ಯತ್ನಾಳ ಪ್ರಖರ ಹಿಂದುತ್ವವಾದಿ: ಸಚಿವ ಈಶ್ವರಪ್ಪ

ಕಾಂಗ್ರೆಸ್‌ ಹಾಗೂ ಮುಸ್ಲಿಂ ಲೀಗ್‌ ಹೊರತುಪಡಿಸಿ ಯಾವುದೇ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಬಿಜೆಪಿಯಲ್ಲಿ ಮಡಿವಂತಿಕೆ ಎಂಬುದಿಲ್ಲ, ಆದರೆ ಕಾಂಗ್ರೆಸ್‌ ದೇಶವನ್ನು ದಿವಾಳಿ ಮಾಡಿದ ಪಕ್ಷವಾಗಿದ್ದರೆ, ಮುಸ್ಲಿಂ ಲೀಗ್‌ ಪಕ್ಷ ದೇಶ ವಿರೋಧಿ ಪಕ್ಷವಾಗಿದೆ ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಜೆಡಿಎಸ್‌ ಬಿಜೆಪಿಗೆ ಕೈಕೊಟ್ಟಿದೆ. ಜೆಡಿಎಸ್‌ ಕೈಕೊಡುವುದರಲ್ಲಿ … Continued

ನೂತನ ವಿಜಯನಗರ ಜಿಲ್ಲೆಗೂ ೩೭೧ ಜೆ ಸೌಲಭ್ಯ:ಸರ್ಕಾರ ಆದೇಶ

ನೂತನ ವಿಜಯನಗರ ಜಿಲ್ಲೆಗೆ ಸಂವಿಧಾನದ 371 ಜೆ ವಿಧಿ ಅಡಿ ಎಲ್ಲ ಸವಲತ್ತು ಸಿಗುವಂತೆ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371 ಜೆ ವಿಧಿ ಅಡಿ ಸಿಗುವ ಸವಲತ್ತುಗಳು ನೂತನ ವಿಜಯನಗರ ಜಿಲ್ಲೆಗೂ ಸಿಗಲಿದೆ. ವಿಧಿಯಲ್ಲಿ ಹಲವು ತಿದ್ದುಪಡಿಗಳನ್ನೂ ರಾಜ್ಯ ಸರಕಾರ ಮಾಡಿದೆ. ಪ್ಯಾರಾ 2 (ಇ)ನಲ್ಲಿ ‘ಮತ್ತು … Continued

ಆರೋಪ-ಪ್ರತ್ಯಾರೋಪ ಬಿಟ್ಟು ಪಂಚಮಸಾಲಿ ಸಮಾಜ ೨ಎ ಸೇರ್ಪಡೆಗೆ ಒಂದಾಗಿ

ಬೆಂಗಳೂರು:ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬಿಟ್ಟು ಸಮುದಾಯದ ಹಿತಕ್ಕಾಗಿ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ಪಕ್ಷಾತೀತವಾಗಿ ಹೋರಾಡಬೇಕೆಂದು ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘ ಒತ್ತಾಯಿಸಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ನಮ್ಮಲ್ಲಿ ಒಡಕು ಮೂಡುವುದು ಸರಿಯಲ್ಲ. ಸಮುದಾಯದ ಹಿತಕ್ಕಾಗಿ ಎಲ್ಲರೂ ಕೈ ಜೋಡಿಸಬೇಕು … Continued

ರಾಯಚೂರು ವಿವಿ ಕ್ಯಾಂಪಸ್‌ ನಿರ್ಮಾಣಕ್ಕೆ ೬೦೦ ಕೋಟಿ ರೂ. ಬೇಡಿಕೆ

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯ ಸಮಗ್ರ ಕ್ಯಾಂಪಸ್‌ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ ೬೦೦ ಕೋಟಿ ರೂ. ಅನುದಾನ ಕೋರಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಕುಲಪತಿ ಪ್ರೊ. ಹರೀಶ ರಾಮಸ್ವಾಮಿ ಹೇಳಿದರು. ಕ್ಯಾಂಪಸ್‌ ನಿರ್ಮಾಣದ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಜನಪ್ರತಿನಿಧಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಕುಲಪತಿಯಾಗಿ ನೇಮಕಗೊಂಡ ೧೦೦ ದಿನಗಳಲ್ಲಿ ಸಾಕಷ್ಟು ಕೆಲಸಗಳಾಗಿವೆ. ಎಲ್ಲರಿಂದ … Continued

