ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ ಗಳಿಗೆ ಇನ್ಮುಂದೆ ನೇವಿ ಬ್ಲೂ ಪೀಕ್ ಕ್ಯಾಪ್‌

ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು ಇನ್ನು ಮುಂದೆ ಸ್ಲೋಚ್ ಟೋಪಿಗಳ ಬದಲಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಧರಿಸಲಿದ್ದಾರೆ. ಈ ಮೂಲಕ ಈಗ ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ಗೆ ರಾಜ್ಯ ಸರ್ಕಾರ ಗುಡ್​ ಬೈ ಹೇಳಿದೆ. ಈ ಹೊಸ ಮಾದರಿಯ ಕ್ಯಾಪ್​ಗಳು ತೆಲಂಗಾಣ ಪೊಲೀಸ್​ ಯೂನಿಫಾರಂನಿಂದ ಪ್ರೇರಿತವಾಗಿದ್ದು, ನಾಲ್ಕು ದಶಕಗಳಿಂದ ಕರ್ನಾಟಕದಲ್ಲಿ … Continued

ರೂಪುಗೊಂಡ ಮೊಂತಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ  ಉಂಟಾದ ಮೊಂತಾ ಚಂಡಮಾರುತದ ಕಾರಣದಿಂದಾಗಿ ಮುಂದಿನ ಕೆಲವು ದಿನಗಳವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಅಕ್ಟೋಬರ್ 28 ರಂದು ಕರ್ನಾಟಕದ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಅಕ್ಟೋಬರ್ 28 ರ ಬೆಳಿಗ್ಗೆ … Continued

ವೀಡಿಯೊ….| ಕಾರವಾರದಲ್ಲಿ ವಿಶ್ವದ ಅತಿ ದೊಡ್ಡ ಪತಂಗದ ಪ್ರಭೇದ ಪತ್ತೆ

ಕಾರವಾರ : ವಿಶ್ವದ ಅತಿದೊಡ್ಡ ಪತಂಗ ಪ್ರಭೇದಗಳಲ್ಲಿ ಒಂದಾದ ಅಟ್ಲಾಸ್ ಪತಂಗದ (Attacus atlas) ಅಸಾಧಾರಣ ಮಾದರಿಯನ್ನು ಇತ್ತೀಚೆಗೆ ಕಾರವಾರ ನಗರದ ಮಿತಿಯಲ್ಲಿರುವ ಗುಡ್ಡೆಹಳ್ಳಿಯಲ್ಲಿ ಗುರುತಿಸಲಾಗಿದೆ. ಈ ಗಮನಾರ್ಹವಾದ ಆವಿಷ್ಕಾರವನ್ನು ಸ್ಥಳೀಯರಾದ ರವಿಗೌಡ ಅವರು ಈ ಪ್ರದೇಶದಲ್ಲಿ ಚಾರಣ ದಂಡಯಾತ್ರೆಯ ಸಮಯದಲ್ಲಿ ಮಾಡಿದ್ದಾರೆ . ಸಾಮಾನ್ಯವಾಗಿ ಅದರ ಗಮನಾರ್ಹ ನೋಟದಿಂದಾಗಿ ಚಿಟ್ಟೆ ಎಂದು ತಪ್ಪಾಗಿ ಭಾವಿಸುವ … Continued

ಶಿವಮೊಗ್ಗ | ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕನಿಗೆ ತಿವಿದ ಹೋರಿ; ಆಘಾತಕಾರಿ ವೀಡಿಯೊ ವೈರಲ್‌

ಶಿವಮೊಗ್ಗ: ದೀಪಾವಳಿ ಹಬ್ಬದಂದು ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮಾಜಿ ಶಾಸಕರೊಬ್ಬರಿಗೆ ಹೋರಿಯೊಂದು ತಿವಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಬಳ್ಳಿಗಾವಿಯಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ವೀಕ್ಷಿಸಲು ಶಿಕಾರಿಪುರದ ಮಾಜಿ ಶಾಸಕ ಮಹಾಲಿಂಗಪ್ಪ ತೆರಳಿದ್ದರು. ಹೋರಿ ಬೆದರಿಸುವ ಸ್ಪರ್ಧೆ … Continued

ಒಂದು ಕ್ಷಣಕ್ಕೆ 2,817 ಕೋಟಿ ರೂ.ಗಳಷ್ಟು ಶ್ರೀಮಂತನಾದ ವಕೀಲ ; ಆದರೆ ನಂತರ ಆಗಿದ್ದು….

