ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ವಿಡಿಯೋ | ಬೆಂಗಳೂರು : ಹೆಲ್ಮೆಟ್ ಇಲ್ಲದೆ ಹೋಗುತ್ತಿದ್ದ ಬೈಕ್ ಸವಾರನ ತಲೆ ಮೇಲೆ ಬಿದ್ದ ಮರದ ಕೊಂಬೆ ; ಗಂಭೀರ ಗಾಯ

ಬೆಂಗಳೂರು: ಮಹಾನಗರದ ರಾಜಾಜಿನಗರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ, ರಸ್ತೆಯ ಬದಿಯ ಒಣ ಮರದ ಬೃಹತ್ ಕೊಂಬೆಯೊಂದು ಬೈಕ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ 52 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ನಡೆದಿದೆಎಂದು ಹೇಳಲಾಗಿದೆ. ಈ ಘಟನೆ ರಾಮಮಂದಿರ ರಸ್ತೆಯಲ್ಲಿ ನಡೆದಿದ್ದು, ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ … Continued

ವಿಶ್ವದ ಎಲ್ಲ ದೇಶಗಳಿಗೂ ಭೇಟಿ ನೀಡಿ ದಾಖಲೆ ಬರೆದ ಬೆಂಗಳೂರು ಮೂಲದ ಗಿಟಾರ್‌ ವಾದಕ ಬೆನ್ನಿ ಪ್ರಸಾದ…!

ಬೆಂಗಳೂರು ಮೂಲದ ಹೆಸರಾಂತ ಗಿಟಾರ್ ವಾದಕ ಮತ್ತು ಜಾಗತಿಕ ಪ್ರವಾಸಿ ಬೆನ್ನಿ ಪ್ರಸಾದ (Benny Prasad) ಅವರು ತಮ್ಮ ಜೀವಮಾನದ ಅಪರೂಪದ ಪ್ರವಾಸದ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಜಗತ್ತಿನ ಒಟ್ಟು 245 ದೇಶ ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿರುವ ಅವರು, ಅದಕ್ಕೆ ಪುರಾವೆಯಾಗಿ ವೀಸಾ ಮತ್ತು ಸೀಲ್‌ಗಳಿಂದ ತುಂಬಿ … Continued

ಪೈಪ್‌ ಸೋರಿಕೆಯಿಂದ ಶರಾವತಿ ಜಲವಿದ್ಯುತ್‌ ಕೇಂದ್ರದ ಒಳಗೆ ತುಂಬಿದ ನೀರು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ (ಜೂನ್ 25) ನಿಯಮಿತ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಒಳಪಡುವ ಈ ವಿದ್ಯುತ್ ಕೇಂದ್ರದ 7ನೇ ಘಟಕದಲ್ಲಿ (Unit 7) ನಿರ್ವಹಣಾ ಕೆಲಸ ನಡೆಯುತ್ತಿದ್ದಾಗ ದಿಢೀರನೆ … Continued

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ; ಕರ್ನಾಟಕದ 1.3 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌

ಬೆಂಗಳೂರು/ನವದೆಹಲಿ: ಕರ್ನಾಟಕದ ಮಾವು ಬೆಳೆಗಾರರ ತೀವ್ರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವು ಸ್ಪಂದಿಸಿದೆ. ರಾಜ್ಯದ ಪ್ರಮುಖ ಮಾವು ಉತ್ಪಾದನಾ ವಲಯವಾದ ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಉಂಟಾಗಿದ್ದ ಬೆಲೆ ಕುಸಿತ ಹಾಗೂ ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (MIS) ಅಡಿಯಲ್ಲಿ 1.3 ಲಕ್ಷ ಮೆಟ್ರಿಕ್ ಟನ್ (MT) ತೋತಾಪುರಿ ತಳಿಯ ಮಾವನ್ನು ಎಂಐಪಿ (MIP) ಖರೀದಿಸಲು … Continued

ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು … Continued

ನಟಿ ಕೃಷಿ ತಾಪಂಡ ಬೆಂಗಳೂರು ನಿವಾಸದಲ್ಲಿ ಉದ್ಯಮಿ ಶವವಾಗಿ ಪತ್ತೆ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಎಂದು ಗುರುವಾರ ವರದಿಯಾಗಿದೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಮಯದಲ್ಲಿ ನಟಿ ಕೃಷಿ ತಾಪಂಡ … Continued

ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅಧಿಕಾರ ಸ್ವೀಕರಿಸಿದ 3 ವಾರಗಳ ಬಳಿಕ ಇದೀಗ ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ಅವರು ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ … Continued

ಟ್ರಸ್ಟ್ ಹೆಸರಲ್ಲಿ ‘ಜಮೀನು ಲೂಟಿ’: ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಗಂಭೀರ ಆರೋಪ

ಟ್ರಸ್ಟ್ ಹೆಸರಲ್ಲಿ ಖರ್ಗೆ ಕುಟುಂಬದಿಂದ ಕರ್ನಾಟಕದಲ್ಲಿ ‘ಭೂ ಕಬಳಿಕೆ’ : ಬಿಜೆಪಿ ಗಂಭೀರ ಆರೋಪ ನವದೆಹಲಿ : ಕಾಂಗೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ತಮ್ಮ “ಅಧಿಕಾರ ಮತ್ತು ಪ್ರಭಾವ”ವನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬುಧವಾರ ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

ಅಬಕಾರಿ ಹೆಚ್ಚುವರಿ ಆಯುಕ್ತ-ಸಚಿವ ಸತೀಶ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ … Continued