ಕರ್ನಾಟಕ ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು

ಬಾಗಲಕೋಟೆ/ ದಾವಣಗೆರೆ : ಕರ್ನಾಟಕದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಜಯಗಳಿಸಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ ಮೇಟಿ ಗೆಲುವಿನ ನಗೆ ಬೀರಿದರೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಜಯಗಳಿಸಿದ್ದಾರೆ. ಎಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ … Continued

ಗದಗ : ಜಾತ್ರೆಯಲ್ಲಿ ಅವಘಡ ; ಬ್ರೇಕ್ ಡ್ಯಾನ್ಸ್ ತೊಟ್ಟಿಲು ಮುರಿದುಬಿದ್ದು ಹಲವರಿಗೆ ಗಾಯ

ಗದಗ : ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿನ  ಬ್ರೇಕ್ ಡ್ಯಾನ್ಸ್  ತೊಟ್ಟಿಲು ಕಟ್ ಆಗಿ ಕೆಳಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಭಾನುವಾರ ರಾತ್ರಿ 9ರ ಸುಮಾರಿಗೆ ನಡೆದಿದೆ ಎನ್ನಲಾಗಿದ್ದು, ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ತೊಟ್ಟಿಲಿನಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಸದ್ದು ಕೇಳಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆ ; ಮುನ್ಸೂಚನೆ

ಬೆಂಗಳೂರು: ಮೇ 4ರಿಂದ 9ರ ವರೆಗೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ ಸೇರಿದಂತೆ 23 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಮೇ 4ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ … Continued

ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಗಂಡ

ತುಮಕೂರು :  ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಲ್ಕೆರೆ ಗ್ರಾಮದಲ್ಲಿ ಶನಿವಾರ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅರ್ಚಕರೊಬ್ಬರು ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಲ್ಕೆರೆ ಗ್ರಾಮದ ನಿವಾಸಿ ಶಿವಣ್ಣ (40) ಮತ್ತು ಅವರ ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ (5) ಎಂದು … Continued

ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ಯೋಗೇಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿ ಶಾಸಕತ್ವ ರದ್ದು

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಿ ಕರ್ನಾಟಕ ವಿಧಾನಸಭೆ ಶನಿವಾರ (ಮೇ 2) ಅಧಿಕೃತ ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನಾಂಕವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ವಿನಯ ಕುಲಕರ್ಣಿ … Continued

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ  ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್‌ ಸ್ಟಾರ್ಟ್‌ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ -ಮುನ್ಸೂಚನೆ

ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆ (IMD) ಮಹತ್ವದ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ, ಗುಡುಗು ಸಹಿತ ಬಿರುಗಾಳಿ ಹಾಗೂ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಈ ಹವಾಮಾನ ಬದಲಾವಣೆ ಕಂಡುಬರಲಿದ್ದು, ಮೇ 3ರ ವರೆಗೂ ದಕ್ಷಿಣ … Continued

ಮೇ 1ರಂದು ಗಂಗಾಧರ ಕೊಳಗಿಯವರ 2 ಕೃತಿಗಳ ಅವಲೋಕನ

ಸಿದ್ದಾಪುರ : ಸಾಹಿತಿ ಹಾಗೂ ಪತ್ರಕರ್ತ ಗಂಗಾಧರ ಕೊಳಗಿ ಅವರ ʼಕಾಡಂಚಿನ ಯಾನʼ ಹಾಗೂ ʼಮನಸು ಆಕಾಶದ ನೀಹಾರಿಕೆʼ ಎಂಬ ಎರಡು ಮರುಮುದ್ರಣ ಕೃತಿಗಳ ಅವಲೋಕನ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಲಯನ್ಸ್‌ ಬಾಲಭವನದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಪೌರ್ಣಿಮಾ ಸಾಹಿತ್ಯ ವೇದಿಕೆ ಸಿದ್ದಾಪುರ ಹಾಗೂ ಪ್ರಯೋಗ ಸ್ವಸೇಸಂ ಸಿದ್ದಾಪುರ … Continued

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಜೆ ಆರ್ಭಟಿಸಿದ ಭೀಮರೂಪಿ ಮಳೆ ಭೀಕರ ದುರಂತಕ್ಕೆ ಕಾರಣವಾಗಿದೆ. ನಗರದ ಹೃದಯಭಾಗದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮಳೆಗಾಗಿ ಆಶ್ರಯ ಪಡೆದಿದ್ದ ಆರು ವರ್ಷದ ಮಗು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಸಂಜೆ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಮತ್ತು … Continued