೩೫೦೦ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿ: ಕಾರಜೋಳ

ಬೆಂಗಳೂರು; ರಾಜ್ಯದಲ್ಲಿ 2021-22 ನೇ ಸಾಲಿನಲ್ಲಿ 3500 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ ‌ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಯೋಗಿ ಇಲಾಖೆ ಖಾತೆ ಸಚಿವ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ವಿಸ್ತೃತ ಯೋಜನಾ ವರದಿ ( ಡಿಪಿಆರ್) ಸಿದ್ಧಪಡಿಸಲು … Continued

ಉಪಚುನಾವಣೆ-೪ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸಿಎಂ ಬಿಎಸ್‌ವೈ

ಮುಂಬರುವ ಉಪಚುನಾವಣೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದರು. ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಯಾವುದೇ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲ್ಲ. ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ ಎಂದು ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಅಲ್ಲದೇ 3 … Continued

ಕಾಂಗ್ರೆಸ್‌ನಲ್ಲಿ ಮೂವರು ಸಿಎಂ ರೇಸ್‌ನಲ್ಲಿದ್ದಾರೆ: ರಾಮಲಿಂಗಾರೆಡ್ಡಿ

ಬಾಗಲಕೋಟೆ: ಮೂವರು ಕಾಂಗ್ರೆಸ್‌ ಮುಖಂಡರು ಸಿಎಂ ಹುದ್ದೆಯ ರೇಸ್‌ನಲ್ಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ನಂತರ ಎಲ್ಲ ಸೇರಿ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಕ್ಕೆ ಬಂದ ಮೇಲೆ ನಾವೆಲ್ಲಾ ತೀರ್ಮಾನಿಸುತ್ತೇವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ … Continued

ತನ್ವೀರ್‌ ಸೇಠ್‌ಗೆ ಜೆಡಿಎಸ್‌ಗೆ‌ ಆಹ್ವಾನ ನೀಡಿದ ಸಾ.ರಾ.ಮಹೇಶ

ಮೈಸೂರು: ಶಾಸಕ ತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ವಜಾ ಮಾಡಿದರೆ ಅವರನ್ನು ಜೆಡಿಎಸ್‍ಗೆ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ಮುಖಂಡ ಹಾಗೂ ಶಾಸಕ ಸಾ.ರಾ. ಮಹೇಶ ಹೇಳಿದರು. ತನ್ವೀರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ನಾವು ಯಾರ ಪಕ್ಷದಲ್ಲೂ ಬೆಂಕಿ ಹಚ್ಚಿಲ್ಲ. ಎಲ್ಲವು ಆ ಕ್ಷಣದಲ್ಲಿ ಆದ ನಿರ್ಧಾರ. ಇದರಿಂದ ತನ್ವೀರ್ … Continued

ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್‌ ಬಣ ರಾಜಕೀಯದ ಜಗಳ..?

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್‌ ಸೇಠ್‌ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್‌ಗೆ ದೂರು … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಶಂಕರ ಬಿದರಿ ಇಮೇಲ್‌ ಐಡಿ ಹ್ಯಾಕ್‌ !

ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಶಂಕರ್ ಬಿದರಿ ಅವರ ಇ-ಮೇಲ್​​ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್​ ಮಾಡಿದ್ದಾರೆ. ಇ-ಮೇಲ್‌ ಐಡಿಯನ್ನು ಅಪರಿಚಿತರು ಹ್ಯಾಕ್‌ ಮಾಡಿ ಇ-ಮೇಲ್‌ ಅಡ್ರೆಸ್‌ನಲ್ಲಿದ್ದ ಸ್ನೇಹಿತರಿಗೆ ಪಂಜಾಬ್‌ ನ್ಯಾಷನಲ್‌ ಖಾತೆ ಹಾಗೂ ಐಎಫ್‌ಎಸ್‌ಸಿ ಕೋಡ್‌ ಕಳಿಸಿದ್ದಾರೆ. ನಂತರ ಖಾತೆಗೆ ಹಣ ಜಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ನಾನೇ ಇ-ಮೇಲ್‌ ಕಳಿಸಿರಬಹುದು ಎಂದು … Continued

ಮೈಸೂರು ಮೇಯರ್‌ ಆಯ್ಕೆ ಗೊಂದಲಕ್ಕೆ ಸಿದ್ದರಾಮಯ್ಯನವರೇ ಕಾರಣ: ಸಾ.ರಾ.ಮಹೇಶ ತೀವ್ರ ವಾಗ್ದಾಳಿ

ಮೈಸೂರು: ಮೈಸೂರು ಮೇಯರ್‌ ಆಯ್ಕೆ ಗೊಂದಲಕ್ಕೆ ಸಿದ್ಧರಾಮಯ್ಯ ಅವರೇ ನೇರ ಕಾರಣ ಎಂದು ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟರು. ಸಿದ್ದರಾಮಯ್ಯ ಜೆಡಿಎಸ್‍ ಟೀಕಿಸಿದ್ದರಿಂದ ಇಂದು ನಮಗೆ ಮೇಯರ್ ಸ್ಥಾನ ಲಭಿಸಿದೆ. ನಾವಾಗಿ ಮೇಯರ್ ಸ್ಥಾನ ಬಯಸಿರಲಿಲ್ಲ. ಜೆಡಿಎಸ್‍ಅನ್ನು ಹಗುರವಾಗಿ ಕಂಡಿದ್ದರಿಂದ ನಾವು … Continued

ಅಕ್ರಮ ಜಿಲೆಟಿನ್‌: ಬೆಳಗಾವಿ ಜಿಲ್ಲೆಯಲ್ಲಿ ಐವರ ಬಂಧನ

ಬೆಳಗಾವಿ: ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಜಿಲ್ಲೆ ಗೋಕಾಕ್ ತಾಲೂಕಿನ ಹೊನಕಟ್ಟಿ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಗೋಪಾಲ್ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ಧಾಪುರ, ಭೀಮಪ್ಪ ಎಂದು ಗುರುತಿಸಲಾಗಿದ್ದು, ಇವರಿಂದ 156 ಜಿಲೆಟಿನ್ ಕಡ್ದಿ ಸೇರಿದಂತೆ ಹಲವು ಸ್ಫೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯದಲ್ಲಿ ಸ್ಫೋಟಗೊಳಿಸಲು … Continued

ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ. ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ … Continued

ಕಾನೂನುಗಳ ನಡುವೆ ಇರುವ ಅಸ್ಪಷ್ಟತೆ ನಿವಾರಣೆಯಾಗಬೇಕು: ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಪರಸ್ಪರ ದ್ವಂದ್ವಕಾರಿ  ಕಾನೂನುಗಳನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್ … Continued