ಕೆನರಾ ಬ್ಯಾಂಕಿನಿಂದ ಕೃಷಿ ಸಾಲ ಕೇಂದ್ರ ಆರಂಭ

ಬೆಂಗಳೂರು : ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಕೆನರಾ ಬ್ಯಾಂಕ್ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಮಾಡಲು ಕೃಷಿ ಸಾಲ ಕೇಂದ್ರಗಳನ್ನು ಆರಂಭಿಸಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಹರಿಯಾಣ ರಾಜ್ಯಗಳ ತಲಾ ಒಂದೊಂದು ಶಾಖೆಗಳಲ್ಲಿ ಕೃಷಿ ಸಾಲ ಕೇಂದ್ರಗಳನ್ನು ಕೆನರಾ ಬ್ಯಾಂಕ್ ತೆರೆದಿದೆ. ಕರ್ನಾಟಕದಲ್ಲಿ ತುಮಕೂರಿನ ಬಿ.ಎಚ್ ರಸ್ತೆಯಲ್ಲಿರುವ ಕೆನರಾ … Continued

ಏಪ್ರಿಲ್ 5 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು : ಟೋಲ್ ಶುಲ್ಕ, ಹಳೆ ವಾಹನ ವಿಲೇವಾರಿ ನೀತಿ, ಮೋಟಾರು ಕಾಯ್ದೆ ಉಲ್ಲಂಘನೆ ದಂಡ ಹೆಚ್ಚಳ, ಡೀಸೆಲ್ ದರ ಹೆಚ್ಚಳ ಸೇರಿದಂತೆ ಕೇಂದ್ರ ಸರ್ಕಾರ ಸಾರಿಗೆ ವಿರೋಧಿ ನೀತಿಗಳನ್ನು ಖಂಡಿಸಿ ಏಪ್ರಿಲ್ 5 ರಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಫೆಡರೇಷನ್ ಅಧ್ಯಕ್ಷ … Continued

ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆ ಮತ್ತೆ 5 ವರ್ಷ ಮುಂದುವರಿಸಿ

ಬೆಂಗಳೂರು: ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆಯನ್ನು ಮತ್ತೆ 5 ವರ್ಷಗಳ ಕಾಲ ಮುಂದುವರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಪ್ರಶ್ನೆ ಕೇಳಿದ ಅವರು, ಜಿಎಸ್‍ಟಿ ಜಾರಿಗೆ ಬರುವ ಮೊದಲು ಕರ್ನಾಟಕದಲ್ಲಿ 36 ಸಾವಿರ ಕೋಟಿರೂ.ಗಳ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್‍ಟಿಯಿಂದ ಪ್ರತಿ ವರ್ಷ ಶೇ.14ರಷ್ಟು ತೆರಿಗೆ … Continued

ರಮೇಶ ಜಾರಕಿಹೊಳಿ ಸಿಡಿ ಹಗರಣ: ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಸತೀಶ ಗೈರು

ಬೆಂಗಳೂರು: ಸಹೋದರ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಹಗರಣದಿಂದ ಮುಜುಗರಕ್ಕೊಳಗಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಕಾಂಗ್ರೆಸ್ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದಾರೆ. ಸಿಡಿ ಪ್ರಕರಣದಿಂದ ಸಾಕಷ್ಟು ಮುಜುಗರಕ್ಕೆ ಒಳಗಾಗಿರುವ ಅವರು ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ್ ಜಾರಕಿಹೊಳಿ ಅವರನ್ನು ಉದ್ದೇಶ ಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು. … Continued

ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗಕ್ಕೆ ಹೆಚ್ಚಳ

ಬೆಂಗಳೂರು: ‘ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟರು. ಗುರುವಾರ ವಿಧಾನಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ವಿಚಾರವಾಗಿ ಮಾತನಾಡಿದ ಅವರು, ‘ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಗಳಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ, ಒಟ್ಟಾರೆ ದೇಶದ ಪ್ರಗತಿಯ … Continued

