ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ 15ನೇ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ನಿರಾಕರಿಸಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ … Continued

ಸಿಎಂ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಸೋಮವಾರ ನೋಟಿಸ್‌ ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ವರುಣಾ ಕ್ಷೇತ್ರದ ಮತದಾರ ಕೆ. … Continued

ಕೊಲ್ಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್ ಗಳ ಮೇಲೆ ಶಿವಸೇನೆ ಪುಂಡಾಟಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಇಂದು, ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಬೆಳಗಾವಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ ನಡೆಸಲು … Continued

ಕಾರವಾರ | ಮಾದಕ ವಸ್ತುಗಳನ್ನು ನಿರ್ಬಂಧಿಸಿದ್ದಕ್ಕೆ ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ, ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಕುಖ್ಯಾತ ರೌಡಿಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಎಂಬವರು … Continued

ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued

ಶಿವಮೊಗ್ಗ | ಖ್ಯಾತ ಸ್ತ್ರೀರೋಗ ತಜ್ಞೆ-ಪುತ್ರ ಆತ್ಮಹತ್ಯೆ

ಶಿವಮೊಗ್ಗ : ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ ಹೊಮ್ಮರಡಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಅಶ್ವತ್ಥ ಬಡಾವಣೆಯ ಅವರ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಇಬ್ಬರೂ ಪ್ರತ್ಯೇಕ ಕೋಣೆಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡಾ. ಜಯಶ್ರೀ … Continued

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ 15,000 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ … Continued

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ(ಡಿಸೆಂಬರ್‌ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ … Continued

ಗಂಗಾವತಿ : ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟದ 574 ಮೆಟ್ಟಿಲುಗಳನ್ನು ಏರಿದ ಕಲಾವಿದೆ ; ವೀಡಿಯೊ ವೈರಲ್‌

ಕೊಪ್ಪಳ : ಭರತನಾಟ್ಯ ಕಲಾವಿದೆಯೊಬ್ಬರು ಭರತನಾಟ್ಯ ಮಾಡುತ್ತಲೇ 575 ಮೆಟ್ಟಿಲುಗಳನ್ನು ಏರಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಯಾಗಿರುವ ಹರ್ಷಿತಾ ಎಂಬವರು 8 ನಿಮಿಷ 54 ಸೆಕೆಂಡ್​ನಲ್ಲಿ ನೃತ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವನ್ನು ಏರಿದ್ದಾರೆೆಂದು ವರದಿಯಾಗಿದೆ. ಹನುಮ ವ್ರತಾಚರಣೆ ಸಂದರ್ಭದಲ್ಲಿ, ಪಾಲಕರ ಮಾರ್ಗದರ್ಶನದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ನಡೆಸುತ್ತ ಅವರು ಶಿಖರವನ್ನು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ.3ರಿಂದ ಎರಡ್ಮೂರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ … Continued