ವಿಧಾನ ಪರಿಷತ್ತಿಗೆ ಮುನಿರಾಜು ಗೌಡ ಅವಿರೋಧ ಆಯ್ಕೆ

ಬೆಂಗಳೂರು : ನಿರೀಕ್ಷಿಸಿದ್ದಂತೆಯೇ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು … Continued

ಯಲ್ಲಾಪುರ: ಗುಡ್ಡ ಕುಸಿದು ನಾಲ್ವರು ಕಾರ್ಮಿಕರ ಸಾವು

ಕಾರವಾರ: ತೋಟದ ಮಣ್ಣಿನ ಕೆಲಸ ಮಾಡುವಾಗ ಆಕಸ್ಮಾತ್‌ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಇಡಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್‌ ಮಂಜುನಾಥ ಭಟ್‌ ಅವರ ಮಾಲೀಕತ್ವದ ತೋಟಕ್ಕೆ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತೋಟಕ್ಕೆಂದು ಮಣ್ಣು ತೆಗೆಯಲು ಒಟ್ಟು … Continued

ಮುಂದಿನ ಬಾರಿಯೂ ಸಿದ್ದರಾಮಯ್ಯನವರನ್ನು ಪ್ರತಿಪಕ್ಷದಲ್ಲಿಯೇ ಕೂಡ್ರಿಸುತ್ತೇನೆ:ಬಿಎಸ್‌ವೈ ಸವಾಲು

ಬೆಂಗಳೂರು: ಕೊವಿಡ್‌ ಸಂಕಷ್ಟದ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವರಿಗೂ ಒಳ್ಳೆಯದನ್ನು ನೀಡುವ ಬಜೆಟ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ, ಯಾರಿಗೂ ಹೊರೆಯಾಗದ ಬಜೆಟ್ ಮಂಡಿಸಿದ್ದೇನೆ,ಇಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾರಿಗೂ ತೆರಿಗೆ ಹಾಕದೆ … Continued

ರಾಜ್ಯ ಬಜೆಟ್‌: ವಿವಿಧ ಧರ್ಮ, ಜಾತಿ ಅಭಿವೃದ್ಧಿ ಮಂಡಳಿಗಳಿಗೆ ೧೫೦೦ ಕೋಟಿ ರೂ.

  ಬೆಂಗಳೂರು: ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗಾಗಿ 1,500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಮೀಸಲಿಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. … Continued

ರಾಜ್ಯ ಬಜೆಟ್‌: ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ೧೦ ಕೋಟಿ ರೂ.

ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ  ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್‌ ಸೋಮವಾರ ಮಂಡಿಸಿದಾಗ ಈ ಘೋಷಣೆ ಮಾಡಿದರು. ‘ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,’ ಎಂದು … Continued

ಬಿಎಸ್‌ವೈ ಬಜೆಟ್ಟಿನ ವಿಶೇಷತೆಗಳೇನು? ಪ್ರಮುಖವಾದದ್ದು ಇಲ್ಲಿದೆ ನೋಡಿ

*ಆಯವ್ಯಯ ಗಾತ್ರ (ಸಂಚಿತ ನಿಧಿ)- 2,46,207 ಕೋಟಿ ರೂ. *ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; ಸಾರ್ವಜನಿಕ ಋಣ 71,332 ಕೋಟಿ ರೂ. ಮತ್ತು ಬಂಡವಾಳ ಸ್ವೀಕೃತಿ 71,463 ಕೋಟಿ ರೂ. *ಒಟ್ಟು ವೆಚ್ಚ- 2,46,207 ಕೋಟಿ ರೂ.; ರಾಜಸ್ವ ವೆಚ್ಚ – 1,87,405 ಕೋಟಿ ರೂ.; ಬಂಡವಾಳ … Continued

ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ದೊಡ್ಡದು:ನಿರೀಕ್ಷೆ ಹುಸಿ ಮಾಡಿದ ಬಿಎಸ್‌ವೈ..!!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಧಾನಸಭೆಯಲ್ಲಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್‍ನ ಒಟ್ಟು ಗಾತ್ರ 2,43,734 ಕೋಟಿ ರೂ.ಗಳಾಗಿದೆ. ಇದು ಕಳೆದ ಸಲಕ್ಕಿಂತ ದೊಡ್ಡ ಗಾತ್ರದ ಬಜೆಟ್‌ ಆಗಿದ್ದು, ಕೊವಿಡ್‌ ಸಂದರ್ಭದಲ್ಲಿ ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ಸಣ್ಣ ಮಾಡಬಹುದು ಎಂಬ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಕಳೆದ ವರ್ಷ 2,33,137 ಕೋಟಿ … Continued

ಅನುಭವ ಮಂಟಪ ನಿರ್ಮಾಣಕ್ಕೆ 200 ಕೋಟಿ ರೂ.ಬಿಡುಗಡೆ

ಬೆಂಗಳೂರು: ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಬಜೆಟ್‍ನಲ್ಲಿ 200 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರದ ಅಡಿ ವಿವಿಧ ಕಾಮಗಾರಿಗಳಿಗಾಗಿ 50 ಕೋಟಿ, ಬಸವಣ್ಣ ಅವರ ಜನ್ಮ ಸ್ಥಳ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಬಂಪರ್‌ ‌: ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ

  ಬೆಂಗಳೂರು; 2021-22ನೇ ಸಾಲಿನ ಬಜೆಟ್ನಲ್ಲಿ ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಕಾರಣ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ, ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆಯನ್ನು ಸಹ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಶೇ.4 ರಷ್ಟು … Continued

ರಾಜ್ಯ ಬಜೆಟ್‌ ಪ್ರಮುಖ ಹೈಲೈಟ್‌ಗಳು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು, ೨೦೨೧-೨೨ನೇ ಸಾಲಿಗಾಗಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ೨,೪೩,೭೩೪ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಮಂಕು ತಿಮ್ಮನ ಕಗ್ಗದ ‘ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು.’ಸಾಲುಗಳನ್ನು ಸ್ಮರಿಸಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್‌ ಮಂಡಿಸಿದರು. ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; … Continued