34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ; ಸಂಪೂರ್ಣ ಪಟ್ಟಿ…

ಬೆಂಗಳೂರು : ರಾಜ್ಯದ 34 ನಿಗಮ/ಮಂಡಳಿ, ಪ್ರಾಧಿಕಾರಗಳಿಗೆ (boards and corporations) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರನ್ನು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿ ವರೆಗೆ ನೇಮಿಸಲಾಗಿದೆ. ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ ಶಿವಲೀಲಾ ವಿನಯ ಕುಲಕರ್ಣಿ – … Continued

ಕರ್ನಾಟಕದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರಿಂದ ಐದು ದಿನ ವ್ಯಾಪಕವಾಗಿ ಮಳೆಯಾಗಲಿದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ (ಸೆಪ್ಟೆಂಬರ್ 27) ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ. ಸೆಪ್ಟೆಂಬರ್ 27 ರಿಂದ ಕರ್ನಾಟಕದ ಉತ್ತರ ಭಾಗದಲ್ಲಿಯೇ ಜೋರಿದ್ದು, … Continued

ಗೋಕರ್ಣದ ಬೆಟ್ಟದ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾದ ಮಹಿಳೆ-ಮಕ್ಕಳನ್ನ ವಾಪಸ್ ರಷ್ಯಾಕ್ಕೆ ಕಳುಹಿಸಲು ಹೈಕೋರ್ಟ್ ಗ್ರೀನ್‌ ಸಿಗ್ನಲ್

ಬೆಂಗಳೂರು: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಿಗೆ ಅವರ ದೇಶ ರಷ್ಯಾಕ್ಕೆ ಮರಳಲು ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ನೀನಾ ಕುಟಿನಾ ಅವರ ಮಾಜಿ ಪತಿ ಮತ್ತು ಮಕ್ಕಳ ತಂದೆ ಇಸ್ರೇಲಿ ಪ್ರಜೆ ಡ್ರೋರ್ ಶ್ಲೋಮೋ ಗೋಲ್ಡ್‌ಸ್ಟೈನ್ … Continued

ಮೇರುಸಾಹಿತಿ ಎಸ್‌.ಎಲ್‌. ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ಎರಡು ದಿನಗಳ ಹಿಂದೆ (ಸೆಪ್ಟೆಂಬರ್‌ ೨೪) ನಿಧನರಾದ ಮೇರು ಸಾಹಿತಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ (SL Bhyrappa) ಾವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ( ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು, ಶುಕ್ರವಾರ (ಸೆ.೨೬) ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ … Continued

ಶಿರಸಿ : ಕೆಡಿಸಿಸಿ ಬ್ಯಾಂಕ್‌ ಚುನಾವಣೆ ದಿನಾಂಕ ಘೋಷಣೆ

ಶಿರಸಿ: ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಗುರುವಾರ (ಸೆಪ್ಟೆಂಬರ್‌ 25) ಪ್ರಕಟಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 25 ರಂದು ಮತದಾನ ನಡೆಯಲಿದೆ. ಚುನಾವಣೆ ಅಭ್ಯರ್ಥಿಗಳಿಗೆ ಅಕ್ಟೋಬರ್ 13 ರಿಂದ 17ರ … Continued

ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿ ಎಸ್‌.ಎಲ್‌. ಭೈರಪ್ಪ : ಕಮಲ ಹಾಸನ್‌

ಬೆಂಗಳೂರು : ಬುಧವಾರ ವಿಧಿವಶರಾದ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ (94) ಅವರ ಸಾವಿಗೆ ಬಹುಭಾಷಾ ನಟ ಕಮಲ ಹಾಸನ್‌ ಸಂತಾಪ ಸೂಚಿಸಿದ್ದಾರೆ. ಭೈರಪ್ಪನವರು ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿಗಳಲ್ಲಿ ಒಬ್ಬರಾಗಿದ್ದರು ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ʼನಮ್ಮ ಕಾಲದ ಕಥೆಗಾರರ ಪಿತಾಮಹ ಎಸ್. ಎಲ್. ಭೈರಪ್ಪ ಅವರು ನಮ್ಮೊಂದಿಗಿದ್ದಾಗಲೇ ಅವರನ್ನು … Continued

ಮೈಸೂರಿನಲ್ಲಿ ಸಾಹಿತಿ ಎಸ್‌.ಎಲ್‌. ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ. ಎಸ್ ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಬುಧವಾರ (ಸೆ.24) ನಿಧನರಾದ ಸಾಹಿತಿ ಎಸ್.ಎಲ್. ಭೈರಪ್ಪ (94) ಅವರ ಪಾರ್ಥಿವ ಶರೀರವನ್ನು ಇಂದು ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಸಾಹಿತಿ ಎಸ್‌.ಎಲ್‌.ಭೈರಪ್ಪ ನಿಧನ ; ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ನಾಳೆ, ಗುರುವಾರ (ಸೆಪ್ಟೆಂಬರ್‌ 25) ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ನಾಳೆ ಗುರುವಾರ ಬೆಳಿಗ್ಗೆ 8 ಎಲ್ಲ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಕುಟುಂಬದವರು … Continued

ಕನ್ನಡದ ಖ್ಯಾತ ಕಾದಂಬರಿಕಾರ, ʼಸರಸ್ವತಿ ಸಮ್ಮಾನ್‌ʼ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ (SL Bhyrappa) ಇಂದು, ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹಾಸನ ಜಿಲ್ಲೆಯ … Continued