ತಂಬಾಕು ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ: ವಿದ್ಯಾರ್ಥಿಗಳೇ ದುಶ್ಚಟಕ್ಕೆ ಬಲಿಯಾಗಬೇಡಿ-ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ದುಶ್ಟಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೆ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಯುವಕರು ನಾನಾ ವಿಧಗಳಲ್ಲಿ ತಂಬಾಕು ಸೇವನೆ ಮಾಡುತ್ತಿದ್ದು, ಇದರಿಂದ ತಲೆ, ಕಣ್ಣು, ಬಾಯಿ, ಕಿವಿ, ಉದರ ಹಾಗೂ ಶ್ವಾಸಕೋಶದ ರೋಗಗಳಿಂದ ಯುವಕರು ಚಿಕ್ಕ ವಯಸ್ಸಿನಲ್ಲೆ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಧಾರವಾಡದ ವಿದ್ಯಾಗಿರಿಯ … Continued

ಕುಮಟಾ ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ಬಿ ಪ್ಲಸ್ ನ್ಯಾಕ್ ಮಾನ್ಯತೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ನವೆಂಬರ್ ೧೮ ಮತ್ತು ೧೯ ರಂದು ನ್ಯಾಕ್ ಸಮೀತಿ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ್ದು, ಕಾಲೇಜು ಬಿ ಪ್ಲಸ್‌ ನ್ಯಾಕ್ ಶ್ರೇಣಿ ಉನ್ನತಿ ಪಡೆದುಕೊಂಡಿದೆ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗಿನ ಚರ್ಚೆ, ಆಡಳಿತ ಮಂಡಳಿಯೊಂದಿಗಿನ ಸಭೆ, ಪೂರ್ವ ವಿದ್ಯಾರ್ಥಿಗಳೊಂದಿಗಿನ ಸಂಭಾಷಣೆ ನಡೆಸಿ ನ್ಯಾಕ್ ಸಮಿತಿ ಮೆಚ್ಚುಗೆ … Continued

ಧಾರವಾಡ: ವಿವಿಧ ಪ್ರಶಸ್ತಿ ಪಡೆದ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು

ಧಾರವಾಡ: ಧಾರವಾಡದ ಎಂ. ನಗರ ಸವದತ್ತಿ ರಸ್ತೆ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ೧೦ನೇ ತರಗತಿಯ ದಿಶಾ ಮೊಗೇರ, ಸಾಂಸ್ಕೃತಿಕ ಸಾಕಾರ ಸಮಿತಿ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ೯ನೇ ತರಗತಿಯ ಅಫ್ತಾಬ್ ಹುಸೇನ್‌ ಮುಮ್ಮಿಗಟ್ಟಿ “ಹಮ್ ಹೋಂಗೆ ಕಾಮಿಯಾಬ್” ಚಿತ್ರದಲ್ಲಿ ನಟನೆಗಾಗಿ ನವ ಕರ್ನಾಟಕ ಚಿತ್ರ ಮಂಡಳಿಯವರು ಅತ್ಯುತ್ತಮ ಬಾಲ … Continued

ಕುಮಟಾ: ನವೆಂಬರ್‌ 18-19ರಂದು ಡಾ.ಎ.ವಿ ಬಾಳಿಗಾ ವಾಣಿಜ್ಯ ಕಾಲೇಜಿಗೆ ನ್ಯಾಕ್ ಸಮಿತಿ

ಕುಮಟಾ; ರಾಜ್ಯದ ಪ್ರತಿಷ್ಠಿತ ಮಹಾವಿದ್ಯಾಲಯದಲ್ಲಿ ಒಂದಾಗಿರುವ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಡಾ.ಎ.ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಪರಿವೀಕ್ಷಣೆಗಾಗಿ ನ್ಯಾಕ್ ಸಮಿತಿಯು ಆಗಮಿಸಲಿದೆ. ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯವು ನ್ಯಾಕ್ ಮೌಲ್ಯಮಾಪನ ಮತ್ತು ಮರು-ಮಾನ್ಯತೆ ಪ್ರಕ್ರಿಯೆಗೆ ಒಳಪಡುತ್ತಿದ್ದು ನವೆಂಬರ್‌ ೧೮ ಮತ್ತು ೧೯ ೨೦೨೧ರಂದು ನ್ಯಾಕ್ ಸಮಿತಿಯ ಸದಸ್ಯರು ಮಹಾವಿದ್ಯಾಲಯಕ್ಕೆ ತಮ್ಮ ನಿಯೋಜಿತ … Continued

ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ: ಡಾ. ಅಜಿತ ಪ್ರಸಾದ

ಧಾರವಾಡ: ವಿದ್ಯೆ, ವಿದ್ಯಾಭ್ಯಾಸ, ವಿದ್ಯಾರ್ಥಿ, ಅಧ್ಯಾಪಕ, ವಿದ್ಯಾ ಸಂಸ್ಥೆಗಳು ಇವುಗಳು ಮಾನವ ಸಮಾಜದ ಸಂಸ್ಕೃತಿ, ಸಮೃದ್ಧಿ, ಪ್ರಗತಿ, ಉನ್ನತಿಗಳನ್ನು ನಿರ್ಧರಿಸುವ ಶಬ್ದಗಳು, ವ್ಯಕ್ತಿಯ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶಿಕ್ಷಣವೊಂದೇ ಮಾರ್ಗ ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಧಾರವಾಡದ ವಿದ್ಯಾಗಿರಿಯ ಸನ್ನಿಧಿ ಕಲಾಕ್ಷೇತ್ರದಲ್ಲಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ … Continued

ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿವರ್ಷ ೨೫೦ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ-ಕ್ರೀಡಾಪಟುಗಳಿಗೆ ಉಚಿತ ಪ್ರವೇಶ:ಡಾ.ಅಜಿತಪ್ರಸಾದ

ಧಾರವಾಡ : ಅನ್ನದಾನಂ ಕ್ಷಣಿಕ ತೃಪ್ತಿಃ ವಿದ್ಯಾದಾನಂ ಯಾವಜ್ಜೀವಂ ಎಂಬ ಮಾತು ಸರ್ವಕಾಲಿಕವಾದದ್ದು, ಹಸಿದವರಿಗೆ ಅನ್ನ ಹಾಕಿದಾಗ ಆ ಕ್ಷಣದ ತೃಪ್ತಿ ಮಾತ್ರ ಹಸಿದವನಿಗೆ ಸಿಗುತ್ತದೆ. ಆದರೆ ವಿದ್ಯಾದಾನ ಮಾತ್ರ ವಿದ್ಯೆಯನ್ನು ಪಡೆದವನ ಜೀವನದುದ್ದಕ್ಕೂ ಅವನಿಗೆ ತೃಪ್ತಿಯನ್ನು ಕೊಡುತ್ತದೆ. ಆ ನಿಟ್ಟಿನಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ವಿದ್ಯೆಯನ್ನು ನೀಡುತ್ತ ಬಂದಿದೆ ಎಂದು ಜನತಾ ಶಿಕ್ಷಣ ಸಮಿತಿಯ … Continued

ಇಂದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಬಹುಮಾನ ವಿತರಣೆ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಡಿ.ಆರ್.ಹೆಚ್ ಸಭಾಭವನದಲ್ಲಿ ನವೆಂಬರ್‌ ೧೨ರಂದು ಬೆಳಿಗ್ಗೆ ೧೦.೩೦ ಕ್ಕೆ ಧಾರವಾಡ ಶಹರ ಅಟೋ ಚಾಲಕರ/ಮಾಲಿಕರ ಸಂಘ (ರಿ) ಹಾಗೂ ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ. ಜೆ.ಎಸ್.ಎಸ್.ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ … Continued

ಎಲ್‌ಕೆಜಿ -ಯುಕೆಜಿ ಮಕ್ಕಳನ್ನು ಆರತಿ ಮಾಡಿ ಸಿಹಿ ಹಂಚುವ ಮೂಲಕ ಸ್ವಾಗತ

ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳನ್ನು ಆರತಿ ಮಾಡಿ, ಸಿಹಿ ಹಂಚುವ ಮೂಲಕ ಸ್ವಾಗತಿಸಲಾಯಿತು. ಧಾರವಾಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಹಾಗೂ ಪ್ರಾಚಾರ್ಯೆ ವಿದ್ಯಾ ಕೊಲ್ಹಾಪುರೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕನ್ನಡ ಕವಿಗಳ ಕಾವ್ಯ ಕೃತಿಗಳನ್ನು ಓದಿದರೆ ಬದುಕಿಗೆ ಹೊಸ ಅರ್ಥ

ಧಾರವಾಡ : ಕರ್ನಾಟಕ ರಾಜ್ಯೋತ್ಸವವನ್ನು ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ‘ಐಕ್ಯೂಎಸಿ’ ಮತ್ತು ಕರ್ನಾಟಕ ಸಂಘದ ಸಹಯೋಗದೊಂದಿಗೆ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟಕರಾದ ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ. ಅಜಿತಪ್ರಸಾದ … Continued

ಉಪನ್ಯಾಸಕರ ಪಾಠವು ಪ್ರೇರಣೆಯಾದಾಗ ಮಾತ್ರ ವಿದ್ಯಾಥಿಗಳಲ್ಲಿ ಜ್ಞಾನದ ಮಟ್ಟ ಹೆಚ್ಚಿಸಲು ಸಾಧ್ಯ; ಪ್ರೊ..ನಿಟ್ಟೂರ್

ಕುಮಟಾ; ವಿಷಯಗಳ ಆಳ ಜ್ಞಾನದೊಂದಿಗೆ ಕಲಾತ್ಮಕ ಬೋಧನೆಯಿಂದ ಉಪನ್ಯಾಸಕರು ಪಾಠಮಾಡಬೇಕು .ಕಲಿಸುವಿಕೆಯು ಆಕರ್ಷಕವಾಗಿ ವಿದ್ಯಾರ್ಥಿಗಳ ಮನ ಮುಟ್ಟುವಂತೆ ಇದ್ದಾಗ ಫಲಿತಾಂಶ ಗುಣಮಟ್ಟವು ಹೆಚ್ಚುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಪ್ರೊ..ಹನುಮಂತಪ್ಪ ನಿಟ್ಟೂರ್ ಹೇಳಿದರು. ಅವರು ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಮತ್ತು ಲೆಕ್ಕ ಶಾಸ್ತ್ರದ ವಿಷಯದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, … Continued