ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್‌ ತಿಂಗಳು ಚಳಿಗಾಲವಾಗಿದ್ದರೂ ನ.21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ … Continued

ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರರಿಗೆ ಕಾಂತಾವರ ಕನ್ನಡ ಸಂಘದ ʼಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿʼ

ಉಡುಪಿ: ಕಾಂತಾವರ ಕನ್ನಡ ಸಂಘವು ಕೊಡಮಾಡುವ ಸಾಹಿತ್ಯ, ಸಂಶೋಧನೆ, ಪತ್ರಿಕೋದ್ಯಮ, ಶಿಕ್ಷಣ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಜನ ಸಾಧಕರಿಗೆ ಸಂಘದ ಪ್ರತಿಷ್ಠಿತ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಲ್ಲದೆ ಓರ್ವರಿಗೆ ವಾರ್ಷಿಕ ಗೌರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದನ್ನು ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಕನ್ನಡ ಸಂಘದ … Continued

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದರೇ ಡಿಕೆ ಶಿವಕುಮಾರ..?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಹಗ್ಗ-ಜಗ್ಗಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ (ಡಿಕೆಎಸ್) ಅವರು ಬುಧವಾರ ಹೊಸ ಟ್ವಿಸ್ಟ್‌ ನೀಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಕುಮಾರ, “ನಾನು ಶಾಶ್ವತವಾಗಿ … Continued

ಬೆಂಗಳೂರಲ್ಲಿ ಹಾಡಹಗಲೇ 7 ಕೋಟಿ ರೂ. ದರೋಡೆ ; ಎಟಿಎಂಗೆ ಹಣ ತುಂಬುವ ವಾಹನದಿಂದ ಹಣ ದೋಚಿದ ಗ್ಯಾಂಗ್…!

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಹಾಡಹಗಲೇ ಭಾರೀ ದರೋಡೆ ನಡೆದಿದ್ದು, ಕೇಂದ್ರ ಸರ್ಕಾರದ ತೆರಿಗೆ ಅಧಿಕಾರಿಗಳು ಎಂದು ಹೇಳಿಕೊಂಡ ದುಷ್ಕರ್ಮಿಗಳು ಎಟಿಎಂಗೆ ಹಣ ತುಂಬುವ ವಾಹನವನ್ನು ತಡೆದು ₹7 ಕೋಟಿ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಜಯನಗರದ ಅಶೋಕ ಸ್ತಂಭದ ಬಳಿ ಈ ಘಟನೆ ನಡೆದಿದ್ದು, ತೆರಿಗೆ ಅಧಿಕಾರಿಗಳಂತೆ ನಟಿಸಿದ ಕಳ್ಳರು “ದಾಖಲೆಗಳನ್ನು ಪರಿಶೀಲಿಸಬೇಕು ಮತ್ತು ನಗದು … Continued

ಗೋಕರ್ಣ : ಕುಡ್ಲೇ ಬೀಚ್‌ನಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆಯ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ (Kudle Beach) ಸೋಮವಾರ ಸಮುದ್ರದಲ್ಲಿ ಮುಳುಗಿತ್ತಿದ್ದ ವಿದೇಶಿ ಮಹಿಳೆಯನ್ನು (Woman) ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ರಕ್ಷಣೆ ಮಾಡಲಾದ ಮಹಿಳೆಯನ್ನು ಕಜಕಿಸ್ತಾನ ಮೂಲದ (Kazakhstan) ಐದಾಲಿ (25) ಎಂದು ಗುರುತಿಸಲಾಗಿದೆ. ಕಜಕಿಸ್ತಾನ ಮೂಲದ ದಂಪತಿ ಕುಡ್ಲೆ ಬೀಚ್‌ನಲ್ಲಿ ಈಜಲು ಹೋದಾಗ ಮಹಿಳೆ ಸಮುದ್ರದ ಅಲೆಗೆ … Continued

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (B.M. Parvathi) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಅವರನ್ನು ಸೋಮವಾರ ಅಪರಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಮತ್ತು … Continued

ಪ್ರಧಾನಿ ಮೋದಿ ಭೇಟಿಯಾಗಿ ಐದು ಅಂಶಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ( ನವೆಂಬರ್‌ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ರೂ.ಗಳ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ; 5 ಜಿಲ್ಲೆಗಳಿಗೆ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ, ಮುಂದಿನ ಒಂದು ವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತೀವ್ರ ಶೀತಗಾಳಿಯ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ … Continued

ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ; ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ…!

ಬೆಂಗಳೂರು: ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯೊಬ್ಬರಿಗೆ ಆರು ತಿಂಗಳ ಅವಧಿಯಲ್ಲಿ ಸುಮಾರು ₹ 32 ಕೋಟಿಗಳಷ್ಟು ಬೃಹತ್ ಮೊತ್ತದ ವಂಚನೆ ಮಾಡಲಾಗಿದೆ. ‘ಡಿಜಿಟಲ್ ಬಂಧನ’ (Digital Arrest) ಹೆಸರಿನಲ್ಲಿ ಈ ವಂಚನೆ ನಡೆಸಲಾಗಿದ್ದು, ಸಿಬಿಐ (CBI) ಅಧಿಕಾರಿಗಳೆಂದು ನಟಿಸಿದ ವಂಚಕರು ಮಹಿಳೆಯನ್ನು ನಿರಂತರವಾಗಿ ವೀಡಿಯೊ ಕಣ್ಗಾವಲಿನಲ್ಲಿರಿಸಿ, ಹಣ ಕಳುಹಿಸುವಂತೆ ಒತ್ತಾಯಿಸಿ 187 ಬ್ಯಾಂಕ್ ವರ್ಗಾವಣೆಗಳ ಮೂಲಕ … Continued

ಕುಮಟಾ : ಕೆನರಾ ಕಾಲೇಜು ಸೊಸೈಟಿ ಉಪಾಧ್ಯಕ್ಷ ದಿನಕರ ಕಾಮತ ನಿಧನ

ಕುಮಟಾ : ಶಿಕ್ಷಣ ತಜ್ಞ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಉಪಾಧ್ಯಕ್ಷ ದಿನಕರ ಕಾಮತ (83)ಶನಿವಾರ ರಾತ್ರಿ ಹೃಧಯಾಘಾತದಿಂದ ನಿಧನರಾಗಿದ್ದಾರೆ. ಹೆಗಡೆಯ ಶಾಂತಿಕಾಂಭ ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ, ಮುಖ್ಯಾಧ್ಯಾಪಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ದಿನಕರ ಕಾಮತ್‌ ಅವರು … Continued