ಮುಂಬೈ ನ್ಯಾಯಾಲಯ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ ಅವರಿಗೆ ಜಾಮೀನು ನೀಡಲು ಪಿಎಂಎಲ್‌ಎ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಜಾಮೀನು ಕೋರಿ ಅನಿಲ್‌ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ ಆದೇಶ ಕಾಯ್ದಿರಿಸಿದ್ದ ವಿಶೇಷ ನ್ಯಾಯಾಧೀಶ ಆರ್. ಎನ್. ರೋಕಡೆ ಇಂದು, ಸೋಮವಾರ … Continued

ಪಂಜಾಬ್ ಗೆಲುವಿನ ನಂತರ ಈಗ ಪಶ್ಚಿಮ ಬಂಗಾಳದ ಮೇಲೆ ಆಮ್‌ ಆದ್ಮಿ ಪಾರ್ಟಿ ಕಣ್ಣು: 2023ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧೆ ಘೋಷಣೆ

ನವದೆಹಲಿ: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ, ಆಮ್ ಆದ್ಮಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2023 ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧವಾಗಿದೆ. ಎಎಪಿಯ ಬಂಗಾಳ ಉಸ್ತುವಾರಿ ಸಂಜೋಯ್ ಬಸು ಸೋಮವಾರ, “ಆಮ್ ಆದ್ಮಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2023 ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸ್ಥಳೀಯ ಘಟಕ … Continued

ರೈತನ ಮಗನ ಹೆಸರಿನ ಬ್ಯಾಂಕ್‌ ಖಾತೆಯಿಂದ 290 ಕೋಟಿ ರೂ. ವ್ಯವಹಾರ!. ಐಟಿ ಇಲಾಖೆಯಿಂದ ಬಂದ ನೋಟಿಸ್ ನೋಡಿ ಶಾಕ್‌..!

ಖಾಂಡ್ವಾ (ಮಧ್ಯಪ್ರದೇಶ): ಖಾಂಡ್ವಾ ಜಿಲ್ಲೆಯ ಚಿಕ್ಕ ದೇಶಗಾಂವ ಗ್ರಾಮದ ರೈತನ ಮಗನಾದ ಪ್ರವೀಣ ರಾಥೋಡ್ ಅವರು ತಮ್ಮ ಬ್ಯಾಂಕ್ ಖಾತೆಯಿಂದ ಸುಮಾರು 290 ಕೋಟಿ ರೂ.ಗಳ ವ್ಯವಹಾರ ನಡೆಸಿರುವ ಕುರಿತು ಆದಾಯ ತೆರಿಗೆ ಇಲಾಖೆಯಿಂದ ಶೋಕಾಸ್ ನೋಟಿಸ್ ಪಡೆದ ನಂತರ ಶಾಕ್‌ ಆಗಿದ್ದಾರೆ..! 2,90,39,36,817 ರೂ.ಗಳ ವ್ಯವಹಾರವನ್ನು ತಮ್ಮ ಬ್ಯಾಂಕ್‌ ಖಾತೆಯಿಂದ ಮಾಡಿರುವುದಕ್ಕೆ ಮಾರ್ಚ್ 15 … Continued