ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜುಲೈ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ … Continued

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ : ದೂರು ದಾಖಲು

ಶಿರಸಿ: ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೂರು ದಾಖಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಅವರು ಬೆದರಿಕೆಯ ಇ ಮೇಲ್‌ ಬಂದಿದ್ದರ ಬಗ್ಗೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ … Continued

ಸಿಎಂ ಸಿದ್ದರಾಮಯ್ಯ ಫೇಸ್‌ಬುಕ್‌ ಪೋಸ್ಟ್‌ ತಪ್ಪು ಅನುವಾದ ; ಕ್ಷಮೆಯಾಚಿಸಿದ ಮೆಟಾ

ಬೆಂಗಳೂರು: ನಟಿ ಬಿ. ಸರೋಜಾದೇವಿ ಅವರಿಗೆ ಕನ್ನಡದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದ ಫೇಸ್‌ಬುಕ್ ಪೋಸ್ಟ್‌ನ ಆಟೋ ಟ್ರಾನ್ಸ್‌ಲೇಷನ್‌ ಅವಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೇಲ್‌ ಮೂಲಕ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. … Continued

ಗೋಕರ್ಣದ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ-ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅರಣ್ಯ ಗುಹೆಯಿಂದ ರಷ್ಯಾದ ಮಹಿಳೆ ಮತ್ತು ಆಕೆಯ ಇಬ್ಬರು ಚಿಕ್ಕ ಹೆಣ್ಣುಮಕ್ಕಳನ್ನು ಪೊಲೀಸರು ರಕ್ಷಿಸಿದ ಕೆಲವು ದಿನಗಳ ನಂತರ, ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರುವ ಅವರನ್ನು ಭೇಟಿ ಮಾಡಲು ಬಂದ ಆಕೆಯ ಪತಿಗೆ ಅನುಮತಿ ನಿರಾಕರಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು … Continued

ಜುಲೈ 20ರಂದು ಹುಬ್ಬಳ್ಳಿಯಲ್ಲಿ 12ನೇ ಹವ್ಯಕ ಹಬ್ಬ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹುಬ್ಬಳ್ಳಿ-ಧಾರವಾಡದ ಹವ್ಯಕ ಮಹಿಳಾ ಮಂಡಳದ ವತಿಯಿಂದ 12ನೇ ಹವ್ಯಕ ಹಬ್ಬ ಹುಬ್ಬಳ್ಳಿಯ ಹವ್ಯಕ ಭವನದಲ್ಲಿ ಜುಲೈ 20ರಂದು ನಡೆಯಲಿದೆ. ಹವ್ಯಕ ಹಬ್ಬ ವೈಶಿಷ್ಟ್ಯಪೂರ್ಣವಾಗಿದ್ದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು … Continued

ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ 60 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ (ಜುಲೈ 17) ಬೆಳಿಗ್ಗೆ 11 ಗಂಟೆ ಸುಮಾರಿಗೆ ಗ್ರಾಮದ ಗೇರು ಪ್ಲಾಂಟೇಶನ್‌ಗೆ ಎರಡು ಆನೆಗಳು ಬಂದಿದ್ದನ್ನು ತಿಳಿದು ಅವುಗಳನ್ನು ಓಡಿಸಲು … Continued

ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued

ಭಾರಿ ಮಳೆ ಮುನ್ಸೂಚನೆ ; ಮೂರು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಣೆ

 ಮಂಗಳೂರು/ಉಡುಪಿ/ಮಡಿಕೇರಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಗಾಳಿ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದಾರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಮೇಲಿನ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಎರಡ್ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಒಟ್ಟು … Continued