ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued

ಪರಿಷತ್ತಿನಲ್ಲಿ‌ ಕಾಂಗ್ರೆಸ್‌ ಧರಣಿ ಮಧ್ಯೆಯೇ ಬಜೆಟ್ ಅಂಗೀಕಾರ, ಅಧಿವೇಶನ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ 2021ನೇ ಸಾಲಿನ ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಹೆಚ್ಚಿನ ಚರ್ಚೆ ನಡೆಯದೆ ಪ್ರತಿಪಕ್ಷ ಕಾಂಗ್ರೆಸ್‍ನ ಗದ್ದಲದ ನಡುವೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಬಹಳಷ್ಟು ಮಂದಿ ಮಾತನಾಡಿಲ್ಲ. ಖುದ್ದು ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರೇ ಮಾತನಾಡಿರಲಿಲ್ಲ. ಬುಧವಾರ ಬೆಳಗ್ಗೆ ಪ್ರಶ್ನೋತ್ತರ … Continued

ಕೊರೊನಾ ಸೋಂಕು ಹೆಚ್ಚಳ:ಕರ್ನಾಟಕದಲ್ಲಿ ಖಾಸಗಿ ಆಸ್ಪತ್ರೆಗೆ ಸಜ್ಜಾಗಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸಜ್ಜಾಗುವಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯಸ ಸರಕಾರ ಸೂಚಿಸಿದೆ. ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿದ ಸರಕಾರ, ಕೊರೊನಾ ರೋಗಿಗಳ ಚಿಕಿತ್ಸೆಗೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದೆ. ಮೊದಲ ಹಂತದಲ್ಲಿ ೨೦೦ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ತೆಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣ, ಹಜ್‌ ಭವನ, … Continued

ಹಟ್ಟಿ ಚಿನ್ನದ ಗಣಿ ಖಾಸಗೀಕರಣ ಇಲ್ಲ: ಸಚಿವ ನಿರಾಣಿ ಸ್ಪಷ್ಟನೆ

ಬೆಂಗಳೂರು:- ಯಾವುದೇ ಕಾರಣಕ್ಕೂ ಹಟ್ಡಿ ಚಿನ್ನದ ಗಣಿ ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕವಾಗಿ 1800 ಕೆಜಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ, 5000 ಕೆಜಿ ಉತ್ಪಾದನೆ ಮಾಡುವ ಗುರಿ ಹಾಕಿಕೊಂಡಿದ್ದೇವೆಯೇ ಹೊರತು ಖಾಸಗೀಕರಣ ಮಾಡುವ ಅಲೋಚನೆ … Continued

ಸದನದಲ್ಲಿ ಡಾ.ಸುಧಾಕರ್ ಹೇಳಿಕೆ ಪ್ರಸ್ತಾಪಕ್ಕೆ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಆರೋಗ್ಯ ಸಚಿವ ಡಾ ಸುಧಾಕರ್ ಅವರು ಸದನದ ಹೊರಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪ‌ ಇದ್ದರೆ ಸದನದ ಹೊರಗೆ ಆ ಬಗ್ಗೆ ಪ್ರಶ್ನಿಸಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಬುಧವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಬುಧವಾರವೂ ಹೆಚ್ಚಳ..

ಬೆಂಗಳೂರು : ಕರ್ನಾಟಕದಲ್ಲಿ ಬೂದವಾರವೂ ಕೊರೊನಾ ಪ್ರಕರನ ಹೆಚ್ಚಳ ಕಂಡಿದೆ. ಕಳೆದ 24 ತಾಸಿನಲ್ಲಿ ಬರೋಬ್ಬರಿ 2,298 ಕೊರೊನಾ ಸೋಂಕು ದಾಖಲಾಗಿದೆ.. ಸೋಂಕಿನಿಂದ 12 ಜನ ಮೃತಪಟ್ಟಿದ್ದು, ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 12,461ಕ್ಕೆ ಏರಿದೆ.ರಾಜ್ಯದಲ್ಲಿ ಒಟ್ಟು ಕೊರಪೊನಾ ಸೋಂಕಿತರ ಸಂಖ್ಯೆ 9,75,955 ಕ್ಕೆ ಏರಿದೆ. ಬುಧವಾರ 995 ಗುಣಮುಖರಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳು 16,886 ಕ್ಕೆ … Continued

ಲಾಕ್‌ ಲ್ಯಾಂಡ್‌ ಭೂಮಿ ಮಾರಾಟಕ್ಕೆ ಸರ್ಕಾರದ ನಿರ್ಧಾರ: ಸಚಿವ ಅಶೋಕ

ಬೆಂಗಳೂರು: ಸರ್ಕಾರಿ ರಸ್ತೆ ಇಲ್ಲದೆ ಮಧ್ಯ ಸಿಲುಕಿರುವ ಲಾಕ್‍ಲ್ಯಾಂಡ್ ಭೂಮಿಯನ್ನು ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ಬಿ-ಖರಾಬು ಭೂಮಿಗಳು ಹಾಗು ಬೆಂಗಳೂರಿನಲ್ಲಿ ಭೂ ಕಬಳಿಕೆ ಆಗಿರುವ ಜಮೀನುಗಳ ಕುರಿತು ವಿವರಣೆ … Continued

ಟಿಕಾಯತ್‌ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಗೃಹ ಸಚಿವ ಬೊಮ್ಮಾಯಿಗೆ ಪತ್ರ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ. ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, … Continued

ಟಿಕಾಯತ್‌ ವಿರುದ್ಧ ಶಿವಮೊಗ್ಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

ಶಿವಮೊಗ್ಗ :ನಗರದಲ್ಲಿ ನಡೆದಂತ ರೈತರ ಮಹಾ ಪಂಚಾಯತ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಚೋದನಾಕಾರಿ ಭಾಷಣದ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 20ರಂದು ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯ ಸೈನ್ಸ್ ಮೈದಾನದಲ್ಲಿ ರೈತರ ಮಹಾ … Continued

ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ … Continued