ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ … Continued

ಬೆಂಗಳೂರು : ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತದಿಂದ ಆಟಗಾರ ನಿಧನ

ಬೆಂಗಳೂರು : ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ ಅವರು ಭಾನುವಾರ ಕ್ರಿಕೆಟ್ ಪಂದ್ಯವನ್ನಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. 2014-15ರ ಋತುವಿನಲ್ಲಿ ರಣಜಿ ಟ್ರೋಫಿ ಮುಕುಟ ಮುಡಿಗೇರಿಸಿಕೊಂಡ ಕರ್ನಾಟಕ ತಂಡದ ಸದಸ್ಯರಾಗಿದ್ದ ಅಕ್ಷಯ ಅವರು, ಈ ದುರದೃಷ್ಟಕರ ಘಟನೆ ನಡೆದಾಗ ಕೆಎಸ್‌ಸಿಎ (KSCA) ಮೂರನೇ ಡಿವಿಷನ್ … Continued

ಕಲಬುರಗಿ : ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಇತ್ತೀಚೆಗಷ್ಟೇ ನಡೆದಿದ್ದ ನೀಟ್ (NEET)  ಪರೀಕ್ಷೆ ಬರೆದಿದ್ದ ವಿದ್ಯಾರ್ಥನಿ ಆತ್ಮಹತ್ಯೆ ಮಾಡಿಕೊಂಡ ಧೃತಿಗೆಡಿಸುವ ಘಟನೆ ಕಲಬುರಗಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಕಲಬುರಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಭಾಗ್ಯಶ್ರೀ ಇತ್ತೀಚೆಗೆ ಪ್ರಕಟವಾದ … Continued

ಭಟ್ಕಳದಲ್ಲಿ ದುರಂತ; ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ನೀರು ಪಾಲು

ಕಾರವಾರ : ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ನೀರು ಪಾಲಾದ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ​ಭಟ್ಕಳ ತಾಲೂಕಿನ … Continued

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ಶನಿವಾರ (ಮೇ 23) ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವ್ಯವಸ್ಥೆಯಡಿ ಬೆಂಗಳೂರಿನ ಕಾರ್ಮಿಕರು ಇನ್ಮುಂದೆ ಮಾಸಿಕ ಕನಿಷ್ಠ 23,376 ರೂಪಾಯಿ ವೇತನ ಪಡೆಯಲಿದ್ದಾರೆ. ಈ ನಿರ್ಧಾರವನ್ನು ಪ್ರಕಟಿಸಿದ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಅವರು, “ಈ ಕ್ರಮವು ಕಾರ್ಮಿಕರ … Continued

ಅಡಕೆ ತೋಟಗಳಿಗೆ ರಾಸಾಯನಿಕ ಸಿಂಪಡಣೆ : ಜೇನು ಸಂಕುಲಗಳು ನಾಶ

ಶಿರಸಿ: ಪಶ್ಚಿಮ ಘಟ್ಟಗಳ ಜೀವವೈವಿಧ್ಯದ ತವರೂರಾದ ಮಲೆನಾಡಿನಲ್ಲಿ ಪ್ರಕೃತಿ ಮತ್ತು ಕೃಷಿ ಒಂದಕ್ಕೊಂದು ಪೂರಕವಾಗಿ ಸಾಗುತ್ತಾ ಬಂದಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ಶಿರಸಿ ಸುತ್ತಮುತ್ತಲಿನ ಅನೇಕ ಕಡೆ ಜೇನುನೊಣಗಳ ಸಾಮೂಹಿಕ ಸಾವಿನ ಘಟನೆಗಳು ಕೃಷಿ ಮತ್ತು ಈ ಸೂಕ್ಷ್ಮ ಪರಿಸರ ವ್ಯವಸ್ಥೆಯ ಸಮತೋಲನ ಬಿಗಡಾಯಿಸುತ್ತಿರುವುದಕ್ಕೆ ಮುನ್ಸೂಚನೆಯಂತೆ ಕಂಡುಬರುತ್ತಿದೆ. ಅಡಕೆ ಮುಗುಳು (ಹೂಗೊಂಚಲು) ಉದುರದಂತೆ ತಡೆಯಲು ಮತ್ತು … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾಗಿ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಮತ್ತೆ ತೀವ್ರತೆ ಪಡೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ … Continued

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ … Continued

ಬೆಂಗಳೂರಲ್ಲಿ ಭಾರಿ ವಂಚನೆ: 3 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಖದೀಮರು ಎಸ್ಕೇಪ್

ಬೆಂಗಳೂರು : ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿನಡೆದ  ಸಿನಿಮೀಯ ಶೈಲಿಯ ಹೈ-ಪ್ರೊಫೈಲ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಖದೀಮರು ಪಕ್ಕಾ ಪ್ಲಾನ್ ಮಾಡಿ ಬರೋಬ್ಬರಿ 1.85 ಕೆಜಿ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ರಸಿದ್ಧ ನಾಗರತ್‌ ಪೇಟೆಯ “ಮೆಹ್ತಾ ಜ್ಯುವೆಲ್ಲರಿ” (Mehta Jewellery) ಮಾಲೀಕರು ಈ ಬೃಹತ್ ವಂಚನೆಗೆ ಒಳಗಾದವರು ಎನ್ನಲಾಗಿದೆ. ಉದ್ಯಮಿ ನೀಡಿರುವ … Continued

ಬೆಂಗಳೂರು : 35 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; 8 ಆರೋಪಿಗಳ ಬಂಧನ

ಬೆಂಗಳೂರು : ಇತ್ತೀಚಿನ ದಿನಗಳಲ್ಲೇ ಬೆಂಗಳೂರಿನಲ್ಲಿ ಅತ್ಯಂತ ಬೃಹತ್ ಎನ್ನಲಾದ ಅಂತರರಾಜ್ಯ ಮಾದಕ ವಸ್ತು ಜಾಲವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್‌ನ ಉತ್ತರ ವಿಭಾಗದ ಪೊಲೀಸರು ನಡೆಸಿದ ಈ ಮಹತ್ವದ ಕಾರ್ಯಾಚರಣೆಯಲ್ಲಿ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಎರಡು ಕಾರುಗಳನ್ನು ಜಪ್ತಿ … Continued