ಕಡ್ಡಾಯ ಮತದಾನ: ಸ್ಪೀಕರ್‌ ಕಾಗೇರಿ ಪ್ರತಿಪಾದನೆ

ಬೆಂಗಳೂರು: ಕಡ್ಡಾಯ ಮತದಾನವನ್ನು ಪ್ರತಿಪಾದಿಸಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಏಕ ಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಏರು ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಸಹಾಯವಾಗುತ್ತಿದೆ ಎಂದು ಹೇಳಿದ್ದಾರೆ. ಗುರುವಾರ ವಿಧಾನಸಭೆಯಲ್ಲಿಂದು ಒಂದು ರಾಷ್ಟ್ರ, ಒಂದು ಚುನಾವಣೆಯ ಚರ್ಚೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಒಂದು ಬಾರಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ … Continued

ಜಾಗತಿಕ ನಾವೀನ್ಯತೆ ಸೂಚ್ಯಂಕ: ೩ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

ಜಾಗತಿಕ ನಾವೀನ್ಯತೆ ಸೂಚ್ಯಂಕದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿದಿದ್ದು, ‘ಸೂಪರ್ ಸಿಟಿ’ ಎಂಬ ಹೆಗ್ಗಳಿಕೆ ಕಳೆದುಕೊಂಡಿದೆ. ಕೆನಡಾದ ಟೊರೊಂಟೊ ಮೊದಲ ಸ್ಥಾನ ಗಳಿಸಿದೆ. ಕಾರ್ಯತಂತ್ರದ ಸಲಹೆ, ಸಂಶೋಧನೆ ಮತ್ತು ಹೂಡಿಕೆ ಸಲಹಾ ಸಂಸ್ಥೆ ಥೋಲೋನ್ಸ್ ಬಿಡುಗಡೆ ಮಾಡಿರುವ ಜಾಗತಿಕ ನಾವೀನ್ಯತೆ ಸೂಚ್ಯಂಕದ ಪ್ರಕಾರ, ಭಾರತದ ಟೆಕ್ ಕ್ಯಾಪಿಟಲ್ ಎಂದೇ ಗುರುತಿಸಲ್ಪಟ್ಟು ಪ್ರಥಮ ಸ್ಥಾನದಲ್ಲಿದ್ದ … Continued

ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ … Continued

ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ಹಿರೇನಾಗವಲ್ಲಿ ಸ್ಫೋಟ ಪ್ರಕರಣ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಮತ್ತಿತರ ವಸ್ತು ಸ್ಫೋಟಗೊಂಡು 6 ಮಂದಿ ಮೃತಪಟ್ಟ ಘಟನೆ ವಿಧಾನ ಪರಿಷತ್‍ನಲ್ಲಿ ಗುರುವಾರ ಪ್ರತಿಧ್ವನಿಸಿತು.ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಒಂದು ತಿಂಗಳ ಅವಯಲ್ಲಿ ಎರಡು ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಸ್ಫೋಟ ನಡೆದು ಐವರು ಅಮೂಲ್ಯ ಜೀವ ಕಳೆದುಕೊಂಡರು. ಈ ಬಗ್ಗೆ … Continued

ಸದನದಲ್ಲಿ ಶರ್ಟ್ ಬಿಚ್ಚಿ ದುರ್ವತನೆ ತೋರಿದ ಶಾಸಕ ಸಂಗಮೇಶ್ ಸಸ್ಪೆಂಡ್

ಬೆಂಗಳೂರು: ಸದನದಲ್ಲಿ ದುರ್ವತನೆ ತೋರಿದ ಕಾರಣಕ್ಕೆ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಿ ಸ್ಪೀಕರ್‌ ಕಾಗೇರಿ ಆದೇಶ ಮಾಡಿದ್ದಾರೆ. ಒಂದು ರಾಷ್ಟ್ರ ಒಂದು ಚುನಾವಣೆ ವಿಷಯವಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪನೆ ಮಡುತ್ತಿದ್ದಾಗ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಅನುಚಿತವಾಗಿ ವರ್ತನೆ ಮಾಡಿದ್ದರು. ಇದರಿಂದ ಸದನವನ್ನು … Continued