ತಿಂಗಳಿಗೊಮ್ಮೆ ರಾಜ್ಯದಲ್ಲಿ ಸ್ಫೋಟಕಗಳ ಆಡಿಟ್:ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ … Continued

ಬಿಎಂಟಿಸಿ ಪ್ರಯಾಣ ದರ ಹೆಚ್ಚಳ ಈಗ ನಿಚ್ಚಳ

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಬಿಸಿ ಸದ್ಯದಲ್ಲೇ ತಟ್ಟುವ ಸಾಧ್ಯತೆ ನಿಚ್ಚಳವಾಗಿದೆ. ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಎಂಟಿಸಿ ದರ ಏರಿಕೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳಾಗುತ್ತದೆ ಎಂದು ಹೇಳಿದ್ದಾರೆ. ಬಿಎಂಟಿಸಿ ಬಸ್‌ ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ … Continued

ಕಾಂಗ್ರೆಸ್‌ಗೆ ಬಾಹ್ಯ ಬೆಂಬಲದ ಪತ್ರ ನೀಡಿದ ಶರತ್‌ ಬಚ್ಚೇ ಗೌಡ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶಾಸಕ ಶರತ್ ಬಚ್ಚೇಗೌಡ ಗುರುವಾರ (ಫೆ.೨೫) ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‍ಗೆ ಬಾಹ್ಯ ಬೆಂಬಲ ನೀಡುವ ಅಧಿಕೃತ ಪತ್ರ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಆವರಣದಲ್ಲಿ ನಡೆದ ಕಾರ್ಕ್ರಮದಲ್ಲಿ ಶರತ್ ಬಚ್ಚೇಗೌಡ ನೀಡಿದ ಬಾಹ್ಯ ಬೆಂಬಲವನ್ನು ಕಾಂಗ್ರೆಸ್ ಶಾಸಕಾಂಗ … Continued

ಡಿಪ್ಲೊಮಾ ಪಠ್ಯ ಕ್ರಮದಲ್ಲಿ ಆಮೂಲಾಗ್ರ ಪರಿಷ್ಕರಣೆ

ಮಂಗಳೂರು: ಶಿಕ್ಷಣ ಕ್ಷೇತ್ರವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಅನೇಕ ಕ್ರಾಂತಿಕಾರಕ ಸುಧಾರಣೆಗಳನ್ನು ರಾಜ್ಯ ಸರಕಾರ ಕೈಗೊಂಡಿದ್ದು, ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮಂಗಳೂರಿನಲ್ಲಿಂದು ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ʼಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌, ರೀಸರ್ಚ್‌ ಡಿಸೈನ್‌ ಲ್ಯಾಬ್‌ ಮತ್ತು ಇಂಡಸ್ಟ್ರೀ … Continued

ತಹಶೀಲ್ದಾರನ ಕೊಲೆಗೆ ಯತ್ನ: ತಂದೆ-ಮಗನ ಬಂಧನ

ಬಾಗಲಕೋಟೆ: ಸಹೋದರರ ನಡುವಿನ ಆಸ್ತಿ ವಿವಾದದಲ್ಲಿ ಆಸ್ತಿ ಪತ್ರದಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜಮಖಂಡಿಯಲ್ಲಿ ನಡೆದಿದೆ. ರೈತ ಲಕ್ಷ್ಮಣ ಕಿತ್ತೂರು (70) ಹಾಗೂ ಮಗ ಬಸವರಾಜ್‌ ಕಿತ್ತೂರು (48) ಎಂಬುವರಿಂದ ಕೃತ್ಯ ನಡೆದಿದೆ. ಘಟನೆ ಖಂಡಿಸಿ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಪ್ರತಿಭಟನೆ … Continued

ಬಿಜೆಪಿ ರಾಜ್ಯ ಘಟಕದ ವಕ್ತಾರರ ನೇಮಕ

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ವಕ್ತಾರರ ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರಾಗಿ ಕ್ಯಾ.ಗಣೇಶ ಕಾರ್ಣಿಕ, ವಕ್ತಾರರಾಗಿ ಜಗ್ಗೇಶ, ರಾಜೂಗೌಡ, ರಾಜಕುಮಾರ ಪಾಟೀಲ ತೇಲ್ಕೂರ, ಚಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಗಿರಿಧರ ಉಪಾಧ್ಯಾಯ, ಪಿ.ರಾಜೀವ, 0ಎಂ.ಬಿ.ಜಿರಲಿ, ಮಹೇಶ್‌ ನೇಮಕಗೊಂಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ತಿಳಿಸಿದ್ದಾರೆ.