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಧಮ್ನೋಡ್‌ನಲ್ಲಿ, ನಂಬಲಾಗದ ವಿದ್ಯಮಾನವೊಂದು ನಡೆದಿದೆ. ವಕೀಲರು ಹಾಗೂ ಆ ಪ್ರದೇಶದಲ್ಲಿ ಖಾಸಗಿ ಶಾಲೆಯನ್ನು ನಡೆಸುತ್ತಿರುವ ವಿನೋದ್ ಡೊಂಗ್ಲೆ ಎಂಬವರು ಎಂದಿನಂತೆ ತಮ್ಮ ಡಿಮ್ಯಾಟ್ ಖಾತೆ ತೆರೆದಾಗ ಅವರಿಗೆ ಅಚ್ಚರಿ ಕಾದಿತ್ತು. ಯಾಕೆಂದರೆ ಅವರ ಬ್ಯಾಂಕ್‌ ಖಾತೆಯಲ್ಲಿ ಬ್ಯಾಲೆನ್ಸ್ 2,817 ಕೋಟಿ ರೂ.ಗಳಿವೆ ಎಂದು ಅದು ತೋರಿಸಿತು. ಇದನ್ನು ನೋಡಿ ಅವರು … Continued

ರೈತರಿಗೆ ವಂಚಿಸಿದ ‘ಪ್ರಕರಣ’; ಆರೋಪಿ ಪರ ಸಚಿವ ಜಮೀರ್ ಪ್ರಭಾವ ಬೀರಲು ಯತ್ನಿಸಿದರೆ..? ಆಡಿಯೋ ವೈರಲ್‌

ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ವಿರುದ್ಧದ ಪ್ರಕರಣದಲ್ಲಿ ಆರೋಪಿ ವ್ಯಕ್ತಿಯ ಪರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಲು ಮುಂದಾಗಿದ್ದರು ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಎಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚನೆ … Continued

ಮುಂದಿನ 2 ದಿನ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್‌ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ … Continued

ಕಿರುತೆರೆ ನಟಿ-ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಹಿಟ್‌ & ರನ್‌ ಪ್ರಕರಣ

ಬೆಂಗಳೂರು: ಕಿರುತೆರೆ ನಟಿ, ಬಿಗ್‌ ಬಾಸ್‌ (Bigg boss) ಮಾಜಿ ಸ್ಪರ್ಧಿ ದಿವ್ಯಾ ಸುರೇಶ ಅವರ ವಿರುದ್ಧ ಹಿಟ್ ಆ್ಯಂಡ್ ರನ್ ಆರೋಪ ಕೇಳಿಬಂದಿದೆ. ಅತಿ ವೇಗ ಮತ್ತು ನಿರ್ಲಕ್ಷದಿಂದ ಕಾರು ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ವೇಳೆಗೆ ಬೆಂಗಳೂರಿನ ಬ್ಯಾಟರಾಯನಪುರ … Continued

ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಇಂದು, ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ … Continued

ಹಾವೇರಿ | ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ; ಹೋರಿ ತಿವಿದು ಮೂವರು ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಹಾವೇರಿ ಜಿಲ್ಲೆಯ ವಿವಿಧೆಡೆ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಹಾಯ್ದು ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿಯ ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ ಕೋಡಿಹಳ್ಳಿ (75) ಎಂಬವರು ಮನೆಗೆ ಹೊರಟಿದ್ದ ವೇಳೆ … Continued